ಬೆಂಗಳೂರು.18.ಮೇ.25:- ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ.
ಮೇಲೆ (2)ರಲ್ಲಿ ಓದಲಾದ ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಸೇರಿದ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸುವ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ:28.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸೆನೆನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28.03.2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ದಿನಾಂಕ:28.11.2023ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 266 ಸೆನನಿ 2022ರ ಅನುಬಂಧ-1ರಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರ್ ವರ್ತುಲದಲ್ಲಿ 5, 30, 55 ಮತ್ತು 82ನೇ ಮೀಸಲಾತಿ ಬಿಂದುಗಳನ್ನು ಪರಿಗಣಿಸತಕ್ಕದ್ದು.
ದಿನಾಂಕ:28.11.2023ರ ರೋಸ್ಮರಿನನ್ವಯ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ಹುದ್ದೆಗಳಿಗೆ ಈಗಾಗಲೇ ಮುಂಬಡ್ತಿ ನೀಡಿದ್ದಲ್ಲಿ ಯಾವ ಬಿಂದುವಿನವರೆಗೆ ಮುಂಬಡ್ತಿ ನೀಡಲಾಗಿದೆಯೋ ಜಾರಿಗೊಳಿಸತಕ್ಕದ್ದು. ನಂತರದ ಬಿಂದುವಿನಿಂದ 7 ಈ ಆದೇಶವನ್ನು ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ:249/2025 ದಿನಾಂಕ:09.05.2025ರಲ್ಲಿನ ನಿರ್ಣಯದಂತೆ ಹೊರಡಿಸಿದೆ.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…