ಬೀದರ.08.ಮಾರ್ಚ್.25:- ಎಂದುಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಬೀದರ ವೈದ್ಯಕೀಯ ವಿಜ್ಞಾನ ಸಂಸ್ಥೆ (BRIMS, BIDAR) ಮತ್ತು ಬೀದರ ಪ್ರಸೂತಿ ಹಾಗೂ ಸ್ತ್ರೀರೋಗ ಸಂಘದ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಸಂಪೂರ್ಣ ಆರೋಗ್ಯ ಜನ್ಮ ಅಭಿಯಾನ ಕುರಿತ ವಿಶೇಷ ಸಿಎಂಇ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ, ಮಹಿಳೆಯರ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದ ಪ್ರಮುಖ ಅಂಶಗಳು, ತಜ್ಞ ವೈದ್ಯರ ಉಪನ್ಯಾಸ, ಹಾಗೂ ಸಂಪೂರ್ಣ ಆರೋಗ್ಯ ಕಾಯ್ದಿರಿಸುವ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.

ವೈದ್ಯಕೀಯ ಕ್ಷೇತ್ರದಲ್ಲಿ ಮಹಿಳಾ ಸಬಲಿಕರಣದ ಮಹತ್ವವನ್ನು ಉಲ್ಲೇಖಿಸಿ, ಭವಿಷ್ಯದ ತಾಂತ್ರಿಕ ಹಾಗೂ ವೈದ್ಯಕೀಯ ಸಹಾಯದಿಂದ ಮಹಿಳಾ ಆರೋಗ್ಯದ ಉತ್ತರವನ್ನು ಹೆಚ್ಚಿಸುವುದು ಸರ್ಕಾರದ ಪ್ರಾಥಮಿಕ ಗುರಿಯಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಬೀದರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರು, ವಿದ್ಯಾರ್ಥಿಗಳು, ಆರೋಗ್ಯ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು.