ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಅತಿಥಿ ಉಪನ್ಯಾಸಕರು, ಹಲವು ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿಯೇ ಅತಿಥಿ ಉಪನ್ಯಾಸಕರ ಹುದ್ದೆ, ಕಾಯಂ ಮಾಡಬೇಕು ಎಂಬ ಒತ್ತಾಯ ಈ ಮೊದಲಿನಿಂದ ಕೇಳಿಬರುತ್ತಿದೆ. ಹಲವು ವರ್ಷಗಳಿಂದಲೂ, ಈ ಕುರಿತು ಆಗ್ರಹ ಕೇಳಿಬರುತ್ತಿತ್ತು. ಇದೀಗ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸೋಕೆ ಆಗ್ರಹಿಸಿ ಬೃಹತ್ ಹೋರಾಟ ಶುರುವಾಗಿದೆ.
ಅತಿಥಿ ಉಪನ್ಯಾಸಕರ ಕಾಯಂ ಮಾಡಿಕೊಳ್ಳುವಂತೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಯನ್ನು ಮಾಡಿದ್ದಾರೆ. ಧಾರವಾಡ ಕಲಾ ಭವನದಿಂದ ಕೋರ್ಟ್ ವೃತ್ತದವರೆಗೆ ಪಂಜಿನ ಮೆರವಣಿಗೆ ಮಾಡಿದ ಉಪನ್ಯಾಸಕರು, ತಮ್ಮನ್ನ ಕಾಯಂ ಉಪನ್ಯಾಸಕರು ಎಂದು ಪರಿಗಣಿಸಲು, ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನು ಈ ಮೂಲಕ ಮಾಡಿದ್ದಾರೆ. ಹಾಗಾದರೆ ಇವರ ಬೇಡಿಕೆಗಳು ಏನೇನು? ಬನ್ನಿ ತಿಳಿಯೋಣ.
ಅತಿಥಿ ಉಪನ್ಯಾಸಕರ ಕಾಯಂ ಮಾಡಿಕೊಳ್ಳುವಂತೆ, ಅನೇಕ ವರ್ಷಗಳಿಂದ ಕೂಡ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರಗಳು ಮಾತ್ರ ಈ ಉಪನ್ಯಾಸಕರತ್ತ ತಿರುಗಿಯೂ ನೋಡಿಲ್ಲ. ಹೀಗಾಗಿ ಅತಿಥಿ ಉಪನ್ಯಾಸಕರ ಹೋರಾಟ ಮತ್ತೆ ಶುರುವಾದ ರೀತಿ ಕಾಣುತ್ತಿದೆ. ಅತಿಥಿ ಉಪನ್ಯಾಸಕರ ಪ್ರತಿಭಟನೆ ಹಿನ್ನೆಲೆ, ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಿಗೆ ಹಿನ್ನಡೆ ಆಗುತ್ತಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ. ಇಷ್ಟೆಲ್ಲ ಬೆಳವಣಿಗೆ ನಡುವೆ ಹೋರಾಟ ತೀವ್ರವಾಗುತ್ತಿದೆ.
ಕೆಲ ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಗಳನ್ನ ನಡೆಸುವ ವೇಳಾಪಟ್ಟಿಯನ್ನ ಬಿಡುಗಡೆ ಮಾಡಿವೆ. ಆದರೆ ತರಗತಿ ಸರಿಯಾಗಿ ನಡೆಯದೆ, ವಿಧ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಬೇಕು? ಎಂಬ ಪ್ರಶ್ನೆ ವಿದ್ಯಾರ್ಥಿ ಸಮುದಾಯದಿಂದ ಕೇಳಿ ಬರುತ್ತಿದೆ. ಹೀಗಾಗಿ, ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು ಎಂಬ ಆಗ್ರಹ ಕೂಡ ಮಾಡಲಾಗುತ್ತಿದೆ. ಈ ಮಧ್ಯೆ ಹೋರಾಟದ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗುತ್ತಿದೆ.
