18 ಡಿಸೆಂಬರ್ 24 ನ್ಯೂ ದೆಹಲಿ:-ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ ಬಿ ಆರ್ ಅಂಬೇಡ್ಕರ್ ಅವರ ಹೇಳಿಕೆಯನ್ನು ಪ್ರತಿಪಕ್ಷಗಳು ತಿರುಚುತ್ತಿವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ.
ರಾಜ್ಯಸಭೆಯಲ್ಲಿ ಶ್ರೀ ಶಾ ಅವರ ಭಾಷಣದ ಸಣ್ಣ ಕ್ಲಿಪ್ ಅನ್ನು ಪ್ರಸಾರ ಮಾಡಲಾಗುತ್ತಿದೆ, ಅವರು ಹೇಳಿದ್ದನ್ನು ತಿರುಚಲಾಗುತ್ತಿದೆ ಎಂದು ಅವರು ಸಂಸತ್ ಭವನದಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಅಂಬೇಡ್ಕರ್ ಅವರನ್ನು ಅವಮಾನಿಸಿದ್ದು ಕಾಂಗ್ರೆಸ್ ಎಂದು ಆರೋಪಿಸಿದ ಸಚಿವರು ಇದನ್ನು ಖಂಡಿಸಿದರು.
ಈ ವಿಷಯದ ಬಗ್ಗೆ ಸಂಸತ್ತಿನ ಉಭಯ ಸದನಗಳ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಅವರು ಪ್ರತಿಪಕ್ಷಗಳ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.