ಅಕ್ರಮ ಮರ ಕಡಿತಲೆ: ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು.26.ಮಾರ್ಚ.25:- ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.


ತತ್ಸಂಬAಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.


ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ.


ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.


ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ನೀಡಿದ್ದಾರೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

7 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

8 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

8 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

8 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

8 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

8 hours ago