ಅತಿಥಿ ಉಪನ್ಯಾಸಕರ ಪ್ರಮುಖ ಬೇಡಿಕೆ ಪೈಕಿ, ರಾಜ್ಯ ಸರ್ಕಾರ ಈ ವಿಚಾರದಲ್ಲಿ ಯಾವುದೆ ರೀತಿ ವಿಳಂಬ ಮಾಡದೆ ಅತಿಥಿ ಉಪನ್ಯಾಸಕರಿಗಾಗಿ ನೀಡುವ ಸಂಬಳವನ್ನು ಸರ್ಕಾರಿ ನೌಕರರಿಗೆ ನೀಡುವಂತೆ ಪ್ರತಿ ತಿಂಗಳು ನೀಡಬೇಕು.
ಅತ್ಯಂತ ಕಡಿಮೆ ಗೌರವ ಧನಕ್ಕೆ ಎರಡು ದಶಕಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ಮಾಡುತ್ತಾ ಬಂದಿದ್ದ ಐದು ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ.
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿ ಮಾಡಿ ರುವ ಅರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ಸೇವೆಯನ್ನು 2024–25ನೇ ಸಾಲಿಗೆ ಬಳಸಿಕೊಳ್ಳದೇ ಇರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಯುಜಿಸಿ ನಿಗದಿ ಮಾಡಿರುವ ಅರ್ಹತೆ ಗಳನ್ನೇ ಅತಿಥಿ ಉಪನ್ಯಾಸಕರ ಆಯ್ಕೆಗೂ ಅನ್ವಯಿಸಬೇಕು ಎಂದು ಹೈಕೋರ್ಟ್ ಕಳೆದ ಸೆಪ್ಟೆಂಬರ್ನಲ್ಲಿ ತೀರ್ಪು ಪ್ರಕಟಿಸಿತ್ತು. ಹಾಗಾಗಿ, ಕಾಲೇಜು ಶಿಕ್ಷಣ ಇಲಾಖೆ ಯುಜಿಸಿ ಅರ್ಹತೆ ಹೊಂದಿಲ್ಲ ದವರನ್ನು ಕೈಬಿಟ್ಟು ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ 2007–08ಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಎಂ.ಫಿಲ್ ಆದವರಿಗೂ ಅವಕಾಶ ನೀಡಲಾಗಿತ್ತು. 2009ರ ಜುಲೈ 11ಕ್ಕೂ ಹಿಂದೆ ಎಂ.ಫಿಲ್ ವಿದ್ಯಾರ್ಹತೆ ಪಡೆದಿದ್ದವರು ಅರ್ಜಿ ಸಲ್ಲಿಸಿ, ನೇಮಕಾತಿ ಆದೇಶವನ್ನೂ ಪಡೆದಿದ್ದರು.
ಅತಿಥಿ ಉಪನ್ಯಾಕರಿಗೆ ಯುಜಿಸಿ ನಿಯಮಾವಳಿ ಪ್ರಕಾರ ವೇತನ ನೀಡವುದು ಕೂಡ ಪ್ರಮುಖ ಬೇಡಿಕೆಯಾಗಿದೆ. ಈ ವಿಷಯದಲ್ಲಿ ಸರ್ಕಾರ ತಕ್ಷಣವೇ ಪರಿಹಾರವನ್ನು ನೀಡಿ, ತರಗತಿಗಳು ನಡೆಯಲು ಅನುವು ಮಾಡಿಕೊಡಬೇಕೆಂಬ ಬೇಡಿಕೆಗಳುಳ್ಳ ಮನವಿ ಪತ್ರವನ್ನು ಹೋರಾಟಗಾರರು ಸಲ್ಲಿಸಿದರು.
