ಅತಿಥಿ ಉಪನ್ಯಾಸಕರಿಗೆ ಅಳಲು ಸಂಬಳವೂ ಇಲ್ಲ, ಸೇವಾ ಭದ್ರತೆಯೂ ಇಲ್ಲ.!

ಲಿಂಗಸ್ಗೂರು.13.ಮಾರ್ಚ.25:- ಉನ್ನತ ಶಿಕ್ಷಣ ಇಲಾಖೆಯೆಲ್ಲಿ ಸರ್ಕಾರಿ ಕಾಲೇಜುನಲ್ಲಿ ಅತಿಥಿ ಉಪನ್ಯಾಸಕರಿಗೆ ಏಳು ತಿಂಗಳಿಂದ ಸಂಬಳವೇ ಬಂದಿಲ್ಲ. ಮನೆ ಬಾಡಿಗೆ, ಮಕ್ಕಳ ಸ್ಕೂಲ್ ಫೀ. ಕುಟುಂಬ ನಿರ್ವಹಣೆಗೆ ಹೆಣಗಾಡುವಂತಾಗಿದೆ. ಜೊತೆಗೆ ಸೇವಾ ಭದ್ರತೆಯೂ ಕಾಡುತ್ತಿದೆ…’

ಇದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಅತಿಥಿ ಉಪನ್ಯಾಸಕರ ಅಳಲು.

ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳೆದ 16 ವರ್ಷಗಳಿಂದ 31 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ.

2024 ಆಗಸ್ಟ್ ತಿಂಗಳಿಂದ ಇಲ್ಲಿನ ಅತಿಥಿ ಉಪನ್ಯಾಸಕರಿಗೆ ಗೌರವಧನ ಬಿಡುಗಡೆಯಾಗಿಲ್ಲ. ‘ಗೌರವಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯುವುದೇ ಕೆಲಸವಾಗಿದೆ’ ಎಂಬುದು ಅವರ ದೂರು.

ಮೊದಲಿನಿಂದಲೂ ಪ್ರತಿ ತಿಂಗಳು ಸರಿಯಾಗಿ ಗೌರವಧನ ಬಿಡುಗಡೆಯಾಗುವುದೇ ಇಲ್ಲ. ಮೂರು ತಿಂಗಳೊಮ್ಮೆ ಗೌರವಧನ ಬಿಡುಗಡೆ ಆಗುತ್ತಿತ್ತು. ಈಗ ಏಳು ತಿಂಗಳು ಕಳೆದರೂ ಗೌರವಧನ ಬಿಡುಗಡೆಯಾಗಿಲ್ಲ. ಗೌರವಧನ ನೆಚ್ಚಿಕೊಂಡ ಅತಿಥಿ ಉಪನ್ಯಾಸಕರು ಮನೆ ಬಾಡಿಗೆ ಸೇರಿ ಕುಟುಂಬ ನಿರ್ವಹಣೆ ಮಾಡುವುದು ಹೇಗೆ’ ಎಂದು ಅವರ ಪ್ರಶ್ನೆ.

ಹೆಚ್ಚುವರಿ ಹೊಣೆ?: ‘ಅತಿಥಿ ಉಪನ್ಯಾಸಕರ ನೇಮಕಾತಿ ವೇಳೆ ಸರ್ಕಾರ ವಾರದಲ್ಲಿ 17 ತಾಸು ಕೆಲಸ ಮಾಡುವಂತೆ ಆದೇಶದಲ್ಲಿ ಹೇಳಿದೆ. ಆದರೆ, ಇಲ್ಲಿ ವಾರಕ್ಕೆ 48 ತಾಸು ದುಡಿಸಿಕೊಳ್ಳುತ್ತಿದ್ದಾರೆ. ಗೌರವಧನ ಸಿಗುವುದು 17 ತಾಸು ಕೆಲಸಕ್ಕೆ ಮಾತ್ರ. ಇನ್ನುಳಿದಿದ್ದು ಬರೀ ಸೇವೆ. ಇತ್ತೀಚೆಗೆ ಕಾಲೇಜಿನಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗಿದೆ. ಅರೆಕಾಲಿಕ ಉಪನ್ಯಾಸಕರೂ ಕಾಯಂ ಉಪನ್ಯಾಸಕರಂತೆ ಕೆಲಸ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎನ್ನುತ್ತಾರೆ ಅತಿಥಿ ಉಪನ್ಯಾಸಕರು.

ಕಾಡುತ್ತಿದೆ ಸೇವಾ ಅಭದ್ರತೆ: ಇಲ್ಲಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಲ್ಲಿ ಸೇವೆ ಮಾಡುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಕೆಲವು ನಿವೃತ್ತಿ ಅಂಚಿನಲ್ಲಿದ್ದಾರೆ. ಇನ್ನೂ ಕೆಲವರಿಗೆ ನೌಕರಿಯ ವಯೋಮಿತಿ ಮೀರುತ್ತಿದೆ. ಈ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರ ಹುದ್ದೆಗಳಿಗೆ ಭರ್ತಿ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಇದರಿಂದ 16-18 ವರ್ಷಗಳಿಂದ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವಾ ಅಭದ್ರತೆ ಕಾಡುತ್ತಿದೆ. ಬೇರೆಯವರನ್ನು ನೇಮಿಸಿದರೆ ಇಷ್ಟು ವರ್ಷ ಕೆಲಸ ಮಾಡಿದ ತಮ್ಮ ಗತಿಯೇನು? ಎಂಬುದು ಅವರ ಚಿಂತೆ.

‘ಅತಿಥಿಗಳನ್ನೇ ಕಾಯಂಗೊಳಿಸಿ’

‘ಕಳೆದ ಏಳು ತಿಂಗಳಿಂದ ಗೌರವಧನ ಬಿಡುಗಡೆ ಮಾಡಿಲ್ಲ. ಈ ಸಾಲಿನ ಬಜೆಟ್‌ನಲ್ಲಿ ಪಾಲಿಟೆಕ್ನಿಕ್‌ ಕಾಲೇಜುಗಳ ಖಾಲಿ ಉಪನ್ಯಾಸಕ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ಕಾಯಂಗೊಳಿಸಿ ನಮಗೆ ಸೇವಾ ಭದ್ರತೆ ನೀಡಬೇಕು’ ಎಂದು ಅತಿಥಿ ಉಪನ್ಯಾಸಕ ಶಿವಪ್ರಸಾದ ಖೇಣದ ಒತ್ತಾಯಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago