ಅಂಬಳೆ ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಅಂಬಳೆ  ನವೀನ್  ಅವಿರೋಧವಾಗಿ ಆಯ್ಕೆ.



ಚಾಮರಾಜನಗರ.16.ಏಪ್ರಿಲ್.25:- ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮಪಂಚಾಯತಿಯಲ್ಲಿ ತೆರವುಗೊಂಡಿದ್ದ ಅಧ್ಯಕ್ಷ ಸ್ಥಾನಕ್ಕೆ  ಅಂಬಳೆ ನವೀನ್ ಎಂಬುವವರು ಬುಧವಾರ  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಇವರು ಯಳಂದೂರು ತಾಲ್ಲೂಕಿನಲ್ಲಿ ಯುವ ಮುಖಂಡರಾಗಿ ಪರಿಚಯವಾಗಿ ಅಪಾರ ಯುವಕರ ಬಳಗವನ್ನು ಹೊಂದಿದ್ದಾರೆ.


ಇವರು ಬಿ ಇ ಪದವಿ ಮುಗಿಸಿದ್ದಾರೆ. ಜನ ಸೇವೆ ಗೋಸ್ಕರ ಗ್ರಾಮ ಪಂಚಾಯತಿಯಲ್ಲಿ ಸದಸ್ಯರಾಗಿ ಸೇವೆಸಲ್ಲಿಸಿ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ.

ಅಂಬಳೆ  ಗ್ರಾಮಪಂಚಾಯತಿ ಅಧ್ಯಕ್ಷರಾಗಿ ನಂಜುಂಡಸ್ವಾಮಿ ರವರು  ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರವುಗೊಂಡಿದ್ದ ಸ್ಥಾನಕ್ಕೆ  ಚುನಾವಣೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ನವೀನ್  ಮಾತ್ರ ನಾಮ ಪತ್ರ ಸಲ್ಲಿಸಿದರು ಉಳಿದವರು ಯಾರು?  ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಚಂದ್ರಶೇಖರ ಮೂರ್ತಿ‌ರವರು ಎಲ್ ನವೀನ್ ರವರನ್ನು ಅಂಬಳೆ ಗ್ರಾಮಪಂಚಾಯತಿ ಅಧ್ಯಕ್ಷರೆಂದು  ಅವಿರೋಧವಾಗಿ ಆಯ್ಕೆಮಾಡಿದರು.
ನೂತನ ಅಧ್ಯಕ್ಷರಿಗೆ  ಸೇಬಿನಹಾರ,  ಹೂವಿನಹಾರ ಮೈಸೂರು ಪೇಟತೊಡಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿ ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿದರು.

ನೂತನ ಅಧ್ಯಕ್ಷ ಎಲ್ ನವೀನ್  ಮಾತನಾಡಿ ಅಂಬಳೆ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಇನ್ನಷ್ಟು ಜವಾಬ್ದಾರಿ ಹೆಚ್ಚಾಗಿದೆ.  ಸರಕಾರದಿಂದ ಬರುವ ಸವಲತ್ತುಗಳನ್ನು ಗ್ರಾಮಪಂಚಾಯತಿ ಅಭಿವೃದ್ಧಿಗೆ ಬಳಸುತ್ತೇವೆ ಹಾಗೂ ಸಾರ್ವಜನಿಕರ ಸೇವೆಗೆ ಸದಾ ಸಿದ್ದರಾಗಿರುತ್ತೇವೆ  ಇದಕ್ಕೆ ಎಲ್ಲಾ ಸದಸ್ಯರ ಸಹಕಾರ ಅಗತ್ಯವಾಗಿದೆ. ನಮ್ಮ‌ ಗ್ರಾಮಪಂಚಾಯತಿಯನ್ನು  ಮಾದರಿಯನ್ನಾಗಿಸುವುದಕ್ಕೆ ದುಡಿಯುವುತ್ತೇನೆ ಸಹಕರಿಸಿದ ಎಲ್ಲಾರಿಗೂ ಅಭಿನಂದನೆಗಳು  ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಮಹದೇವಮ್ಮ, ಸದಸ್ಯರಾದ  ಸಿದ್ದನಾಯಕ, ರಾಜಣ್ಣ, ಸ್ವಾಮಿ, ಸುಜಾತ, ನಾಗಮ್ಮ, ನಂಜರಾಜು,ಮಹೇಶ್ವರಿ ಚಾಮರಾಜು,ರೇವಣ್ಣ,ರಾಣಿ, ಮಾಲಾಸಿದ್ದರಾಜು,ಮಹದೇವಸ್ವಾಮಿ, ಗೀತಾ ಮಹೇಶ್, ಅರುಣಕುಮಾರಿ ಮಹೇಶ್ ಸ್ನೇಹಿತರಾದ ಆನಂದ್, ಸಂದೀಪ್ , ಪಿಡಿಒ ಕಾವ್ಯ, ಕಾರ್ಯದರ್ಶಿ ಪುಟ್ಟರಾಜು, ಗ್ರಾಪಂ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು

ವರದಿಗಾರ: ಜಿ ಪ್ರಸ್ಸನ್ ಕುಮಾರ್ ಕಿತ್ತೂರ

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

7 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

8 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

8 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

8 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

8 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

8 hours ago