ಸರ್ಕಾರದ ನಿರ್ಧಾರಕ್ಕೆ ಅತಿಥಿ ಉಪನ್ಯಾಸಕರು ಸಡ್ಡು ಹೊಡೆದಿದ್ದು, ವೇತನ ಹೆಚ್ಚಳ ಸೇರಿ ಬೇರೆ ಯಾವ ಸೌಲಭ್ಯವೂ ಬೇಡ. ಸೇವೆ ಕಾಯಂ ಒಂದೇ ನಮ್ಮ ಬೇಡಿಕೆ. ಅದು ಈಡೇರುವವರೆಗೆ ಹೋರಾಟದಿಂದ ಹಿಂದೆಸರಿ ಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ, ಇಲ್ಲ. ಜ.1ರಂದು ತುಮಕೂರಿನಿಂದ ಬೆಂಗಳೂರಿಗೆ ಬೃಹತ್ ನಡೆಸುವುದಾಗಿ ಘೋಷಿಸಿದ್ದಾರೆ
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ‘ಸೇವೆ ಕಾಯಂ’ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ರಾಜ್ಯ ಸರ್ಕಾರ, ಇದರ ಬದಲಿಗೆ ಜನವರಿಯಿಂದ 5 ಸಾವಿರ ರು. ವೇತನ ಹೆಚ್ಚಳ ಸೇರಿದಂತೆ ಉಪನ್ಯಾಸಕರ ಪರವಾಗಿ 4 ನಿರ್ಧಾರಗ ಳನ್ನು ಕೈಗೊಂಡಿದೆ. ಜತೆಗೆ, ಮುಷ್ಕರ ಕೈಬಿಟ್ಟು ತಕ್ಷಣ ಕರ್ತವ್ಯಕ್ಕೆ ಹಾಜರಾಗದಿ ದ್ದರೆ ತಮ್ಮ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡಿಕೊಳ್ಳಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆಯನ್ನೂ ನೀಡಿದೆ.
ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಅತಿಥಿ ಉಪನ್ಯಾಸಕರು ಸಡ್ಡು ಹೊಡೆದಿದ್ದು, ವೇತನ ಹೆಚ್ಚಳ ಸೇರಿ ಬೇರೆ ಯಾವ ಸೌಲಭ್ಯವೂ ಬೇಡ. ಸೇವೆ ಕಾಯಂ ಒಂದೇ ನಮ್ಮ ಬೇಡಿಕೆ. ಅದು ಈಡೇರುವವರೆಗೆ ಹೋರಾಟದಿಂದ ಹಿಂದೆಸರಿ ಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ, ಇಲ್ಲ. ಜ.1ರಂದು ತುಮಕೂರಿನಿಂದ ಬೆಂಗಳೂರಿಗೆ ಬೃಹತ್ ನಡೆಸುವುದಾಗಿ ಘೋಷಿಸಿದ್ದಾರೆ.
ನಮಗೆ 1 ರು. ವೇತನ ಹೆಚ್ಚಳವೂ ಬೇಡ, ನಾವು ಕೇಳುತ್ತಿರುವುದು ಸೇವೆ ಕಾಯಮಾತಿ ಮಾತ್ರ. ನಾವು ಕರ್ತವ್ಯಕ್ಕೆ ಹಾಜರಾಗುವು ದಿಲ್ಲ ಎಂದು ಅತಿಥಿ ಉಪನ್ಯಾಸಕರು ಹೇಳಿದ್ದಾರೆ. ಅಲ್ಲದೆ, ಜ.1ರಂದು ತುಮಕೂರಿನಿಂದ ಬೆಂಗಳೂರಿಗೆ ಬೃಹತ್ ಪಾದಯಾತ್ರೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಸರ್ಕಾರದ ನಡುವಿನಹಗ್ಗ-ಜಗ್ಗಾಟ ಮುಂದುವರೆದಂತಾಗಿದ್ದು, ಕಳೆದ ಒಂದು ತಿಂಗಳಿನಿಂದ ಪದವಿ ಕಾಲೇಜಗಳ ಪಠ್ಯ ಪ್ರವಚನ ಸ್ಥಗಿತ ಈಡೇರಿಕೆಗೆ ಆಗ್ರಹಿಸಿ ಕಳೆದ 37 ದಿನಗಳಿಂದ ತರಗತಿ ಬಹಿಷ್ಕರಿಸಿ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವ ಅವರು ವಿಕಾಸಸೌಧದಲ್ಲಿ ಶುಕ್ರವಾರ ಸಭೆ ನಡೆಸಿ ಮನವೊಲಿಸುವ ಪ್ರಯತ್ನ ನಡೆಸಿದರು. ಆದರೆ, ಸೇವೆ ಕಾಯಂ ಬಿಟ್ಟು ಸರ್ಕಾರದ ಯಾವ ಸಂಧಾನಕ್ಕೂ ಅತಿಥಿ ಉಪನ್ಯಾಸಕರು ಒಪ್ಪಲಿಲ್ಲ. ಇದರಿಂದ ಸಭೆ ವಿಫಲವಾಗಿವೆ.
ಇದನ್ನ ಒಪ್ಪಿ ಎಲ್ಲ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು. ತಪ್ಪಿದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಮ್ಮ ಸ್ಥಾನಗಳಿಗೆ ಅನಿವಾರ್ಯವಾಗಿ ಹೊಸಬ ನಡೆಸಿದ ಸಚಿವರು, ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡಲು ಕಾನೂನು ವ್ಯಾಪ್ತಿಯಲ್ಲಿ ಅವಕಾಶವಿಲ್ಲ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ. ಬದಲಿಗೆ ಹೊಸವರ್ಷ 2024ರ ಜನವರಿ ತಿಂಗಳಿಂದಲೇ ಅವರಿಗೆ 5000 ರು. ವೇತನ ಹೆಚ್ಚಳ.
ವಾರ್ಷಿಕ 5 ಲಕ್ಷ ರು. ಆರೋಗ್ಯ ವಿಮೆ, 60 ವರ್ಷ ಮೀರಿದವರು ಬರಿಗೈಯಲ್ಲಿ ಹೋಗಬಾರದೆಂದು ಕನಿಷ್ಠ 10 ವರ್ಷ ಸೇವೆ ಮಾಡಿರುವವರಿಗೆ ವರ್ಷಕ್ಕೆ 50 ಸಾವಿರರು.ನಂತೆ 5 ಲಕ್ಷರು, ಇಡುಗಂಟು ನೀಡುವುದು, ನಿತ್ಯ 15 ಗಂಟೆ ಕಾರ್ಯಭಾರ ಇರುವವರಿಗೆ ಮಾಸಿಕ 1 ರಜೆ ನೀಡಲು ಸರ್ಕಾರ ತೀರ್ಮಾನಿಸಿದೆ.
ಪ್ರತೀ ವರ್ಷ ಕೌನ್ಸೆಲಿಂಗ್ ಮೂಲಕ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯುತ್ತದೆ. ಕೌನ್ಸೆಲಿಂಗ್ ಕೈಬಿಡಬೇಕು ಎಂಬ ಬೇಡಿಕೆ ಇದೆ. ಆದರೆ, ಇದು ಕೂಡ ಸಾಧ್ಯವಿಲ್ಲ, ಆದರೆ, ಕಾಲೇಜುಗಳಲ್ಲಿ ಪ್ರಾಯವಾ ಲರು ಹಾಗೂ ಇತರೆ ಕಾಯಂ ಪ್ರಾಧ್ಯಾಪಕರು ಉಪನ್ಯಾಸಕರನ್ನು ಅಗೌರವದಿಂದ ನಡೆಸಿಕೊಳ್ಳುತ್ತಾರೆ ಎಂಬ ಬಗ್ಗೆ ದೂರುಗಳಿವೆ.
ಈ ಸಂಬಂಧ ಈಗಾಗಲೇ ಬೆಳಗಾವಿ ಅಧಿವೇಶನದ ವೇಳೆ ಯಲ್ಲೇ ಅತಿಥಿ ಉಪನ್ಯಾಸಕರನ್ನೂ ಸಮಾನ ಗೌರವದಿಂದ ನೋಡಿಕೊಳ್ಳಬೇಕೆಂದು, ಅವರಿಗೆ ಇರುವ ನೈಜ ಕಾರ್ಯಭಾರ ಮುಚ್ಚಿಡದೆ ನೀಡಬೇಕೆಂದು ಎಲ್ಲ ಕಾಲೇಜುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.
