ಅಗ್ನಿವೀರ್ ಸೇನಾ ಭರ್ತಿ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೀಶ್ ಕೆ ಭೇಟಿ

ರಾಯಚೂರು.09.ಆಗಸ್ಟ್.25: ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಪ್ರಕ್ರಿಯೆಯು ಆಗಸ್ಟ್ 08ರಿಂದ ಆರಂಭವಾಗಿದ್ದು, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸೇನಾ ಭರ್ತಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು.

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಅವರು, ಅಗ್ನಿವೀರ ಸೇನಾ ನೇಮಕಾರಿ ರಾಲಿಯ ಪ್ರಕ್ರಿಯೆ ಬಗ್ಗೆ ಸೇನಾ ಅಧಿಕಾರಿ ಎಆರ್‌ಓ ಮನೋಜ್ ಸೇರಿದಂತೆ ಇನ್ನಿತರ ಸೇನಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಆಗಸ್ಟ್ 08ರಿಂದ ಆರಂಭವಾಗಿ ಆಗಸ್ಟ್ 26ರವರೆಗೆ ನಡೆಯಲಿರುವ ಶಾರಿರೀಕ ದೇಹದಾರ್ಡ್ಯ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗುವವರೆಗೆ ಸೇನಾ ಅಧಿಕಾರಿಗಳಿಗೆ ರಾಯಚೂರ ಜಿಲ್ಲೆಯ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಸ್ಥಳದಲ್ಲಿದ್ದ ಆಯಾ ಸಮಿತಿಗಳ ಅಧ್ಯಕ್ಷರಿಗೆ ಮತ್ತು ಸದಸ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿ: ಸೇನಾ ಭರ್ತಿಗಾಗಿ ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ಅಭ್ಯರ್ತಿಗಳು ರಾಯಚೂರಗೆ ಆಗಮಿಸುತ್ತಿದ್ದು, ಆಯಾ ಕಡೆಗೆ ಅವರಿಗೆ ಸರಿಯಾದ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು. ಕೃಷಿ ವಿವಿ ಆವರಣದ ಮುಖ್ಯ ರಸ್ತೆಯಲ್ಲಿ ಜನದಟ್ಟಣೆ ತಡೆದು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಸಂಬoಧಿಸಿದ ಅಧಿಕಾರಿಗಳು ಆಗಸ್ಟ್ 26ರವರೆಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಈ ವೇಳೆ ಸಹಾಯಕ ಆಯುಕ್ತರಾದ ಗಜಾನನ ಬಾಳೆ, ತಹಸೀಲ್ದಾರ ಅಮರೇಶ ಬಿರಾದಾರ, ಕೃಷ್ಣ ಶಾವಂತಗೇರಿ ಸೇರಿದಂತೆ ಇತರರು ಇದ್ದರು.

prajaprabhat

Recent Posts

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

1 hour ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

2 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

2 hours ago

ರಾಜ್ಯ ಶಿಕ್ಷಣ ನೀತಿ’ ಆಯೋಗ ಶಿಫಾರಸು : ಬೋರ್ಡ್ ಶಾಲೆಗಳಲ್ಲಿ `ಕನ್ನಡ ಬೋಧನೆ’ ಕಡ್ಡಾಯ

ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…

2 hours ago

ರಾಕಿ ಕಟ್ಟುವ ಸಹೋದರಿಯರಿಗೆ ಹೆಲ್ಮೇಟ ವಿತರಣೆ

ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…

4 hours ago

ಗೃಹಲಕ್ಷ್ಮೀ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ: ಪಾಮಯ್ಯ ಮುರಾರಿ

ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ…

4 hours ago