ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಖಾಲಿ ಹುದ್ದೆಗೆ   ಅರ್ಜಿ ಆಹ್ವಾನಿಸಲಾಗಿದೆ.!

ವಿಜಯಪುರ.15.ಮಾರ್ಚ.25:-  ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಖಾಲಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ  ವಿಭಾಗದ ಪ್ರೊ.ಲಕ್ಷ್ಮಿ, ಬೆಂಗಳೂರು ಕ್ಲಸ್ಟರ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ, ಲೇಖಕಿ ಪ್ರೊ.ಎಂ.ಎಸ್‌. ಆಶಾದೇವಿ, ಇದೇ ವಿಶ್ವವಿದ್ಯಾಲಯದ ತೆಲುಗು ಅಧ್ಯಯನ ವಿಭಾಗದ  ಪ್ರೊ.ಜ್ಯೋತಿ, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಪ್ರೊ.ಜಯಶ್ರೀ, ಬೆಂಗಳೂರು  ವಿಶ್ವವಿದ್ಯಾಲಯದ ಸಮತಾ ದೇಶಮಾನೆ, ತುಮಕೂರು ವಿಶ್ವವಿದ್ಯಾಲಯದ  ಎಂಬಿಎ ವಿಭಾಗದ ನೂರ್‌ ಅಫ್ಜಾ ಅರ್ಜಿ ಸಲ್ಲಿಸಿರುವವರಲ್ಲಿ ಪ್ರಮುಖರು ಆಗಿದ್ದಾರೆ.

ವಿಶ್ವವಿದ್ಯಾಲಯದ ಕುಲಪತಿ ಆಗಿದ್ದ ಪ್ರೊ. ಬಿ.ಕೆ.ತುಳಸಿಮಾಲಾ ಅವರು ಸೇವೆಯಿಂದ ನಿವೃತ್ತರಾದ ಬಳಿಕ ಪ್ರೊ. ಶಾಂತಾದೇವಿ ಟಿ. ಅವರು ಹಂಗಾಮಿ ಕುಲಪತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಘಂಟಿ ಅಧ್ಯಕ್ಷತೆಯಲ್ಲಿ ಶೋಧನಾ ಸಮಿತಿ

ಕುಲಪತಿ ನೇಮಕ ಸಂಬಂಧ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಫೆಬ್ರುವರಿ 10ರಂದು ನಿವೃತ್ತ ಕುಲಪತಿ ಮಲ್ಲಿಕಾ ಘಂಟಿ ಅವರ ನೇತೃತ್ವದಲ್ಲಿ  ಶೋಧನಾ ಸಮಿತಿ ರಚಿಸಿದೆ. ಅರ್ಜಿ  ಪರಿಶೀಲಿಸಿ ಯೋಗ್ಯರಾದ ಮೂವರ ಹೆಸರನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರಿಗೆ ಶಿಫಾರಸು ಮಾಡಬೇಕು.

UGC ಯುಜಿಸಿ ನಾಮನಿರ್ದೇಶಿತ ಸದಸ್ಯರಾದ ಹರಿಯಾಣದ ಕೇಂದ್ರೀಯ  ವಿಶ್ವಿದ್ಯಾಲಯದ ಕುಲಪತಿ ಪ್ರೊ.ಸುಷ್ಮಾ ಯಾದವ್‌ ರಾಜ್ಯಪಾಲರಿಂದ ನಾಮ ನಿರ್ದೇಶಿತ ಸದಸ್ಯರಾದ ಮಧ್ಯಪ್ರದೇಶದ  ಅಹಿಲ್ಯಾದೇವಿ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ರೇನು ಜೈನ್‌ ಸಿಂಡಿಕೇಟ್‌  ನಾಮನಿರ್ದೇಶಿತ ಸದಸ್ಯರಾದ ಬೆಂಗಳೂರಿನ  ಮಹಾರಾಣಿ ಕ್ಲಸ್ಟರ್‌ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ  ಪ್ರೊ.ಎಲ್‌.ಗೋಮತಿ ದೇವಿ ಹಾಗೂ ಇಲಾಖೆಯ ಉಪ ಕಾರ್ಯದರ್ಶಿ ಶಶಿಧರ ಜಿ. ಸಮಿತಿಯಲ್ಲಿ ಇದ್ದಾರೆ.

-ಪ್ರೊ.ಎಚ್‌.ಟಿ.ಪೋತೆ, ನಿರ್ದೇಶಕ ಕನ್ನಡ  ಅಧ್ಯಯನ ವಿಭಾಗ ಗುಲಬರ್ಗಾ ವಿಶ್ವವಿದ್ಯಾಲಯ63 ವರ್ಷ ವಯಸ್ಸಿನೊಳಗೆ ಇರುವವರು ಅರ್ಜಿ ಸಲ್ಲಿಸಲು  ಅವಕಾಶವಿದೆ. ಪುರುಷರು ಅರ್ಜಿ ಸಲ್ಲಿಸಬಾರದು ಎಂಬ ನಿರ್ಬಂಧ ಇಲ್ಲ

prajaprabhat

Recent Posts

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ `ಪೋಸ್ಟರ್’ ಅಭಿಯಾನ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು.10.ಜೂನ್.25:-ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟ‌ರ್ ಗಳನ್ನು ಪ್ರದರ್ಶಿಸುವ ಬಗ್ಗೆ…

28 minutes ago

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸುಲಭದಲ್ಲಿ ಕೈಗೆಟಕುತ್ತಿದೆ ಉನ್ನತ ಶಿಕ್ಷಣ

ವಿಜಯಪುರ.10.ಜೂನ್.25:-ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಬಲೀಕರಣಕ್ಕಾಗಿ ಹತ್ತು ಹಲವು ವಿನೂತನ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನು ತೆರೆದಿರುವ  ಶೈಕ್ಷಣಿಕ…

54 minutes ago

SSC 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…

3 hours ago

2000 ವರ್ಷಗಳ ಹಿಂದೆ ಬೌದ್ಧಧರ್ಮದ ಆಗಮನವನ್ನು ಗುರುತಿಸುವ ಪೋಸನ್ ಪೋಯವನ್ನು ಶ್ರೀಲಂಕಾ ಆಚರಿಸುತ್ತಿದೆ.

ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…

3 hours ago

ದಕ್ಷಿಣ ಭಾರತದಲ್ಲಿ ಭಾರೀ ಮಳೆ, ಪೂರ್ವ-ಮಧ್ಯ ಭಾರತದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಐಎಂಡಿ ಮುನ್ಸೂಚನೆ

ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…

4 hours ago

ಹಣಕಾಸು ಸಚಿವ ಸೀತಾರಾಮನ್ ಅಧ್ಯಕ್ಷತೆಯಲ್ಲಿ 6ನೇ NIIF ಜಿಸಿ ಸಭೆ.

ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…

4 hours ago