ರನ್ನು ನೇಮಕ ಮಾಡಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕೌನ್ಸೆಲಿಂಗ್ ವೇಳೆ ಅವರ ಸೇವಾ ಅವಧಿಗೆ ಅನುಗುಣವಾಗಿ ವರ್ಷಕ್ಕೆ 3 ಕೃಪಾಂಕ ಸಿಗುತ್ತದೆ. ಉದಾಹಣೆಗೆ 16 ವರ್ಷ ಸೇವೆ ಮಾಡಿದ್ದರೆ 48 ಅಂಕ ಬರುತ್ತದೆ. ಇದರಿಂದ ಕೌನ್ಸೆಲಿಂಗ್ನಲ್ಲಿ ಇತರೆ ಅಭ್ಯರ್ಥಿಗಳಿಗಿಂತ ಸೇವೆಯಲ್ಲಿರುವವರ ಆಯ್ಕೆಗೆ ಆದ್ಯತೆ ದೊರೆಯುತ್ತದೆ. ಅವರ ದಾಖಲಾತಿಗೆ ಸೂಕ್ತ ಗುರುತಿನ ಚೀಟಿ ನೀಡಲು ಪ್ರಾಂಶುಪಾಲರುಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಇವತ್ತಿನ ಎಲ್ಲ ನಿರ್ಧಾರಗಳು ಕೇವಲ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಅತಿಥಿ ಉಪನ್ಯಾಸಕರಿಗೆ ಮಾತ್ರವಲ್ಲ, ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಕಾಲೇಜು ಗಳ ಅತಿಥಿ ಉಪನ್ಯಾಸಕರಿಗೂ ಅನ್ವಯಿಸಲಿವೆ ಎಂದು ಅವರು ಸ್ಪಷ್ಟಪಡಿಸಿದರು.
ಅತಿಥಿ ಉಪನ್ಯಾಸಕರ ಸಡ್ಡು:
ಸರ್ಕಾರದ ನಿರ್ಧಾರಕ್ಕೆ ಅತಿಥಿ ಉಪನ್ಯಾಸಕರು ಸಡ್ಡು ಹೊಡೆದಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷಹನುಮಂತಗೌಡ ಕಲ್ಮನಿ, ಸರ್ಕಾರದ ನಿರ್ಧಾರಕ್ಕೆ ನಾವ್ಯಾರೂ ಒಪ್ಪಿಲ್ಲ.
ಶುಭ ಸುದ್ದಿ ಕೊಡುತ್ತೇನೆಂದು ಹೇಳಿ ಭರವಸೆ ಹುಸಿಗೊಳಿಸಿದ್ದಾರೆ. ಕನಿಷ್ಠ ವರ್ಷಕ್ಕೆ 12 ತಿಂಗಳಂತೆ 60 ವರ್ಷ ಸೇವೆ ಮಾಡಬಹುದು ಎಂದಾದರೂ ಹೇಳಿದ್ದರೆ ಒಪ್ಪಬಹುದಿತ್ತು. ಆದರೆ, ಸರ್ಕಾರ ಹೇಳಿರುವ ಅಂಶಳಿಂದ ಉಪ ನ್ಯಾಸಕರಿಗೆ ಯಾವುದೇ ಉಪಯೋಗವಿಲ್ಲ. ಕಕ್ಕೊರೆಸುವ ತಂತ್ರ ನಡೆಸಿದೆ. ಸಚಿವರು ತಪ್ಪು ಸಂದೇಶ ನೀಡಿದ್ದಾರೆ. ನಮ್ಮ ಸಂಘಟನೆಗಳು ಬೇರೆ ಬೇರೆ ಇರಬಹುದು.
ಎಲ್ಲರ ಬೇಡಿಕೆ ಒಂದೇಸೇವಾ ಭದ್ರತೆ. ಅದು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲಲ್ಲ ಎಂದು ಸಪ್ತಪಡಿಸಿದರು.ಈವೇಳೆ ಸಂಘದಪದಾಧಿಕಾರಿ ಶಿವಪ್ಪ, ಪ್ರಸನ್ನ, ನರೇಂದ್ರ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…