ಅತೀವೃಷ್ಠಿ ಹಾನಿ ಪ್ರದೇಶಗಳಿಗೆ ಶಾಸಕ ಶ್ರೀ ಪ್ರಭು ಚವ್ಹಾಣ್ ಭೇಟಿ.!
ಔರಾದ.31.ಆಗಸ್ಟ್.25:- ಇಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಕಮಲನಗರ ತಾಲ್ಲೂಕಿನ ವಿವಿಧೆಡೆ ಅತೀವೃಷ್ಠಿ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಅತೀವೃಷ್ಠಿ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ವೇಳೆ ಸೋನಾಳ ಗ್ರಾಮದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಮರಣ ಹೊಂದಿದ ಶ್ರೀ ಕಾಶಿನಾಥ ಹಾವಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವಯಕ್ತಿಕ ಧನಸಹಾಯ ಮಾಡಿದರು.

