====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೆಂಗಳೂರು.06.ಮಾರ್ಚ.25:- ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಜೈಸ್ ಇಂಡಿಯಾ (ZEISS India) ಸಂಸ್ಥೆಯೊಂದಿಗೆ ಕರ್ನಾಟಕ ಸರ್ಕಾರ ಒಡಂಬಡಿಕೆಗೆ ಸಹಿ ಹಾಕಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ 11 ಲಕ್ಷ ಮಂದಿಗೆ ನೇತ್ರ ಪರೀಕ್ಷೆ ನಡೆಸಲಾಗುವುದಲ್ಲದೆ, ಅಗತ್ಯವಿದ್ದವರಿಗೆ ಉಚಿತ ಕನ್ನಡಕ ವಿತರಿಸುವ ವಿದ್ಯಾದೃಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಒಡಂಬಡಿಕೆಯ ಅನುಸಾರ ಕಲಬುರಗಿ ಜಿಲ್ಲೆಯಲ್ಲಿ 5,32,000 ಶಾಲಾ ಮಕ್ಕಳಿಗೆ ಕಣ್ಣಿನ ಪರೀಕ್ಷೆ ಅಭಿಯಾನವನ್ನು ನಡೆಸಲಾಗುವುದು. ಕಲಬುರಗಿ ಜಿಲ್ಲೆಯಾದ್ಯಂತ ಮಕ್ಕಳ ದೃಷ್ಟಿ-ಸಂಬಂಧಿತ ಸಮಸ್ಯೆಗಳನ್ನು ಪತ್ತೆಹಚ್ಚಿ ಅಗತ್ಯವಿರುವವರಿಗೆ ಕನ್ನಡಕಗಳನ್ನು ವಿತರಿಸಲಾಗುವುದು.ಈ ಯೋಜನೆಯು ಮಕ್ಕಳ ಕಣ್ಣಿನ ಆರೋಗ್ಯ ಸುಧಾರಿಸುವ ಗುರಿಯನ್ನು ಹೊಂದಿದ್ದು, ಜೈಸ್ ಇಂಡಿಯಾ ಸಂಸ್ಥೆಯು ವಿದ್ಯಾದೃಷ್ಟಿ ಕಾರ್ಯಕ್ರಮದಡಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಿದೆ. ಅಲೋಕ ಸಂಚಾರಿ ವಾಹನದ ಮೂಲಕ ನೇತ್ರ ಪರೀಕ್ಷೆಯನ್ನು ಕೈಗೊಳ್ಳಲಾಗುವುದು. ಇದಲ್ಲದೆ, ನೇತ್ರತಜ್ಞರು (ಆಪ್ಟೋಮೆಟ್ರಿಸ್ಟ್ಗಳು) ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ನಡೆಸುವ ಮೂಲಕ ಅವರ ವೃತ್ತಿಪರತೆಯನ್ನು ಹೆಚ್ಚಿಸಲಾಗುತ್ತದೆ.
ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಕಣ್ಣಿನ ಆರೋಗ್ಯವನ್ನು ಸುಧಾರಿಸುವ ತುರ್ತು ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜೈಸ್ ಇಂಡಿಯಾದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಇದರಿಂದ ಮಕ್ಕಳ ಕಣ್ಣಿನ ಆರೋಗ್ಯ ಸುಧಾರಿಸಿ ಕಲಿಕೆಯನ್ನು ಸುಗಮಗೊಳಿಸುವ ಗುರಿ ಹೊಂದಿದ್ದೇವೆ. ಇದರಡಿ ಕಲಬುರಗಿಯಲ್ಲಿ 5.32 ಲಕ್ಷ ಶಾಲಾ ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿರುವ ಕನ್ನಡಕ ವಿತರಿಸಲಾಗುತ್ತದೆ. ಹೆಚ್ಚುವರಿಯಾಗಿ 6,00,000 ಬಡ ವಯಸ್ಕರಿಗೂ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ. ಇಂಥ ವಿಶಿಷ್ಟ ಯೋಜನೆಗೆ ಕೈಜೋಡಿಸಿರುವ ಜೈಸ್ ಇಂಡಿಯಾ ಸಂಸ್ಥೆಯನ್ನು ಶ್ಲಾಘಿಸುತ್ತೇನೆ.
ಈ ಸಂದರ್ಭದಲ್ಲಿ ಸಚಿವರಾದ ದಿನೇಶ್ ಗುಂಡೂರಾವ್, ಡಾ. ಶರಣಪ್ರಕಾಶ್ ಪಾಟೀಲ್, ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾ ಕೃಷ್ಣ ದೊಡ್ಡಮನಿ ಸೇರಿದಂತೆ ಶಾಸಕರು ಅಧಿಕಾರಿಗಳು ಉಪಸ್ಥಿತರಿದ್ದರು.
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…