ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ  ಮನವಿ

ಯಾದಗಿರಿ.22.ಜುಲೈ.25:- ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸಲುವಾಗಿ ಹೊರಟ್ಕೆ ಸಿದ್ಧರಾಗಿದಾರೆ  ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ವಿಧಾನ ಪರಿಷತ್ತು ಸದಸ್ಯ ಶಶೀಲ್ ಜಿ. ನಮೋಶಿ ಅವರು ಆಕಸ್ಮಿಕವಾಗಿ ಭೇಟಿ ನೀಡಿದಾಗ ಅತಿಥಿ ಉಪನ್ಯಾಸಕರು ತಮಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು.ಈಗಾಗಲೇ ಸರ್ಕಾರಕ್ಕೆ ಹಲವಾರು ಸಂಧರ್ಭದಲ್ಲಿ ಮನವಿ ಸಲ್ಲಿಸಲಾಗಿದ್ದು.

ಸರ್ಕಾರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಇರುವುದರಿಂದ ಅತಿಥಿ ಉಪನ್ಯಾಸಕರು ಯಾತನೆ ಪಡುವಂತಾಗಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಕನಿಷ್ಠ ₹5 ಲಕ್ಷ ಆರೋಗ್ಯ ವಿಮಾ ಸೌಲಭ್ಯ ಒದಗಿಸುವುದು, ಪಿಎಫ್ ಸೌಲಭ್ಯ ಒದಗಿಸುವುದು, ಸಂಶೋಧನೆ, ಪಠ್ಯ ಬೋಧನೆ, ಮೌಲ್ಯಮಾಪನಕ್ಕೆ ಲ್ಯಾಬ್ ಟಾಪ್ ಒದಗಿಸುವುದು, ಅನಾರೋಗ್ಯ ಉಂಟಾದಾಗ ವರ್ಷಕ್ಕೆ ಕನಿಷ್ಠ ಹದಿನೈದು ದಿನ ವೇತನ ಸಹಿತ ವೈದ್ಯಕೀಯ ರಜೆ ಮಂಜೂರು ಮಾಡುವುದು ಮುಂತಾದ ಬೇಡಿಕೆಗಳ ಬಗ್ಗೆ ತಾವು ಸದನದಲ್ಲಿ ಅತಿಥಿ ಉಪನ್ಯಾಸಕರ ಪರ ಧ್ವನಿ ಎತ್ತಿ ಸಮಸ್ಯೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.

ರಾಯಚೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಅತಿಥಿ ಉಪನ್ಯಾಸಕರಿಗೆ ಕೇವಲ ಮೌಲ್ಯಮಾಪನಕ್ಕಷ್ಟೇ ಕರೆಯುತ್ತಾರೆ. ಕಾಲೇಜಿನಲ್ಲಿ ಪರೀಕ್ಷೆ ಕೊಠಡಿ ಮೇಲ್ವಿಚಾರಕರ ಕೆಲಸಕ್ಕೆ ಬಳಸಿಕೊಳ್ಳುತ್ತಾರೆ. ಬಾಹ್ಯ ಮೇಲ್ವಿಚಾರಕರು, ಪರೀಕ್ಷೆಯ ಜಾಗೃತ ದಳ (ಸ್ಕ್ಯಾರ್ಡ್) ಮುಂತಾದ ಕರ್ತವ್ಯಕ್ಕೆ ಅವಕಾಶ ಕೊಡದೆ ತಾರತಮ್ಯ ಮಾಡಲಾಗುತ್ತಿದೆ. ಇದರ ಬಗ್ಗೆಯು ತಾವು ಗಮನ ಹರಿಸಬೇಕೆಂದು ಮನವರಿಕೆ ಮಾಡಿದರು.

