03.ಜ.25. ಬೀದರ: ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳು (ಸಹಾಯಕಿ148 ) ಮತ್ತು (270 ಕಾರ್ಯಕರ್ತೆ) ಹುದ್ದೆಗಳಿಗೆ ಅಂಗನವಾಡಿಅನ್ಯಾಯವಾಗಿದೆ. ಎಂದು ಬೀದರ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಮೀಸಲಾತಿ ನೀಡುವಲ್ಲಿ ಅನ್ಯಾಯವಾಗಿದ್ದು, ನ್ಯಾಯ ಒದಗಿಸಿ ಕೊಡಬೇಕು ಅಂದು ಕರ್ಣಾಟಕ ದಲಿತ ಸೇನೆ. ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲಿಸಿದಾರೆ.
ಈ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡದೇ ಅನ್ಯಾಯ ಮಾಡಿದ್ದಾರೆ. ಇದರ ಮೂಲಕ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ದೂರಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನಿಯಮದ ಪ್ರಕಾರ ಮೀಸಲಾತಿ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕು. ಒಂದು ವೇಳೆ ಇದರ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ನೀತಿ ಅನುಸರಿಸಿದಲ್ಲಿ ಜಿಲ್ಲಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಖಿಲ ಕರ್ನಾಟಕ ದಲಿತ ಸೇನೆಯ ಅಧ್ಯಕ್ಷ ಧನರಾಜ್ ಕೋಳಾರ್, ಉಪಾಧ್ಯಕ್ಷ ಎಂ ಬಸವರಾಜ್, ಕನ್ನಡಪರ ಹೋರಾಟಗಾರ ಗುರುದಾಸ್ ಅಮದಲಪಾಡ್, ಜಾನಸನ್ ಘೋಡೆ ಹಾಗೂ ಸಂಜು ಲಕ್ಷ್ಮಿದೊಡ್ಡಿ ಇದ್ದರು.
ಈ ಸಂದರ್ಭದಲ್ಲಿ ಕರ್ಣಾಟಕ ದಲಿತ ಸೇನೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು..