ಬೆಂಗಳೂರು04.ಜೂನ್.25:- ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರಿಗೆ ಕೊನೆಗೂ ರಾಜ್ಯ ಸರ್ಕಾರ ಸಹಿ ಸುದ್ಧಿ ನೀಡಿದೆ.
ಹಲವು ಸೌಲಭ್ಯಗಳು 2024ರ ಜ.1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡುಗಂಟು ಯೋಜನೆಯ ಪ್ರಯೋಜನ ಸಿಗಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ 60 ವರ್ಷ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರಿಗೂ ಈ ಯೋಜನೆಗೆ ಒಳಪಡಲಿದ್ದಾರೆ.
ರಾಜ್ಯ ಸರ್ಕಾರದ ಯೋಜನೆಗೆ ಒಟ್ಟು 44.15 ಕೋಟಿ ರೂಪಾಯಿ ವ್ಯಯಿಸಲಾಗುತ್ತದೆ. ಸೇವಾ ಭದ್ರತೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ 2024ರಲ್ಲಿ ಅತಿಥಿ ಉಪನ್ಯಾಸಕರು ನಡೆಸಿದ್ದ ಧರಣಿ, ಪಾದಯಾತ್ರೆಯ ನಂತರ ಸರ್ಕಾರ ನಡೆಸಿದ ಮಾತುಕತೆಯಲ್ಲಿ ಇಡುಗಂಟು ನೀಡುವ ಭರವಸೆ ಸೇರಿತ್ತು. ಅಂದು ನೀಡಿದ್ದ ಭರವಸೆಯಂತೆ ಉನ್ನತ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. 2024ರ ಜನವರಿ 1ಕ್ಕಿಂತ ಹಿಂದಿನ ಐದು ವರ್ಷಗಳಲ್ಲಿ ಕನಿಷ್ಠ ಒಂದು ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ದಾಟಿದವರು ಇಡುಗಂಟು ಸೌಲಭ್ಯ ಪಡೆಯಬಹುದು.
ಅತಿಥಿ ಉಪನ್ಯಾಸಕರು ಸಲ್ಲಿಸಿದ ಸೇವಾ ವರ್ಷಗಳ ಆಧಾರದಲ್ಲಿ ಪ್ರತಿ ವರ್ಷಕ್ಕೆ 50 ಸಾವಿರದಂತೆ ಗರಿಷ್ಠ 10 ವರ್ಷಗಳ ಸೇವೆಯನ್ನು ಪರಿಗಣಿಸಲಾಗುವುದು. ಆಯಾ ಶೈಕ್ಷಣಿಕ ವರ್ಷದಲ್ಲಿ 240 ದಿನಗಳು ಕೆಲಸ ಮಾಡಿರಬೇಕು. 8 ತಿಂಗಳಿಗಿಂತ ಕಡಿಮೆ ಅವಧಿ ಕೆಲಸ ಮಾಡಿದ್ದರೆ ಅದನ್ನು ಭಾಗಶಃ ವರ್ಷ ಎಂದು ಲೆಕ್ಕಕ್ಕೆ ತೆಗೆದುಕೊಳ್ಳಲಾಗುವುದು. ಕೆಲಸದ ಅವಧಿಯಲ್ಲೇ ಮರಣ ಹೊಂದಿದರೆ ಅವರ ಕುಟುಂಬಕ್ಕೆ ಮೊತ್ತವನ್ನು ಹಸ್ತಾಂತರಿಸಲಾಗುವುದು. ಆಯಾ ಕಾಲೇಜುಗಳ ಪ್ರಾಂಶುಪಾಲರು ಸೇವಾ ದೃಢೀಕರಣ ಪತ್ರ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. .
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…