ಅತಿಥಿ ಶಿಕ್ಷಕರಿಗೆ (ಸಂಭಾವನೆ) ಗೌರವಧನ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ಅತಿಥಿ ಶಿಕ್ಷಕರಿಗೆ  ರಾಜ್ಯ ಶಿಕ್ಷಣ ಇಲಾಖೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ  ಖಾಲಿ ಇರುವ ಬೋಧಕ ಸಿಬ್ಬಂದಿ ಹುದ್ದೆಗಳ ಜಾಗದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ (ಸಂಭಾವನೆ) ಪಾವತಿ ಮಾಡಲು ಅನುದಾನ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

5 ತಿಂಗಳ ಗೌರವಧನ
ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಆಗಿರುವ ಹುದ್ದೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಜೂನ್-2025 ರಿಂದ ಅಕ್ಟೋಬರ್ ವರೆಗಿನ ಗೌರವಧನ ಪಾವತಿಸಲು ರೂ.20416.20 ಲಕ್ಷಗಳನ್ನು ವ ಅನುದಾನದಿಂದ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ.

ಗೌರವ ಧನ ಹೆಚ್ಚಿಸಿದ್ದ ಸರ್ಕಾರ

ರಾಜ್ಯ ಸರ್ಕಾರ ಈ ಮೊದಲು ಸರ್ಕಾರಿ ಶಾಲೆಯ ಅತಿಥಿ ಶಿಕ್ಷರ ಹಾಗೂ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ತಿಂಗಳ ಗೌರವಧನವನ್ನು ಹೆಚ್ಚಿಸಿ ಇದೀಗ ಅಧಿಕೃತ ಆದೇಶವನ್ನು ಹೊರಡಿಸಿತ್ತು. ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಈ ಹಿಂದಿನ ರೂ.10 ಸಾವಿರ ಬದಲಿಗೆ ಇದೀಗ ರೂ.12 ಸಾವಿರ ಸಿಗಲಿದೆ. ಇನ್ನು ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ಈ ಹಿಂದೆ ಸಿಗುತ್ತಿದ್ದ ರೂ.10,500 ಬದಲಿಗೆ ಈಗ ರೂ.12,500 ಮಾಸಿಕ ದೊರೆಯಲಿದೆ. ಅದೇ ರೀತಿ ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರಿಗೆ ರೂ.12 ಸಾವಿರ ಬದಲಿಗೆ ಇನ್ಮುಂದೆ ರೂ.14 ಸಾವಿರ ಮಾಸಿಕವಾಗಿ ಕೊಡುವಂತೆ ಘೋಷಣೆ ಮಾಡಿದೆ.

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾಸಿಕ ಗೌರವಧನ ಹಣಕಾಸು ಇಲಾಖೆಯ ಅನುಮೋದನೆ ಪಡೆದ ನಂತರ ಹೆಚ್ಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಕಳೆದ ವರ್ಷ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಭರವಸೆ ನೀಡಿದ್ದರು.

51 ಸಾವಿರ ಅತಿಥಿ ಶಿಕ್ಷಕರ ನೇಮಕ

ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರಿಸಲು 2025-26ನೇ ಸಾಲಿನಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಒಪ್ಪಿಗೆ ನೀಡಿದೆ. ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದೆ.

ನೇಮಕಾತಿಗಳು ತಾತ್ಕಾಲಿಕ ಸ್ವರೂಪದ್ದಾಗಿದ್ದು, ನಿಯಮಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಇರುತ್ತದೆ. ಬೋಧನಾ ಸಿಬ್ಬಂದಿಯಲ್ಲಿನ ತಕ್ಷಣದ ಅಂತರವನ್ನು ಕಡಿಮೆ ಮಾಡಲು ಮತ್ತು ಶಿಕ್ಷಕರ ಕೊರತೆಯಿಂದಾಗಿ ನಮ್ಮ ವಿದ್ಯಾರ್ಥಿಗಳು ತೊಂದರೆ ಅನುಭವಿಸದಂತೆ ನೋಡಿಕೊಳ್ಳಲು ಈ ನಿರ್ಧಾರವು ನಿರ್ಣಾಯಕವಾಗಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

prajaprabhat

Recent Posts

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

53 minutes ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

59 minutes ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

1 hour ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

7 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

13 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

13 hours ago