ಅತಿಥಿ ಉಪನ್ಯಾಸಕರ ತಡೆಯಾಜ್ಞೆ ತೆರವಿಗೆ ಒತ್ತಾಯ.!

ಮೈಸೂರು.10.ಏಪ್ರಿಲ್.25:-  ಇಂದು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ತಕ್ಷಣೆ ತುಂಬಕೊಳಬಕು. ಸರ್ಕಾರ ಬೇಕೆಂತೆ ಅತಿಥಿ ಉಪನ್ಯಾಸಕರಿಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಕ್ಕೆ ಕ್ರಮ ವಹಿಸಬೇಕು.

ಸರ್ಕಾರವೇ ಅಡ್ಡಗಾಲು ಹಾಕುತ್ತಿರುವುದು ಸರಿಯಲ್ಲ. ಕೂಡಲೇ ಈ ಸಂಬಂಧ ನ್ಯಾಯಾಯಲದಲ್ಲಿ ಇರುವ ತಡೆಯಾಜ್ಞೆ ತೆರವಿಗೆ ಸರ್ಕಾರ ಕ್ರಮ ವಹಿಸಬೇಕು ಎಂದು ಯುಜಿಸಿ ಅರ್ಹತೆ ಹೊಂದಿರುವ ನಿರುದ್ಯೋಗಿ ಎಚ್.ಡಿ. ಕೋಟೆ ತಾಲ್ಲೂಕು ಮುಳ್ಳೂರಿನ ಎಂ.ಆರ್. ಮಹೇಶ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, 2024ರ ಮೇ ನಲ್ಲಿ ಹೈಕೋರ್ಟ್ ಆದೇಶ ಹೊರಡಿಸಿ, ಯುಜಿಸಿ ಅರ್ಹತೆ ಪಡೆದಿರುವವರಿಗೆ ಮಾತ್ರ ಅತಿಥಿ ಉಪನ್ಯಾಸಕ ಹುದ್ದೆ ನೀಡಬೇಕೆಂದು ತಿಳಿಸಿದೆ. ಆದರೆ, ಸರ್ಕಾರ ಈ ಅರ್ಹತೆ ಇಲ್ಲದವರಿಗೂ ಅನುಕೂಲವಾಗಲೆಂಬ ಉದ್ದೇಶದಿಂದ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಜೊತೆಗೆ ವಿದ್ಯಾರ್ಥಿಗಳ ಹಿತದೃಷ್ಟಿ ಎಂಬ ಕಾರಣ ನೀಡಿ ಆ ವೇಳೆಗಾಗಲೇ ಅತಿಥಿ ಉಪನ್ಯಾಸಕರಾಗಿದ್ದವರನ್ನು ತಾತ್ಕಾಲಿಕವಾಗಿ ಮುಂದುವರಿಸಿತು. ಈ ನಡುವೆ ಇನ್ನಿತರ ಬೆಳವಣಿಗೆಗಳೂ ಆಗಿದ್ದು, ಯುಜಿಸಿ ಅರ್ಹತೆ ಹೊಂದಿರುವ ಸುಮಾರು ಐದು ಸಾವಿರ ಮಂದಿ ನೇಮಕಾತಿಗಾಗಿ ಕಾಯ್ದು ಕುಳಿತಿದ್ದಾರೆ. ಹೀಗಾಗಿ ತಡೆಯಾಜ್ಞೆ ತೆರವಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಯುಜಿಸಿ ಅರ್ಹತೆ ಹೊಂದಿರುವವರನ್ನು ನೇಮಕ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರೂ ತಾವು ಕೂಲಿ ಕೆಲಸ ಮಾಡಿಕೊಂಡಾದರೂ ಬದುಕುತ್ತೇವೆ. ಆದ್ದರಿಂದ ಸರ್ಕಾರ ಯುಜಿಸಿ ಅರ್ಹತೆ ಹೊಂದಿರುವವರ ನೇಮಕಾತಿಗೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಡಾ. ಲಿಂಗರಾಜು, ಎ.ಸಿ. ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

prajaprabhat

Recent Posts

ರಾಜ್ಯ ಸರ್ಕಾರ ಅನುದಾನಿತ ಶಾಲಾ ಶಿಕ್ಷಕರಿಗೆ ಸಹಿ ಸುದ್ಧಿ `ನಿವೃತ್ತಿ ವೇತನ’ ಹೆಚ್ಚಳ ಮಾಡಿ ಸರ್ಕಾರ ಆದೇಶ.!

ಬೆಂಗಳೂರು.12.ಜೂನ್.25:-ರಾಜ್ಯದ ಖಾಸಗಿ ಅನುದಾನಿತ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ…

5 hours ago

ಜೂ.15 ರಂದು ಸಮಾಜ ಕಲ್ಯಾಣ ಸಚಿವ<br>ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.12.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…

5 hours ago

ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಬೀದರ.12.ಜೂನ್.25:- ಚಿದ್ರಿ ಉಪ ಕೇಂದ್ರದಿoದ ಸರಬರಾಜು ಆಗುವ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುಂಪಾ,…

5 hours ago

ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.12.ಜೂನ್.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಬೀದರ…

6 hours ago

ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡರೆ<br>ಕಾನೂನು ಕ್ರಮ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.12.ಜೂನ್.25:- ಜಿಲ್ಲೆಯಲ್ಲಿ ಯಾವುದೇ ಅಂಗಡಿಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಒಂದುವೇಳೆ ನೇಮಿಸಿಕೊಂಡಿರುವುದು ಕಂಡುಬoದತೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು…

6 hours ago

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ

ಬೀದರ.12.ಜೂನ್.25:- ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬoಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ…

6 hours ago