10/06/2025 1:37 AM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ಪ್ರತಿಭಟನೆ.!

ಅತಿಥಿ ಉಪನ್ಯಾಸಕರ ಪ್ರತಿಭಟನೆ.!

Facebook
X
WhatsApp
Telegram

ದಿ.19,ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ. ಜಿಲ್ಲಾ ಘಟಕ ಮಂಡ್ಯ ಇವರ ವತಿಯಿಂದ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.. 2024 25ನೇ ಸಾಲಿಗೆ ಸಂಬಂಧಿಸಿದಂತೆ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿ ಸಂಬಂಧ ಸರ್ಕಾರವು ಯುಜಿಸಿ ಅರ್ಹತೆ ಹೊಂದಿಲ್ಲದ 5500 ಅಧಿಕ ಉಪನ್ಯಾಸಕರನ್ನು ಜನವರಿ 20 ರಿಂದ ನಡೆಯುವ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಅನರ್ಹಗೊಳಿಸಿರುವ ಸಂಬಂಧ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರಿಗೆ ಮಂಡ್ಯದ ಜಿಲ್ಲಾಧಿಕಾರಿಗಳ ಮುಖಾಂತರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತ,

ಕಳೆದ 20 ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಸಂಭಾವನೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುತ್ತಿರುವ ಸಿದ್ದರಾಮಯ್ಯ ಸರ್ಕಾರದವರನ್ನು ಹಕ್ಕು ತಾಯಗಳೊಂದಿಗೆ ವಿವಿಧ ಸಂಘಟನೆಗಳ ಸಹಕಾರ ಪಡೆದು ಪ್ರತಿಭಟನೆ ನಡೆಸಲಾಯಿತು.

ಕೇವಲ 140 ಕೋಟಿ ರೂ ಹಣವನ್ನು ಉನ್ನತ ಶಿಕ್ಷಣ ಇಲಾಖೆಗೆ ಅನುದಾನ ಕೊಟ್ಟಲ್ಲಿ ಮುಂದಿನ 20 ವರ್ಷಗಳವರೆಗೆ ಅತಿಥಿ ಉಪನ್ಯಾಸಕರ ಸಮಸ್ಯೆ ಇಲ್ಲ ದಂತೆ ನೋಡಿಕೊಳ್ಳಬಹುದು.. ಹಾಗೂ ಪ್ರಸ್ತುತ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಯುಜಿಸಿ ಮಾನದಂಡಗಳ ಅನ್ವಯ ಅರ್ಹತೆ ಪಡೆಯದ ಅಭ್ಯರ್ಥಿಗಳನ್ನು ನೇಮಕಾತಿಯಿಂದ ಕೈ ಬಿಡಬಾರದು ಎಂದು ಒತ್ತಾಯಿಸಲಾಯಿತು.

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಈ ಸರ್ಕಾರ ಸ್ಪಂದಿಸುವಂತೆ ಈ ನಾಡಿನ ಪ್ರಖ್ಯಾತ ಸಾಹಿತಿ ಆದಂತಹ ದೇವನೂರು ಮಹಾದೇವರು ಮಾನ್ಯ ಮುಖ್ಯಮಂತ್ರಿಗಳವರಿಗೆ ಒತ್ತಡ ಹಾಕಿ ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಮಧ್ಯಪ್ರವೇಶಿಸಬೇಕೆಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ರಾಜ್ಯ ಸಮಾನ್ಯ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಪಿ ಎಸ್ ನಾಗರಾಜ ರವರು, ಕರ್ನಾಟಕ ಸಮ ಸಮಾಜ ಸಂಘಟನೆಯ ಅಧ್ಯಕ್ಷರಾದ ನರಸಿಂಹಮೂರ್ತಿಯವರು, ಡಾ. ಬಿಆರ್ ಅಂಬೇಡ್ಕರ್ ವಾರಿಯರ್ ಸಂಘಟನೆಯ ಅಧ್ಯಕ್ಷರಾದ ಗಂಗರಾಜುರವರು, ಯುವ ಮುಖಂಡರಾದ ಅಭಿ ಗೌಡರ್ವರು, ವಕೀಲರುಗಳು, ರೈತ ಸಂಘದ ಕಾರ್ಯಕರ್ತರು ಹಾಗೂ ಹಲವು ಅತಿಥಿ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರು,, ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ ಸಿ ಶಿವಾನಂದ ಮೂರ್ತಿರವರು ಸರ್ಕಾರಕ್ಕೆ ಈ ಮನವಿಯನ್ನು ತಲುಪಿಸುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು..

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!