ಅತಿಥಿ ಉಪನ್ಯಾಸಕರಿಗೆ ಸುಮಾರು 3 ತಿಂಗಳಿಂದ ಸಂಬಳ ಇಲ್ಲ.!

ಕಲಬುರಗಿ.01.ಏಪ್ರಿಲ್.25:- ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಯಂ ಉಪನ್ಯಾಸಕರು ಇಲ್ಲದ ಕಾರಣ ಅತಿಥಿ ಉಪನ್ಯಾಸಕರ ಮೇಲೆ ಕಾರ್ಯ ವಹಿಸಿಕೊಳ್ಳುತ್ತಿದಾರೆ.

ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಹೆಚ್ಚುವರಿ ಅನುದಾನದ ಮೂಲ ಇಲ್ಲದೆ ಕಳೆದ ಮೂರು ತಿಂಗಳಿಂದ ವೇತನವಿಲ್ಲ ಸುಮಾರು ಅತಿಥಿ ಉಪನ್ಯಾಸಕರು ತೊಂದರೆಗೆ ಸಿಲುಕಿದ್ದಾರೆ. ₹ 3 ಕೋಟಿ ಬಾಕಿ ವೇತನ ಹೊಂದಿಸಲು ವಿಶ್ವವಿದ್ಯಾಲಯ ಏದುಸಿರು ಬಿಡುತ್ತಿದೆ.

ವಿಶ್ವವಿದ್ಯಾಲಯ ಜ್ಞಾನ ಗಂಗಾ ಕ್ಯಾಂಪಸ್, ಆಳಂದದಲ್ಲಿನ ಸ್ನಾತಕೋತ್ತರ ಕೇಂದ್ರದ ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಇದ್ದಾರೆ. ಪ್ರತಿ ವಾರದಲ್ಲಿ 10ರಿಂದ 16 ಕ್ಲಾಸ್ ಪಾಠ ಮಾಡಿ, ತಿಂಗಳ ಸಂಬಳಕ್ಕಾಗಿ ಎದುರು ನೋಡುವಂತೆ ಆಗಿದೆ. ಇವರೆಲ್ಲರ ನಿತ್ಯದ ಬದುಕು ಮತ್ತು ಕುಟುಂಬ ನಿರ್ವಹಣೆಯೂ ಇದೇ ವೇತನದ ಮೇಲೆ ಅವಲಂಬಿತವಾಗಿದೆ.

ಕಳೆದ ಆಗಸ್ಟ್‌ ತಿಂಗಳಲ್ಲಿ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಹಾಗೂ ಗುತ್ತಿಗೆ ನೌಕರರು ಅಹೋರಾತ್ರಿ ಧರಣಿ ಕುಳಿತಿದ್ದರು. ಒತ್ತಡಕ್ಕೆ ಮಣಿದ ಅಂದಿನ ಕುಲಪತಿ ಪ್ರೊ.ದಯಾನಂದ ಅಗಸರ ಅವರು ₹ 36 ಸಾವಿರ ಇದ್ದ ಅತಿಥಿ ಉಪನ್ಯಾಸಕರ ಗೌರವ ಧನವನ್ನು ₹ 50 ಸಾವಿರಕ್ಕೆ ಏರಿಕೆ ಮಾಡಿದ್ದರು.

ವೇತನ ಪರಿಷ್ಕರಣೆಯ ಬಳಿಕ ₹ 5 ಸಾವಿರ ಟಿಡಿಎಸ್ ಕಡಿತವಾಗಿ ಡಿಸೆಂಬರ್ ಅಂತ್ಯದವರೆಗೆ ₹45 ಸಾವಿರ ವೇತನ ಸರಿಯಾಗಿ ಬರುತ್ತಿತ್ತು. ಒಂದಿಷ್ಟು ಹಣ ಉಳಿತಾಯವಾಗಿ, ಕುಟುಂಬದ ಆರ್ಥಿಕ ಸ್ಥಿತಿಯೂ ಸುಧಾರಣೆ ಕಾಣುತಿತ್ತು. ಆದರೆ, ಜನವರಿಯಿಂದ ಮಾರ್ಚ್‌ವರೆಗೂ ಒಂದೇ ಒಂದು ರೂಪಾಯಿ ವೇತನ ಬಂದಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಮಾಡವುದು ಕಷ್ಟವಾಗುತ್ತಿದೆ ಎಂದು ಅತಿಥಿ ಉಪನ್ಯಾಸಕರೊಬ್ಬರು ಅವಲತ್ತುಕೊಂಡರು.

