ಅತಿಥಿ ಶಿಕ್ಷಕರು ಉಪನ್ಯಾಸಕರುಗಳ ಆಯ್ಕೆ ಪಟ್ಟಿ ಪ್ರಕಟ:ಜೂ.11 ರಿಂದ 13 ರವರೆಗೆ ಪಾಠದ ಡೆಮೋ ಮೂಲಕ ಆಯ್ಕೆ ಪ್ರಕ್ರಿಯೇ

ಬೀದರ.11.ಜೂನ್.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಅತಿಥಿ ಶಿಕ್ಷಕರು/ಉಪನ್ಯಾಸಕರುಗಳ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಫಲಿತಾಂಶವನ್ನು ಜಿಲ್ಲಾ ಕಛೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಆಭ್ಯರ್ಥಿಗಳನ್ನು 1:2 ರಂತೆ ಮಾದರಿ ಪಾಠದ/ಡೆಮೋ ಮೂಲಕ ಆಯ್ಕೆ ಮಾಡಲಾಗುತ್ತದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪಾಠದ ಡೆಮೋ ನಡೆಯುವ ವಿಷಯ, ದಿನಾಂಕ ಹಾಗೂ ಸ್ಥಳದ ವಿವರ: ಜೂನ್.11 ರಂದು ಬೆಳಿಗ್ಗೆ 10:30 ರಿಂದ 4:30 ರವರೆಗೆ ಅತಿಥಿ ಉಪನ್ಯಾಸಕರಿಗೆ (ಕನ್ನಡ, ಉರ್ದು, ಇಂಗ್ಲೀಷ್, ಭೌತಶಾಸ್ತç, ಗಣಿತಶಾಸ್ತç, ಇತಿಹಾಸಶಾಸ್ತç, ಲೆಕ್ಕಶಾಸ್ತç, ವ್ಯವಹಾರ ಅಧ್ಯಯನ, ಅರ್ಥಶಾಸ್ತç) ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಬಾಲಕಿಯರ ವಸತಿ ಕಾಲೇಜು ಮೀರಾಗಂಜ್ ಬೀದರದಲ್ಲಿ ನಡೆಯಲಿದೆ.


ಜೂನ್. 12 ರಂದು ಬೆಳಿಗ್ಗೆ 10:30 ರಿಂದ 4:30 ರವರೆಗೆ ಅತಿಥಿ ಶಿಕ್ಷಕರಿಗೆ (ಕನ್ನಡ, ಇಂಗ್ಲೀಷ್, ಉರ್ದು, ಹಿಂದಿ) ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪೂರ (ಎ) ತಾ:ಜಿ:ಬೀದರದಲ್ಲಿ ಹಾಗೂ ಜೂನ್.13 ರಂದು ಬೆಳಿಗ್ಗೆ 10:30 ರಿಂದ 4:30 ರವರೆಗೆ (ಸಮಾಜ ವಿಜ್ಞಾನ, ಸಾಮಾನ್ಯ ವಿಜ್ಞಾನ, ಗಣಿತ, ದೈಹಿಕ ಶಿಕ್ಷಣ) ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪುರ (ಎ) ತಾ:ಜಿ:ಬೀದರದಲ್ಲಿ ನಡೆಯಲಿವೆ.


ಕಾರಣ ಆಯ್ಕೆಯಾದ ಆಭ್ಯರ್ಥಿಗಳು ವಿಷಯವಾರು ಪಾಠದ ಡೆಮೋ ಗೆ ತಪ್ಪದೇ ಹಾಜರಾಗಬೇಕು. ತಪ್ಪಿದಲ್ಲಿ ಗೈರು ಹಾಜರೆಂದು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದಾಗಿ ಅವರು ತಿಳಿಸಿದ್ದಾರೆ.

prajaprabhat

Recent Posts

‘ಹರ ಘರ ತಿರಂಗಾ”ಕಾರ್ಯಕ್ರಮ

ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…

11 hours ago

ಸ್ವಾತಂತ್ರ್ಯ ಭಾರತದೊಳಗೆ ಇರುವ ಸಮಸ್ಯೆಗಳು.

                          ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…

13 hours ago

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

20 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

23 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

23 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

23 hours ago