ಹೊಸ ದೆಹಲಿ.01.ಮೇ.25:-ಅಂಗವಿಕಲರು ಮತ್ತು ದೃಷ್ಟಿ ನ್ಯೂನತೆ ಇರುವವರಿಗೆ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಾಗೂ ಬ್ಯಾಂಕ್ ಖಾತೆ ತೆರೆಯಲು, ಸೌಲಭ್ಯಗಳ ಲಭ್ಯತೆಯೂ ಮೂಲಭೂತ ಹಕ್ಕು ಎಂದು ಘೋಷಿಸಿರುವ ಸುಪ್ರೀಂ ಕೋರ್ಟ್, ಅಂಗವಿಕಲರು, ಅಂಧರು, ಆಯಸಿಡ್ ದಾಳಿಯ ಸಂತ್ರಸ್ತರಿಗೆ ಡಿಜಿಟಲ್ ಕೆವೈಸಿ ಸರಾಗವಾಗು ವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದೆ.
ಇದಕ್ಕಾಗಿ ಡಿಜಿಟಲ್ ಕೆವೈಸಿ ಮಾರ್ಗಸೂಚಿಯಲ್ಲಿ ಬದಲಾವಣೆಗಳನ್ನು ತರುವಂತೆಯೂ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ಅಂಗವಿಕಲರು ಮತ್ತು ದೃಷ್ಟಿ ನ್ಯೂನತೆ ಇರುವವರಿಗೆ ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಾಗೂ ಬ್ಯಾಂಕ್ ಖಾತೆ ತೆರೆಯಲು, ಕ್ಷೇಮಾಭಿವೃದ್ಧಿ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಅಂಥವರಿಗೆ ಕೆವೈಸಿಯಂತಹ ಡಿಜಿಟಲ್ ಪ್ರಕ್ರಿಯೆ ಸರಳವಾಗಬೇಕು. ಡಿಜಿಟಲ್ ಸೌಲಭ್ಯ ಲಭ್ಯತೆಯ ಹಕ್ಕು ಎನ್ನುವುದು ಸಂವಿಧಾನದ 21ನೇ ವಿಧಿಯಡಿ ಬರುವ ಜೀವಿಸುವ ಹಕ್ಕು ಎಂದಿದೆ.
ಯಾವುದೇ ಬ್ಯಾಂಕ್ ಖಾತೆ ತೆರೆಯಲು ಮತ್ತು ಸರ್ಕಾರಿ ಯೋಜನೆಗಳ ಲಾಭಪಡೆಯಲು ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ. ಆದರೆ, ಆನ್ಲೈನ್ ಕೈವಿಸಿಯಿಂದ ಅಂಧರು ಮತ್ತು ಆಯಸಿಡ್ ದಾಳಿಗೊಳಗಾದವರು ತೀವ್ರ ಸಮಸ್ಯೆ ಎದುರಿಸಬೇಕಾಗುತ್ತದೆ. ಹಾಲಿ ಇರುವ ಕೆವೈಸಿ ನಿಯಮವಾಳಿಯಿಂದ ಇಂಥವರು ಡಿಜಿಟಲ್ ವ್ಯವಸ್ಥೆಯಿಂದಲೇ ದೂರವುಳಿಯುವ ಸಾಧ್ಯತೆ ಇದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಕೈವಿಸಿ ವಿನ್ಯಾಸವನ್ನು ಎಲ್ಲರಿಗೂ ಸರಿಹೊಂದುವಂತೆ ಬದಲಾಯಿಸುವ ಅಗತ್ಯವನ್ನು ನ್ಯಾಯಾಲಯ ಮನಗಂಡಿದೆ
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…