ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ವಾಕ್ ಇನ್ ಇಂಟರ್‌ವ್ಯೂ.

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 2025-26ನೇ ಸಾಲಿಗೆ ವಿವಿಧ ಹುದ್ದೆಗಳ ಭರ್ತಿಗೆ ಏ.11 ರಂದು ವಾಕ್ ಇನ್ ಇಂಟರ್‌ವ್ಯೂ ಗೆ  ಏಕಲವ್ಯ ಮಾದರಿ ವಸತಿ ಶಾಲೆ ಬಳ್ಳಾರಿ ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.

ಅರ್ಹ 21 ರಿಂದ 60 ವರ್ಷ ವಯೋಮಿತಿಗೊಳಪಟ್ಟ, ನವೋದಯ ಅಥವಾ ಕೇಂದ್ರಿಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ವಾಕ್ ಇನ್ ಇಂಟರ್‌ವ್ಯೂ ಅಂದು ಬೆಳಿಗ್ಗೆ 9 ಗಂಟೆಗೆ ಕೊಳಗಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಹುದ್ದೆಗಳು ತಾತ್ಕಾಲಿಕ ಆಗಿರುತ್ತವೆ.

ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಸಂದರ್ಶನ ಸಮಯದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

ಹುದ್ದೆಗಳು:

ಕನ್ನಡ ಶಿಕ್ಷಕ: ಹುದ್ದೆ 1, ಜೀವಶಾಸ್ತ್ರ ಶಿಕ್ಷಕ: ಹುದ್ದೆ 1, ಇಂಗ್ಲೀಷ್ ಭಾಷೆಯಲ್ಲಿ ತರಬೇತಿ ಪಡೆದ ಶಿಕ್ಷಕ-1, ಕನ್ನಡದಲ್ಲಿ ತರಬೇತಿ ಪಡೆದ ಪದವೀಧರ ಶಿಕ್ಷಕರು-2, ದೈಹಿಕ ಶಿಕ್ಷಕರು(ಪುರುಷ ಮತ್ತು ಮಹಿಳೆ)-01+01 ಮತ್ತು ಹಾಸ್ಟೆಲ್ ವಾರ್ಡನ್-01.

ವಿದ್ಯಾರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

1 hour ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

2 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

2 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

2 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

2 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

2 hours ago