ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ: ಸ್ವಚ್ಛತೆಗಾಗಿಪಾಲಿಕೆಯ ಅಧಿಕಾರಿ, ಸಿಬ್ಬಂದಿಯ ನಿಯೋಜನೆ

ರಾಯಚೂರು.03.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆಗಸ್ಟ್ 08 ರಿಂದ ಆಗಸ್ಟ್ 25 ರವರೆಗೆ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯಿಂದ ಸ್ವಚ್ಛತೆ ಹಾಗೂ ಕುಡಿಯುವ ನೀರು ಮತ್ತು ಮೊಬೈಲ್ ಟಾಯ್ಲೆಟ್ ವ್ಯವಸ್ಥಿತವಾಗಿ ನಿರ್ವಹಿಸಲು ಮಹಾನಗರ ಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 08 ರಿಂದ ಆಗಸ್ಟ್ 25 ರವರೆಗೆ ಕೃಷಿ ವಿಶ್ವವಿದ್ಯಾಲಯದಲ್ಲಿ ಮೊಬೈಲ್ ಟಾಯ್ಲೆಟ್‌ಗಳನ್ನು ಸ್ವಚ್ಛಗೊಳಿಸಲು ಹಾಗೂ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಮಿಷನ್ ವಾಹನ ನಿಯೋಜಿಸುವುದು. ಹಾಗೂ ಇನ್ನೀತರ ಕಾರ್ಯಗಳನ್ನು ನಿರ್ವಹಿಸಲು ಪಾಲಿಕೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಭೀಮಾಶಂಕರ ಹಾಗೂ ಸಿಬ್ಬಂದಿ ಆಂಜನೇಯ ಮತ್ತು ಶ್ರೀಕಾಂತ್ ಅವರನ್ನು ನೇಮಿಸಲಾಗಿದೆ.
ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಚ್ಛತೆ ಕುರಿತು ತಮ್ಮ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿಯಾದ ಪೌರಕಾರ್ಮಿಕರನ್ನು ಕಸಗುಡಿಸಲು ಹಾಗೂ ವಾಹನ ಸಂಪನ್ಮೂಲಗಳನ್ನು ಕಾರ್ಯಕ್ರಮಕ್ಕೆ ಅನುಗುಣವಾಗಿ ನಿಯೋಜಿಸಿ ಸ್ವಚ್ಛಗೊಳ್ಳಲು ಆಗಸ್ಟ್ 8ರಿಂದ ಆಗಸ್ಟ್ 25ರವರೆಗೆ ಪ್ರತಿನಿತ್ಯ ಆರ್ಮಿ ರ‍್ಯಾಲಿ ನಡೆಯುವ ಕೃಷಿ ವಿವಿ ಆವರಣವನ್ನು ಶುಚಿಗೊಳಿಸುವುದು ಸೇರಿದಂತೆ ಇನ್ನೀತರ ಕಾರ್ಯವನ್ನು ನಿರ್ವಹಿಸಲು
ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜೈಪಾಲ್ ರೆಡ್ಡಿ ಹಾಗೂ ಸಿಬ್ಬಂದಿ ಶರಣು ತೆಂಗಲಿ, ಅಮರೇಶ್, ಹನುಮಂತ ಜಗ್ಲಿ, ಬಡೇಸಾಬ್, ಈರಣ್ಣ ಅವರನ್ನು ನೇಮಿಸಲಾಗಿದೆ.

ಪಾಲಿಕೆಯ ಎಲ್ಲಾ ಮೇಲ್ವಿಚಾರಕರು ಅವರ ದಿನದಲ್ಲಿ ಕಾರ್ಯ ನಿರ್ವಹಿಸಿರುವ ಪೌರಕಾರ್ಮಿಕರನ್ನು ಆರ್ಮಿ ರ‍್ಯಾಲಿಗೆ ನಿಯೋಜಿಸಲು ಸೂಕ್ತವಾಗಿ ಆರೋಗ್ಯ ನಿರೀಕ್ಷಕರ ಸೂಚನೆಗಳಂತೆ ಪಾಲಿಸಬೇಕು. ತಂಡಗಳಾಗಿ ಕಾರ್ಯನಿರ್ವಹಿಸಲು ಕ್ರಮ ವಹಿಸಬೇಕು ಎಂದು ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜೈಪಾಲ್ ರೆಡ್ಡಿ ಹಾಗೂ ಎಸ್‌ಡಬ್ಲುö್ಯಎಂನ ಎಕ್ಸಪರ್ಟ್ ಮೊಹಮ್ಮದ್ ಶಫಿ ಹಾಗೂ ಸಿಬ್ಬಂದಿ ಮಣಿಕಂಠ, ಭೀಮೇಶ್, ಸಚಿನ್ ಸೂಪರ್ವೈಸರ್ ಅವರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯು ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಹಿನ್ನೆಲೆಯಲ್ಲಿ ನೀಡಿದ ಕಾರ್ಯವನ್ನು ನಿರ್ವಹಣೆ ಮಾಡಬೇಕು. ತಪ್ಪಿದ್ದಲ್ಲಿ ಕರ್ನಾಟಕ ಮಹಾನಗರ ಪಾಲಿಕೆಯ ನಿಯಮಗಳ ಕಾಯ್ದೆ-1976 ಅನ್ವಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

8 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

11 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

11 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

11 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

11 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

11 hours ago