ರಾಯಚೂರ ಜಿಲ್ಲಾ ವ್ಯಾಪ್ತಿಯ ಬಾಕಿ ದೂರುಗಳ ವಿಚಾರಣೆ; ವಿಡಿಯೋ ಸಂವಾದ
ರಾಯಚೂರು.24.ಜುಲೈ.25: ಯಾವುದೇ ರೀತಿಯ ದೂರುಗಳು ಬಾರದ ಹಾಗೆ ಪ್ರತಿಯೊಂದು ಇಲಾಖೆಯಲ್ಲಿ ಆಯಾ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು ಎಂದು ಗೌರವಾನ್ವಿತ ಕರ್ನಾಟಕ ಉಪಲೋಕಾಯುಕ್ತರಾದ ಬಿ ವೀರಪ್ಪ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಲಹೆ ಮಾಡಿದರು.
ರಾಯಚೂರ ಜಿಲ್ಲಾ ವ್ಯಾಪ್ತಿಯ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿಯ ಬಗ್ಗೆ ಜುಲೈ 24ರಂದು ಸಂಜೆ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಅಧಿಕಾರಿಗಳು ಒತ್ತಡಕ್ಕೆ ಮನಿದು ಅನರ್ಹರಿಗೆ ಅವಕಾಶ ಕೊಡುತ್ತಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯಗಳು ದೊರಕದೇ ಅನ್ಯಾಯವಾಗುತ್ತಿದೆ ಎಂದು ಸಾರ್ವಜನಿಕ ದೂರುಗಳು ಹೆಚ್ಚುತ್ತಿವೆ. ಅಧಿಕಾರಿಗಳಿಗೆ ಸಾಮಾಜಿಕ ಕಾಳಜಿ ಇರಬೇಕು. ಯಾರು ಎಷ್ಟೇ ಒತ್ತಡ ಹಾಕಿದರು ಸಹ ಅದನ್ನು ಪರಿಗಣಿಸದೇ ಸರ್ಕಾರದ ನಿಯಮಾವಳಿಯಂತೆ ಯೋಜನೆಗಳಿಗೆ ಅರ್ಹರನ್ನೇ ಆಯ್ಕೆ ಮಾಡಿ ಸಾಮಾಜಿಕ ನ್ಯಾಯ ಕಾಪಾಡಬೇಕು ಎಂದು ಉಪ ಲೋಕಾಯುಕ್ತರು ಸಲಹೆ ಮಾಡಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವ ರೋಗಿಗಳಿಗೆ ಅಲ್ಲಿನ ವೈದ್ಯರು ಖಾಸಗಿ ದವಾಖಾನೆಗೆ ಕಳುಹಿಸಕೂಡದು. ಚಿಕಿತ್ಸೆ ನೀಡಿದ ಬಳಿಕೆ ಔಷಧಿಯನ್ನು ಹೊರಗಡೆ ಪಡೆದುಕೊಳ್ಳಲು ರೋಗಿಗೆ ಸೂಚಿಸಬಾರದು. ಈ ವಿಷಯದ ಬಗ್ಗೆ ಗಮನ ಹರಿಸುವಂತೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಎಲ್ಲ ತಾಲೂಕು ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುತ್ತೋಲೆ ರವಾನಿಸಿ ಸೂಚನೆ ನೀಡಬೇಕು. ಆಸ್ಪತ್ರೆಗಳಲ್ಲಿ ಅವಶ್ಯಕವಾದ ಸಿಟಿ ಸ್ಕಾö್ಯನ್, ಎಂಆರ್ಐ ಸ್ಕಾö್ಯನ್ ಮಷಿನ್ಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಉಪಲೋಕಾಯುಕ್ತರು ಡಿಎಚ್ಓ ಡಾ.ಸುರೇಂದ್ರಬಾಬು ಅವರಿಗೆ ನಿರ್ದೇಶನ ನೀಡಿದರು.
ರಾಯಚೂರಿನ ರಾಜೀವಗಾಂಧಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಒಪೆಕ್ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಸಹ ಸರಿಯಾದ ನಿಯಮಗಳು ಪಾಲನೆ ಆಗಬೇಕು ಎಂದು ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ರಾಯಚೂರ ಜಿಲ್ಲಾ ವ್ಯಾಪ್ತಿಯ ಎಲ್ಲ ಮೆಟ್ರಿಕ್ ಪೂರ್ವ, ನಂತರದ ವಸತಿ ನಿಲಯಗಳು ಮತ್ತು ವೃತ್ತಿಪರ ಕೋರ್ಸಿನ ಎಲ್ಲ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಊಟ, ಉಪಹಾರ, ಸಮವಸ್ತç ಸೇರಿದಂತೆ ಇನ್ನೀತರ ಎಲ್ಲ ಸೌಕರ್ಯಗಳನ್ನು ಸಮರ್ಪಕವಾಗಿ ನೀಡಬೇಕು. ಅನಿರೀಕ್ಷಿತ ಭೇಟಿ ವೇಳೆ ಏನಾದರು ಲೋಪದೋಷಗಳು ಕಂಡುಬAದಲ್ಲಿ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ಇದೆ ವೇಳೆ ಉಪ ಲೋಕಾಯುಕ್ತರು ಸಂಬAಧಿಸಿದ ಇಲಾಖೆಯ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ತುಂಬಾ ಮುಖ್ಯ. ಈ ದಿಶೆಯಲ್ಲಿ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡುವಂತಾಗಬೇಕು. ತಾವು ರಾಯಚೂರ ಪ್ರವಾಸದಲ್ಲಿದ್ದಾಗ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಉಪಲೋಕಾಯುಕ್ತರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿ ಅಂಗನವಾಡಿ ಮೇಲೆ ಸೂಕ್ತ ಮೇಲ್ವಿಚಾರಣೆಗೆ ನಿರ್ದೇಶನ ನೀಡಿದರು.
