04.ಜಿ.25.ಬೀದರ :- ಬೀದರ ಜಿಲ್ಲೆಯ ಬೀದರ, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ ಹಾಗೂ ಸಂತಪೂರ(ಔ) ಶಿಶು ಅಭಿವೃದ್ಧಿಯೋಜನಾ ವ್ಯಾಪ್ತಿಯಲ್ಲಿನ ವಿವಿಧಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 148 ಅಂಗನವಾಡಿ ಕಾರ್ಯಕರ್ತೆ ಹಾಗೂ 270 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳನ್ನು ಭರ್ತಿಮಾಡಲು ಆನ್ಲೈನ್ ಮುಖಾಂತರ ಅರ್ಜಿ ಅಹ್ವಾನಿಸಲಾಗಿತ್ತು.
ಅದರಂತೆ ಆನ್ಲೈನ್ನಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 04 ಹಂತಗಳಿದ್ದು, ಇದರಲ್ಲಿ ಕೇಲವು ಅರ್ಜಿದಾರರಿಗೆ 01 ನೇ ಹಂತದಲ್ಲಿಯೇ “Application successfully uploaded” ಎಂಬ ಸಂದೇಶಗಳು ಅರ್ಜಿದಾರರ ಮೊಬೈಲ್ಗೆ ಸ್ವಿಕೃತವಾಗಿರುವುದರಿಂದ, ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 2,615 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 1,621 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.
ದಿನಾಂಕ:20-12-2024ರ ಸರಕಾರದ ಆದೇಶದಲ್ಲಿ ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ:26-12-2024 ರಿಂದ 05-01-2025ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಆದ್ದರಿಂದ ಅಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಪೂರ್ಣಗೊಳಿಸಲು ದಿನಾಂಕ:26-12-2024 ರಿಂದ 05-01-2025ರ ವರೆಗೆ ಕಾಲಾವಕಾಶ ನಿಗದಿಪಡಿಸಿದೆ.
ಈ ಹಿಂದೆ ಪ್ರಕಟಿಸಿರುವ ತಾತ್ಕಾಲಿಕ ಪಟ್ಟಿಯು ತಾತ್ಕಾಲಿಕವಾಗಿದ್ದು, ಈ ಮೇಲ್ಕಂಡ ಸೂಚಿಸಿರುವ ಅಪೂರ್ಣ ಅರ್ಜಿಗಳನ್ನು ಅರ್ಜಿದಾರರು ಪೂರ್ಣಗೊಳಿಸಿದ ನಂತರ ಸದರಿ ಅರ್ಜಿಗಳನ್ನು ಮತ್ತೊಮ್ಮೆ ತಾಲ್ಲೂಕು ಅರ್ಜಿ ಪರಿಶೀಲನಾ ಸಮಿತಿ ಅರ್ಜಿಗಳನ್ನು ಪರಿಶೀಲಿಸಿ, ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆ ಸಮಿತಿಗೆ ಶಿಫಾರಸ್ಸು ಸಲ್ಲಿಸಿದ ನಂತರ ಜಿಲ್ಲಾ ಸಮಿತಿ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗುವುದು. ಸದರಿ ತಾತ್ಕಾಲಿಕ ಪಟ್ಟಿಯಲ್ಲಿ ಅಪೂರ್ಣ ಅರ್ಜಿಗಳನ್ನು ಪರಿಗಣಿಸಿ, ಸ್ಥಳಿಯತೆ ಹಾಗೂ ಮೇರಿಟ್ (ಅಂಕಗಳ) ಆಧಾರದ ಮೇಲೆ ಪ್ರಕಟಿಸಲಾಗುವುದು.
ಅರ್ಜಿದಾರರು, ಯಾವುದೇ ಆಸೆ ಆಕಾಂಕ್ಷೆಗಳಿಗೆ ಒಳಗಾಗಬಾರದು ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://chat.whatsapp.com/CUtlsWntUkU31M8FTGAYy1
ಯಳಂದೂರು.13.ಜೂನ್.25:- ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗ ಬುದ್ಧ ಪ್ರಿಯ ಅಶೋಕ ಚಾರಿಟಬಲ್ ಟ್ರಸ್ಟ್ ವತಿಯಿಂದ ನಿವೃತ್ತಿ ಪದವಿ ಪೂರ್ವ ಶಿಕ್ಷಣ…
ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್…
ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…
ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…
ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…
ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…