ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಶೇಷ ಆ.ಇಜ, ಸಾಮಾನ್ಯ ಆ.ಇಜಗೆ ಸಮಾನಾಂತರವಾಗಿವೆ. ದ್ವಿತೀಯಪಿ.ಯು.ಸಿ ಪರೀಕ್ಷೆಯಲಿ 50% (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45%) ಅಂಕಗಳೊAದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ದಿನಾಂಕ:12-07-2025 ರೊಳಗಾಗಿ ವೆಬ್ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ಕಾರ್ಯಕ್ರಮಗಳು: D.Ed.Spl.Ed(VI)- Helen Keller Govt. Teachers Training Centre for Visually Handicapped – KK016. & D.Ed.Spl.Ed(HI)–Govt. Teachers Training Centre for Hearing Handicapped – KK015.
ಉದ್ಯೋಗ ಅವಕಾಶಗಳು: ರಾಜ್ಯ ಸರ್ಕಾರದ ಸಾಮಾನ್ಯ ಶಾಲೆ ಮತ್ತು ವಿಶೇಷ ಶಾಲೆಗಳೆರಡರಲ್ಲೂ ಶಿಕ್ಷಕರಾಗಬಹುದು. ವಿಕಲಚೇತನರ ಇಲಾಖೆಯ ಅಡಿಯಲ್ಲಿ ಬರುವ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗ ಬಹುದು. ಸಿ.ಬಿ.ಎಸ್ಸಿ. ಶಾಲೆಗಳಲ್ಲಿ ಶಿಕ್ಷಕರಾಗಬಹುದು.
ಸರ್ವ ಶಿಕ್ಷಣ ಅಭಿಯಾನದಲ್ಲಿ ಸಂಪನ್ಮೂಲ ಶಿಕ್ಷಕರಾಗಬಹುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಬಹುದು. ರಾಷ್ಟೀಯ ಸಂಸ್ಥೆಗಳು/ ಪ್ರಾದೇಶಿಕ ಸಂಸ್ಥೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸ ಬಹುದು.
ಮಾತಿನ ತರಬೇತಿ ಘಟಕಗಳಲ್ಲೂ ಕಾರ್ಯನಿರ್ವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ: ಉಪ ನಿರ್ದೇಶಕರು (ತರಬೇತಿ) ಕಛೇರಿ, ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ಸರ್ಕಾರಿ ತರಬೇತಿ ಕೇಂದ್ರ ಪುಲಿಕೇಶಿ ರಸ್ತೆ, ತಿಲಕ್ನಗರ, ಮೈಸೂರು-570001.
ದೂರವಾಣಿ ಸಂ:0821- 2491600 ಹಾಗೂ ತರಬೇತಿ ಸಂಯೋಜಕರು: ಆಶಾ.ವಿ.ಹಿರೇಮಠ್-9113561620, ಟಿ.ಡಿ. ಮಂಜುನಾಥ- 9686762378 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಇಳಿಸಿದ್ದಾರೆ.
****