ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು ತಡೆದು, ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿ ಮಾಡಲು ಚಿಂತನೆ ನಡೆಸುತ್ತಿದೆ.
ಇದನ್ನು ಪರಿಶೀಲಿಸಿ ರಾಷ್ಟ್ರ ಮಟ್ಟದಲ್ಲಿಯೂ ಜಾರಿ ಮಾಡಬೇಕು ಎಂದು ಒತ್ತಾಯಿಸಿ ವಿಶ್ವಸಂಸ್ಥೆಯು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದೆ.
ವಿಶ್ವಸಂಸ್ಥೆಯ ವರ್ಣಭೇದ ನೀತಿ ವಿರೋಧಿ ಘಟಕದ ಸದಸ್ಯೆ ಹಾಗೂ ಮಾನವ ಹಕ್ಕುಗಳ ತಜ್ಞೆ ಕೆ.ಪಿ. ಅಶ್ವಿನಿ ಮತ್ತು ಅಲ್ಪಸಂಖ್ಯಾತ ನೀತಿ ಘಟಕದ ಸದಸ್ಯ ನಿಕೋಲಸ್ ಲೆವ್ರತ್ ಭಾರತ ಸರಕಾರಕ್ಕೆ ಪತ್ರ ಬರೆದಿದ್ದು, ಕರ್ನಾಟಕ ಸರಕಾರ ರೂಪಿಸಿರುವ ರೋಹಿತ್ ವೇಮುಲ ಕಾಯ್ದೆಯ ಕರಡು ಪ್ರತಿಯಲ್ಲಿ ದಲಿತ ಮತ್ತು ಆದಿವಾಸಿಗಳಿಗೆ ನಿರ್ದಿಷ್ಟ ರಕ್ಷಣೆಯನ್ನು ಉಲ್ಲೇಖಿಸಿಲ್ಲ. ಹೀಗಾಗಿ ಕೇಂದ್ರ ಸರಕಾರವು ಈ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಿ, ದೇಶದ ಎಲ್ಲ ರಾಜ್ಯಗಳಿಗೆ ಅನ್ವಯವಾಗುವಂತೆ ಅನುಷ್ಠಾನ ಮಾಡಬೇಕು ಎಂದು ತಿಳಿಸಿದ್ದಾರೆ.
ದೇಶದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಳ ಸಮುದಾಯಗಳ ಮೇಲೆ ಜಾತಿ ಆಧಾರಿತ ತಾರತಮ್ಯದಂತಹ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿವೆ. ಅವುಗಳನ್ನು ಪರಿಹರಿಸಲು ರೋಹಿತ್ ವೇಮುಲಾ ಕಾಯ್ದೆಯನ್ನು ದೇಶದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳು, ಧಾರ್ಮಿಕ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ವ್ಯಕ್ತಿಗೆ ಯಾವುದೇ ತಾರತಮ್ಯ ಮಾಡಬಾರದು ಎಂದು ರೋಹಿತ್ ವೇಮುಲಾ ಕಾಯ್ದೆಯ ಕರಡಿನಲ್ಲಿರುವ 4ನೇ ವಿಧಿ ಹೇಳುತ್ತದೆ. ಆದರೆ ಇದನ್ನು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನು ಮಾನದಂಡಗಳಿಗೆ ಅನುಗುಣವಾಗಿ ರೂಪಿಸಬೇಕು ಎಂದು ಹೇಳಿದ್ದಾರೆ.
ರೋಹಿತ್ ವೆಮಿಲಾ ಕಾಯ್ದೆಯ ಕರಡಿನ 6 ರಿಂದ 9ನೇ ವಿಧಿಗಳು ಶಾಸನದಡಿಯಲ್ಲಿ ನಿಷೇಧಿಸಲಾದ ತಾರತಮ್ಯವನ್ನು ಶಿಕ್ಷಿಸಲು ಅನುಸರಿಸಲಾಗುವ ದಂಡಗಳನ್ನು ವಿವರಿಸುತ್ತವೆ. ಇದರಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿಗಳ ದಂಡವೂ ಸೇರಿದೆ. ಆದರೆ ಹಕ್ಕುದಾರರಿಗೆ ಪರಿಹಾರ ಮತ್ತು ಮರುಪಾವತಿಯನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯನ್ನು ಕಾಯ್ದೆಯಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಲಾಗಿದೆ.
