ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆಯು ಪದವಿ ಕಾಲೇಜುಗಳಲ್ಲಿ ಉಳಿದ ಕಾರ್ಯಭಾರಕ್ಕೆ ಅಥಿತಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ವಿಚಾರ ತಮಗೆ ತಿಳಿದಿರುತ್ತದೆ.
ಇತ್ತೀಚಿಗೆ ಮಾನ್ಯ ಕರ್ನಾಟಕ ಉಚ್ಛಾನ್ಯಾಯಲಯವು UGC ನಿಯಮವಳಿಯಂತೆ ಅರ್ಹತೆ ಹೊಂದಿರುವ ಅಭ್ಯಾರ್ಥಿಗಳನ್ನು ಅಥಿತಿ ಉಪನ್ಯಾಸಕರನ್ನಾಗಿ ನೇಮಕ ಮಾಡಿಕೊಳ್ಳಬೇಕೆಂದು ತೀರ್ಪು ನೀಡಿರುತ್ತದೆ.
ಅದರಂತೆಯೆ ಕಾಲೇಜು ಶಿಕ್ಷಣ ಇಲಾಖೆಯು ಪ್ರಕ್ರಿಯೆಗೆ ಚಾಲನೆ ನೀಡಿರುತ್ತದೆ.
ಆದರೆ ಕೆಲ ಅಥಿತಿ ಉಪನ್ಯಾಸಕರು ಅರ್ಹತೆಯ ಮಾನದಂಡ ಹೊಂದಿರುವುದಿಲ್ಲ ಆದರು ಸಹ ಹೊರ ರಾಜ್ಯಗಳ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ಅನಧಿಕೃತ ರಾಜ್ಯಶಾಸ್ತ್ರ ವಿಭಾಗದಲ್ಲಿ ಪ್ರಮಾಣಪತ್ರ ತಂದು ನೇಮಕ ಹೊಂದುವ ಸಾಧ್ಯತೆ ಇರುತ್ತದೆ.
ಮುಂದೆ ನೇಮಕ ಆಗಬಹುದಾದ ಅಭ್ಯರ್ಥಿಗಳ ದಾಖಲೆಗಳನ್ನು ಬಹುಜಾಗೃತಿಯಿಂದ ಸದರಿ ವಿಭಾಗದ ಮುಖ್ಯಸ್ಥರ ಸಮ್ಮುಖದಲ್ಲಿ ಪರಿಶೀಲಿಸಿ ನೇಮಕ ಮಾಡಿಕೊಳ್ಳಬೇಕು.
ಒಂದು ವೇಳೆ ಅನಧಿಕೃತ Ph.D ಪ್ರಮಾಣಪತ್ರ ತಂದು ಆಯ್ಕೆಯಾದ ಅಭ್ಯಾರ್ಥಿಯು ತಮ್ಮ ಕಾಲೇಜಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದರೆ ಅವರ ಹಿಂದಿನ ದಾಖಲೆಗಳಿಗೂ ಮತ್ತು ಪ್ರಸ್ತುತ ದಾಖಲೆಗಳನ್ನು ಹೊಲಿಕೆ ಮಾಡಿ ಬಹು ಮುತುವರ್ಜಿವಹಿಸಿ ಪರಿಶೀಲನೆ ಮಾಡಿ ನೇಮಕ ಮಾಡಿಕೊಳ್ಳಬೇಕೆಂದು ತಮ್ಮಲ್ಲಿ ವಿನಂತಿ.
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…
ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್…
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…