ಚಿಕ್ಕಬಳ್ಳಾಪು.24.ಮಾರ್ಚ್.25:- ಜಿಲ್ಲೆಯ ವಿವಿಧ ಅಭಿವೃದ್ಧಿ ಜೊತೆ ಸರ್.ಎಂ.ವಿ ಕ್ರೀಡಾಂಗಣ ಅಭಿವೃದ್ದಪಡಿಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ಹೇಳಿದರು.
ಜಿಲ್ಲಾ ಕೇಂದ್ರದಲ್ಲಿನ ಸರ್.ಎಂ.ವಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಸಚಿವರು, ಯುವಜನ ಸೇವೆ ಮತ್ತು ಯುವ ಸಬಲೀಕರಣ ಇಲಾಖೆ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕ್ರೀಡಾಂಗಣವನ್ನು ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳೊಂದಿಗೆ ಸುಮಾರು 70 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣ ಸಾಧ್ಯತೆಗಳತ್ತ ಚಿಂತನೆ ನಡೆಸಲಾಗುತ್ತಿದೆ.
ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಬೇಕೇ? ಅಥವಾ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಂತಹ ಸಂಸ್ಥೆಗಳಿಗೇ ಜವಾಬ್ದಾರಿ ನೀಡಿ ಅಭಿವೃದ್ಧಿಪಡಿಸಬೇಕೇ? ಇಲ್ಲವೇ ಸರ್ಕಾರದ ಅನುದಾನದಲ್ಲೇ ಅಭಿವೃದ್ಧಿಪಡಿಸಬೇಕೇ? ಎಂಬೆಲ್ಲಾ ದೃಷ್ಟಿಕೋನಗಳಲ್ಲಿ ಚರ್ಚೆ ನಡೆಸಲಾಗುತ್ತಿದೆ.
ಸಿಂಥೆಟಿಕ್ ಟ್ರಾಕ್ ಸೇರಿದಂತೆ ಕ್ರೀಡಾಂಗಣದಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಿ ಹಂತ-ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಸದ್ಯದಲ್ಲೇ ಕ್ರೀಡಾ ವಸತಿ ನಿಲಯವನ್ನು ಉದ್ಘಾಟಿಸಲಾಗುವುದು ಎಂದರು.
ಬೆಂಗಳೂರು.16.ಜೂನ್.25:- ರಾಜ್ಯದಲ್ಲಿ 2025-26ನೇ ಸಾಲಿಗೆ ಸಂಘ ಸಂಸ್ಥೆ'ಗಳಿಗೆ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ…
ಬೆಂಗಳೂರು.16.ಜೂನ್.25:- ಸಾಮಾಜಿಕ ಭದ್ರತಾ ಯೋಜನೆಗಳ ಪೈಕಿ ವೃದ್ದಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಪೈಕಿ…
ಬೆಂಗಳೂರು.16.ಜೂನ್.25:- ರಾಜ್ಯ ಸರ್ಕಾರ ಗ್ಯಾರಂಟೀ ಯೋಜನೆ ಜಾರಿಗೆ ತಂದಿ ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ ವೇತನ ಯೋಜನೆಯಡಿ 23.19 ಲಕ್ಷ…
ಮೈಸೂರು.17.ಜೂನ್.25:- ರಾಜ್ಯದಲ್ಲಿ ಕಾರ್ಯ ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು…
ಬೆಂಗಳೂರು.17.ಜೂನ್.25:-ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸರ್ಕಾರ…
ಬೀದರ.16.ಜೂನ್.25:- ಈ ಮೇಲ್ಕಂಡ ವಿಷಯಕ್ಕೆ ಸಂಭಂದಿಸಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ದಲಿತ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಷ್ಠ ಶಿಕ್ಷೆಣ ಯೋಜನೆ ಅಡಿಯಲ್ಲಿ…