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ದ್ವೇಷ ಭಾಷಣ, ತಪ್ಪು ಮಾಹಿತಿ ನೀಡುವುದನ್ನು ತಡೆಯಬೇಕು. ತಮ್ಮ ಹಕ್ಕಿನ ಬಗ್ಗೆ ಮಾತನಾಡುವವರ ಮೇಲೆ ಪ್ರತೀಕಾರದ ದಾಳಿ ನಡೆಸಲಾಗುತ್ತಿದ್ದು, ಆ ದಾಳಿಯ ವಿರುದ್ಧವಾಗಿ ರಕ್ಷಣೆ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ರೋಹಿತ್ ವೇಮುಲಾ ಕಾಯ್ದೆಯ ಪ್ರಸ್ತುತ ಕರಡಿನೊಳಗೆ ಶಿಕ್ಷೆಯ ವಿಧಾನ ಪರಿಶೀಲಿಸಲು ಕ್ರಮಕೈಗೊಳ್ಳಲಾಗುತ್ತದೆಯೇ? ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಸೇರಿದಂತೆ ಪ್ರಕರಣದಲ್ಲಿ ತಾರತಮ್ಯಕ್ಕೆ ಒಳಗಾದವರ ಬಳಿ ಯಾವ ರೀತಿಯಲ್ಲಿ ಸಮಾಲೋಚನೆ ನಡೆಸಲಾಗಿದೆ ? ಕಾನೂನು ಜಾರಿಗೆ ನಿರೀಕ್ಷಿತ ಸಮಯಮಿತಿ ಏನು? ಕಾಯ್ದೆ ರಚನಾ ಕರಡು ಸಮಿತಿಯು ಜಾತಿ ಮತ್ತು ಲಿಂಗ ಪ್ರಾತಿನಿಧ್ಯಕ್ಕೆ ಅನುಗುಣವಾಗಿದೆ ಇದೆಯೇ? ಪ್ರತಿನಿಧಿಗಳು ಕರ್ನಾಟಕದವರು ಎಂದು ಖಚಿತಪಡಿಸಿಕೊಳ್ಳಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಕೆಲವು ನಿರ್ದಿಷ್ಟ ಪ್ರಶ್ನೆಗಳನ್ನು ಪತ್ರದಲ್ಲಿ ಬರೆಯಲಾಗಿದೆ.
‘ಕರ್ನಾಟಕ ಸರಕಾರ ಪ್ರಕಟಿಸಿರುವ ರೋಹಿತ್ ವೇಮುಲಾ ಕಾಯ್ದೆಯ ಕರಡಿನಲ್ಲಿ ಸಮುದಾಯ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ, ಶೈಕ್ಷಣಿಕ ಪ್ರಗತಿ, ವಸತಿ, ಕಿರುಕುಳ ಮತ್ತು ಹಿಂಸಾಚಾರ ಮೊದಲಾದವುಗಳ ಉಲ್ಲೇಖಿಸಿಲ್ಲ. ವಿವಿಧ ಕ್ಷೇತ್ರಗಳಲ್ಲಿನ ಅಸಮಾನ ತಾರತಮ್ಯ ನಡೆಯುವಂತೆ ಉನ್ನತ ಶಿಕ್ಷಣದಲ್ಲಿಯೂ ತಾರತಮ್ಯ ನಿರಂತರವಾಗಿ ನಡೆಯುತ್ತಿದೆ. ಇದರ ವಿರುದ್ಧ ದಲಿತರು ಮತ್ತು ಆದಿವಾಸಿಗಳಿಗೆ ರಕ್ಷಣೆಯ ಬಗ್ಗೆ ಯಾವುದೇ ಮಾಹಿತಿಯನ್ನು ಕರಡಿನಲ್ಲಿ ತಿಳಿಸಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…