01.ಡಿ.25.ಬೀದರ :- ಬೀದರ ಜಿಲ್ಲೆಯ ಬೀದರ, ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 30 ಅಂಗನವಾಡಿ ಕಾರ್ಯಕರ್ತೆ ಹಾಗೂ 65 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾದಿಕಾರಿಗಳು ಹಾಗೂ ಅಧ್ಯಕ್ಷರು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಆಯ್ಕೆ ಸಮಿತಿ ಬಈದರ ಇವರ ಅನುಮತಿ ಪಡೆದುಕೊಂಡು ಸರಕಾರದ ಆದೇಶದಂತೆ, ಅನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿತ್ತು.
ಅದರಂತೆ ಅನ್ಲೈನ್ನಲ್ಲಿ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 04 ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded” ಎಂಬ ಸಂದೇಶಗಳು ಅರ್ಜಿದಾರರ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಶಿಶು ಅಭಿವೃದ್ಧಿ ಯೋಜನೆ ಬೀದರ ವ್ಯಾಪ್ತಿಯಲ್ಲಿ 901 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 478 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.
ದಿನಾಂಕ: 20-12-2024ರ ಸರಕಾರದ ಆದೇಶದಲ್ಲಿ ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸಿದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ: 26-12-2024 ರಿಂದ 05-01-2025 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಆದ್ದರಿಂದ ದಿನಾಂಕ: 26-12-2024 ರಿಂದ 05-01-2025 ರವರೆಗೆ ಕಾಲಾವಕಾಶ ನಿಗದಿಪಡಿಸಿಸಲಾಗಿದೆ.
ಅಭ್ಯರ್ಥಿಗಳು 04 ಹಂತಗಳಲ್ಲಿ ಪೂರ್ಣಗೊಳಿಸಿದಬೇಕಾಗಿರುವ ವಿವರ: ಒಂದನೇ ಹಂತದಲ್ಲಿ ಅನ್ಲೈನ್ ತಂತ್ರಾAಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡುವುದು, ಎರಡನೇ ಹಂತದಲ್ಲಿ ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಅಪ್ಲೋಡ್ ಮಾಡುವುದು. ಮೂರನೇ ಹಂತದಲ್ಲಿ ತಮ್ಮ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದು. ನಾಲ್ಕನೇ ಹಂತದಲ್ಲಿ ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.
ಅಪೂರ್ಣವಾದ ಅರ್ಜಿಗಳ ಅರ್ಜಿ ಸಂಖ್ಯೆ ಹಾಗೂ ಇತರೆ ವಿವರಗಳನ್ನೊಳಗೊಂಡ ಮಾಹಿತಿಯು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಬೀದರ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…
ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…
ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…
ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…
ನೆದರ್ಲ್ಯಾಂಡ್ಸ್ನ ಆಮ್ಸ್ಟೆಲ್ವೀನ್ನಲ್ಲಿರುವ ವ್ಯಾಗೆನರ್ ಹಾಕಿ ಕ್ರೀಡಾಂಗಣದಲ್ಲಿ ನಿನ್ನೆ ಸಂಜೆ ನಡೆದ ಎಫ್ಐಎಚ್ ಹಾಕಿ ಪ್ರೊ ಲೀಗ್ನಲ್ಲಿ ಭಾರತ ತಂಡವು ಅರ್ಜೆಂಟೀನಾ…
ನಿನ್ನೆ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ, ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ನ 2ನೇ ದಿನದ ಅಂತ್ಯಕ್ಕೆ…