ಇದಕ್ಕೆ ಕೂಡಲೇ ಸ್ಪಂದಿಸಿದ ಶಶೀಲ್ ಜಿ ನಮೋಶಿ ಅವರು, ರಾಯಚೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಿಗೆ ದೂರವಾಣಿ ಮೂಲಕ ಮಾತನಾಡಿ, ಅತಿಥಿ ಉಪನ್ಯಾಸಕರ ಅಹವಾಲುಗಳನ್ನು ಅವರ ಗಮನಕ್ಕೆ ತಂದಾಗ ಕುಲಸಚಿವರು ಮುಂಬರುವ ಪರೀಕ್ಷೆಗಳಲ್ಲಿ ಅವಕಾಶ ನೀಡಲು ಪ್ರಯತ್ನಿಸಲಾಗುವುದೆಂದು ಸಕಾರಾತ್ಮವಾಗಿ ಸ್ಪಂದಿಸಿದರು.

ಇದೇ ಸಂದರ್ಭದಲ್ಲಿ ಪೂರ್ಣಕಾಲಿಕ ಉಪನ್ಯಾಸಕರು ವರ್ಗಾವಣೆ ಪ್ರಕ್ರಿಯೆಯಲ್ಲಿ ಆಗುತ್ತಿರುವ ನ್ಯೂನತೆಗಳ ಬಗ್ಗೆಯು ನಮೋಶಿಯವರ ಗಮನಕ್ಕೆ ತಂದರು.

ನಮೋಶಿಯವರು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಫೋನ್ ಮೂಲಕ ಸಂಪರ್ಕಿಸಿ ಅತಿಥಿ ಉಪನ್ಯಾಸಕರ ಮತ್ತು ಪೂರ್ಣ ಕಾಲಿಕ ಉಪನ್ಯಾಸಕರ ಅಹವಾಲುಗಳ ಬಗ್ಗೆ ತಿಳಿಸಿದಾಗ ಅವರು ಕೂಡ ಸಕಾರಾತ್ಮವಾಗಿ ಸ್ಪಂದಿಸಿದರು.

ನಮೋಶಿಯವರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಭಾಶ್ಚಂದ್ರ ಕೌಲಗಿ ಸ್ವಾಗತಿಸಿ, ಸನ್ಮಾನಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಸಿದ್ದಾರೆಡ್ಡಿ ಬಲಕಲ್, ಉಪನ್ಯಾಸಕರಾದ ಮೋನಯ್ಯ ಕಲಾಲ, ಬಿ.ಆರ್. ಕೇತನಕರ್, ಚಂದ್ರಶೇಖರ ಕೊಂಕಲ್, ರಾಘವೇಂದ್ರ ಬಂಡಿಮನಿ, ಮಂಜುನಾಥ, ಭೀಮರಾಯ ಲಿಂಗೇರಿ, ಜಗದೀಶ ನೂಲಿನವರ, ಮಹೇಶ ರೆಡ್ಡಿ, ರಾಜಶೇಖರ್ ಪುಲಮಾಮಡಿ, ಅಮರೇಶ ನಾಯಕ, ಸಾಬಯ್ಯ ಕಲಾಲ್, ಸಾಬರೆಡ್ಡಿ ಬಂಗಾರಿ, ಗೌರೀಶ ಹಿರೇಮಠ, ಸಿದ್ದಪ್ಪ ಗೌಡ, ಗುರುಲಿಂಗಯ್ಯ ಹಿರೇಮಠ, ನಾಗನಾಥ ಬೆಂಡೆ, ಉಮೇಶ್ ಮಠ, ಚನ್ನಬಸವ ಪಾಟೀಲ, ಮಂಜುನಾಥ್, ಬಸವರಾಜರೆಡ್ಡಿ, ಅಂಬಿಕಾ ಪಾಟೀಲ, ಜ್ಯೋತಿ ಸ್ವಾಮಿ, ಜ್ಯೋತಿ ಕಲಾಲ್‌, ಸಂತೋಷಿ ದಿಬ್ಬಾ, ಈರಮ್ಮ ಭಾವಿಕಟ್ಟಿ, ಶ್ರೀದೇವಿ ಉಪಸ್ಥಿತರಿದ್ದರು.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

5 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

9 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

11 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

11 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

11 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

11 hours ago