ಗುಲಬರ್ಗಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಅರುಣಕುಮಾರ ಕುರನೆ, ‘ಬಾಕಿ ವೇತನ ಕೊಡುವಂತೆ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಸರ್ಕಾರದಿಂದ ಅನುದಾನ ಬರುತ್ತಿಲ್ಲ. ಸಹಕರಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲವನ್ನೂ ಸಹಿಸಿಕೊಂಡಿದ್ದೇವೆ’ ಎಂದರು.

‘ಕುಲಪತಿಗಳು, ಕುಲಸಚಿವರು ಪ್ರಭಾರ ಹುದ್ದೆಗಳಲ್ಲಿ ಇರುವುದರಿಂದ ನಿರ್ಧಾರ ತೆಗೆದುಕೊಳ್ಳುವ ಹಂತದಲ್ಲಿ ಇಲ್ಲ. ಹೀಗಾಗಿ, ವಿವಿಯ ಇತರೆ ಮೂಲಗಳಿಂದ ಆದಾಯವನ್ನು ಹೊಂದಿಸಲು ಯತ್ನಿಸುತ್ತಿದ್ದಾರೆ. ಮುಂದಿನ ತಿಂಗಳಲ್ಲಿ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಪ್ರತಿ ತಿಂಗಳು ಸರಿಯಾಗಿ ವೇತನ ಬಿಡುಗಡೆ ಮಾಡಿದರೆ ಕುಟುಂಬ ನಿರ್ವಹಣೆ, ಮಕ್ಕಳ ಶಾಲಾ ಶುಲ್ಕ, ಮನೆ ಬಾಡಿಗೆ ಕಟ್ಟಲು ಅನುಕೂಲ ಆಗುತ್ತದೆ’ ಎಂದು ಹೇಳಿದರು.

‘ಹೊಂದಾಣಿಕೆ ಮಾಡಿ ಕೊಡುತ್ತೇವೆ’

‘ವಿಶ್ವವಿದ್ಯಾಲಯಕ್ಕೆ ಸರ್ಕಾರದಿಂದ ಅನುದಾನ ಬರುತ್ತಿಲ್ಲ. ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆಯಾಗಿದೆ. ಪ್ರವೇಶಾತಿ ಪರೀಕ್ಷಾ ಶುಲ್ಕವನ್ನು ಜಮಾಯಿಸಿ ಹೊಂದಾಣಿಕೆ ಮಾಡಿ ಬಾಕಿ ವೇತನವನ್ನು ಏಪ್ರಿಲ್‌ ತಿಂಗಳಲ್ಲಿ ಕೊಡುತ್ತೇವೆ’ ಎಂದು ವಿಶ್ವವಿದ್ಯಾಲಯ ಪ್ರಭಾರ ಕುಲಸಚಿವ ಪ್ರೊ.ರಮೇಶ ಲಂಡನಕರ್  ತಿಳಿಸಿದರು.

‘ಹಣಕಾಸಿನ ಮುಗ್ಗಟ್ಟಿನಿಂದ ವಿಶ್ವವಿದ್ಯಾಲಯವು ಅತಂತ್ರ ಸ್ಥಿತಿಯಲ್ಲಿದೆ. ಅತಿಥಿ ಉಪನ್ಯಾಸಕರಿಗೆ ಮಾತ್ರವೇ ತಿಂಗಳಿಗೆ ₹ 1 ಕೋಟಿ ವೇತನ ಕೊಡಬೇಕಿದೆ. ಬೋಧಕೇತರ ಸಿಬ್ಬಂದಿ ಮೂಲಸೌಕರ್ಯಗಳ ವೆಚ್ಚ ಪರೀಕ್ಷಾ ಮೌಲ್ಯಮಾಪನ ವೆಚ್ಚ ಸೇರಿದರೆ ಅದು ಇನ್ನೂ ಬೆಳೆಯುತ್ತಿದೆ. ಯಾವುದಾದರು ಅನುದಾನವನ್ನು ಹೊಂದಿಸಿ ಬಾಕಿ ಇರುವ ₹ 3 ಕೋಟಿ ವೇತನ ಬಿಡುಗಡೆ ಮಾಡುತ್ತೇವೆ’ ಎಂದರು.

prajaprabhat

Recent Posts

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

13 minutes ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

18 minutes ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

21 minutes ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

41 minutes ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

3 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

3 hours ago