ಶಿವಮೊಗ್ಗ.19.ಫೆ.25: . ಸರ್ಕಾರಿ ಶಾಲೆ ಮತ್ತು ಕಾಲೇಜಗಳಲಿ ಕಾರ್ಯನಿರ್ವಹಿಸಿತಿರುವು ಅತಿಥಿ ಉಪನ್ಯಾಸಕರಿಗೆ ಆಗಸ್ಟ್ 2024 ನಿಂದ ಅತಿಥಿ ಶಿಕ್ಷಕರಿಗೆ ವೇತನವೇ ಬಂದಿಲ್ಲ. ಪಾಠ ಮಾಡುವ ಗುರುಗಳಿಗೆ ತಿಂಗಳಾನುಗಟ್ಟಲೆ ವೇತನ ಪಾವತಿ ಮಾಡದಿರುವ ಸ್ಥಿತಿ ರಾಜ್ಯ ಸರಕಾರಕ್ಕೆ ಬಂದಿರುವುದು ದುರ್ದೈವ ಎಂದು ಕ್ರಾಂತಿವೀರ ಬ್ರಿಗೇಡ್ ಮುಖ್ಯಸ್ಥ ಕೆ.ಎಸ್. ಈಶ್ವರಪ್ಪ ಹೇಳಿದರು.
ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಕೂಡಲೇ ಗೌರವಧನ ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬಹಿರಂಗ ಪತ್ರ ಬರೆಯುವುದಾಗಿ ಕ್ರಾಂತಿವೀರ ಬ್ರಿಗೇಡ್ ಸಂಸ್ಥಾಪಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಅತಿಥಿ ಉಪನ್ಯಾಸಕರು ನಾವು ಬದುಕಬೇಕೋ ಸಾಯಬೇಕೋ ಎಂದು ಕೇಳುತ್ತಿದ್ದಾರೆ. ಇದೇ ಪದ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುತ್ತಿದ್ದೇನೆ. ಸರಕಾರ ಬದುಕಿದೆಯೋ ಸತ್ತಿದೆಯೋ ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.
ಅವರೇನು ಗ್ಯಾರಂಟಿ ಹಣ ಕೇಳುತ್ತಿಲ್ಲ. ಶಿಕ್ಷಕರು ಆತ್ಮಹತ್ಯೆ ಮಾಡಿಕೊಳ್ಳಲು ಸರಕಾರ ಪ್ರೋತ್ಸಾಹ ನೀಡುತ್ತಿದೆ. ಎಲ್ಲ ಮಂತ್ರಿಗಳ ಸಂಬಳ ನಿಲ್ಲಿಸಲಿ, ಆಗ ಗೊತ್ತಾಗುತ್ತದೆ ಎಂದರು.
ಪಾಠ ಮಾಡುವ ಗುರುಗಳಿಗೆ ವೇತನ ಪಾವತಿಸಲಾಗದ ದುರ್ಗತಿ ರಾಜ್ಯ ಸರ್ಕಾರಕ್ಕೆ ಬಂದಿರುವುದು ದುರ್ದೈವ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.
ಅತಿಥಿ ಉಪನ್ಯಾಸಕರ, ಶಿಕ್ಷಕರ ಅವರ ಸೇವೆಗೆ ಬೆಲೆಯಿಲ್ಲವೆ? ಅವರು ನೇಣು ಹಾಕಿಕೊಳ್ಳಬೇಕೆ? ನೇಣು ಹಾಕಿಕೊಂಡರೆ ಮಾತ್ರ ಈ ಸರ್ಕಾರಕ್ಕೆ ಅತಿಥಿ ಶಿಕ್ಷಕರ ಸಮಸ್ಯೆ ಗೊತ್ತಾಗುತ್ತದೆಯೇ ಎಂದು ಪ್ರಶ್ನಿಸಿದರು.
ಮೊದಲು ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಗೌರವಧನ ಬಿಡುಗಡೆ ಮಾಡಬೇಕು. ಸುಮಾರು 60 ಸಾವಿರ ಮಂದಿ ಈ ವರ್ಗಕ್ಕೆ ಸೇರಿದವರಿದ್ದಾರೆ. ಇವರೆಲ್ಲ ಜೀವನ ಮಾಡುವುದು ಹೇಗೆ? ಹಾಗಿದ್ದರೆ ಸಚಿವರು ಹಾಗೂ ಶಾಸಕರ ವೇತನವನ್ನೂ ಸರ್ಕಾರ ತಡೆಹಿಡಿಯಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ಗುತ್ತಿಗೆದಾರರ ಸಮಸ್ಯೆಯೂ ಸಾಕಷ್ಟಿದೆ. ಆಗಿರುವ ಕಾಮಗಾರಿಗಳ ಬಿಲ್ 64 ಸಾವಿರ ಕೋಟಿ ರೂ. ಬಾಕಿ ಇದೆ. ಶಿವಮೊಗ್ಗ ಜಿಲ್ಲೆಯ ಗುತ್ತಿಗೆದಾರರಿಗೆ 2,250 ಕೋಟಿ ರೂ. ಬಿಡುಗಡೆ ಆಗಬೇಕಿದೆ. ಹೀಗಾದರೆ ಗುತ್ತಿಗೆದಾರರು ಕೂಡ ಆತ್ಮಹತ್ಯೆಯ ದಾಳಿ ತುಳಿಯುವುದಿಲ್ಲವೆ?
ಈ ಹಿಂದೆ ಕಾಂಗ್ರೆಸ್ನವರು ಪ್ರತಿಪಕ್ಷದಲ್ಲಿದ್ದಾಗ ಏನೆಲ್ಲಾ ಬೊಬ್ಬೆ ಹೊಡೆಯುತ್ತಿದ್ದರು? ಈಗ ಅವರಿಗೆ ಗುತ್ತಿಗೆದಾರರ ಸ್ಥಿತಿ ಅರ್ಥವಾಗುತ್ತಿಲ್ಲವೆ ಎಂದು ಕಿಡಿಕಾರಿದರು.
ನಗರಸಭೆ ಮಾಜಿ ಅಧ್ಯಕ್ಷ ಎಂ.ಶಂಕರ್, ಪ್ರಮುಖರಾದ ಬಾಲು, ಸೋಗಾನೆ ರಮೇಶ್, ಮೋಹನ್ ಜಾಧವ್, ಗುರುಮೂರ್ತಿ, ಪ್ರಶಾಂತ್, ಟಾಕ್ರಾನಾಯ್ಕ ಸುದ್ದಿಗೋಷ್ಠಿಯಲ್ಲಿದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…