ಮಹಾತ್ಮಗಾಂಧಿ ರಾಷ್ಟಿçಯ ಉದ್ಯೋಗ ಖಾತರಿ ಯೋಜನೆಯು ಜಾಗತಿಕವಾಗಿ ಮೆಚ್ಚುಗೆ ಗಳಿಸಿದ ಯೋಜನೆಯಾಗಿದೆ. ಈ ಯೋಜನೆಯಿಂದಾಗಿ ಗ್ರಾಮೀಣ ಭಾಗದ ಕೃಷಿ ಕೂಲಿ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಹೀಗಾಗಿ ನರೇಗಾ ಯೋಜನೆಯಡಿ ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಯಾವುದೇ ಕಾರಣಕ್ಕು ಜೆಸಿಬಿ ಮತ್ತು ಯಾವುದೇ ಯಂತ್ರವನ್ನು ಬಳಸಬಾರದು. ಕಡ್ಡಾಯವಾಗಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಲು ಸಂಬAಧಿಸಿದ ಅಧಿಕಾರಿಗಳು ಒತ್ತು ಕೊಡಬೇಕು ಎಂದು ಉಪ ಲೋಕಾಯುಕ್ತರು ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ನಿರಂತರವಾಗಿರುತ್ತದೆ. ಬಹುತೇಕ ಕಡೆಗಳಲ್ಲಿ ಬೀದಿ ದೀಪಗಳು ಇರುವುದಿಲ್ಲ. ವಿದ್ಯುತ್ ಪ್ರವರ್ತಕ (ಟಿ.ಸಿ)ಗಳು ಬೇಕು ಎಂದು ಎಷ್ಟೇ ಸಲ ಅಲೆದಾಡಿದರೂ ಸಕಾಲಕ್ಕೆ ಕೊಡುವುದಿಲ್ಲ ಎಂದು ಹಳ್ಳಿಯ ಜನರಿಂದ ದೂರುಗಳು ಹೆಚ್ಚುತ್ತಿವೆ. ಹೀಗಾಗಿ ಜೆಸ್ಕಾಂ ಅಧಿಕಾರಿಗಳು ಜಾಗೃತೆಯಿಂದ ಕೆಲಸ ಮಾಡಬೇಕು. ಗ್ರಾಮಸ್ಥರಿಗೆ ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಹುತೇಕ ಕಡೆ ಸಾರ್ವಜನಿಕ ಕೆರೆ, ಬಾವಿ, ಸಾರ್ವಜನಿಕ ಸ್ಥಳಗಳನ್ನು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿದ್ದು ಇದರಿಂದಾಗಿ ಸಾಕಷ್ಟು ತೊಂದರೆಯಾಗುತ್ತಿದೆ. ಗ್ರಾಮಗಳಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಸ್ಥಳೀಯ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಲೋಕಾಯುಕ್ತ ಕಚೇರಿಯಲ್ಲಿ ಸಾಕಷ್ಟು ದೂರುಗಳು ಸಲ್ಲಿಕೆಯಾಗುತ್ತಿವೆ. ಈ ಬಗ್ಗೆ ವಿಶೇಷವಾಗಿ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಪಿಡಿಓಗಳು ಗಮನ ಹರಿಸಿ ಮೇಲಧಿಕಾರಿಗಳಿಗೆ ವರದಿ ಮಾಡಲು ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು.
ನಿಯಮಿತವಾಗಿ ಸಭೆ ನಡೆಸಿ: ಕುಡಿಯುವ ಸಮರ್ಪಕವಾಗಿ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಇಲ್ಲ, ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ, ಜೆಸ್ಕಾಂನಿAದ ಟಿ.ಸಿ. ಕೊಡುತ್ತಿಲ್ಲ ಎನ್ನುವಂತಹ ದೂರುಗಳು ಸಾರ್ವಜನಿಕರಿಂದ ದಾಖಲಾಗುತ್ತಿದ್ದು ಈ ಬಗ್ಗೆ ಪರಿಶೀಲಿಸಿ, ಬೇಗನೆ ಇತ್ಯರ್ಥಗೊಳಿಸಿ ದೂರುದಾರರಿಗೆ ಹಿಂಬರಹ ನೀಡಬೇಕು. ತಹಸೀಲ್ದಾರರು ಮತ್ತು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸಿ ಈ ಬಗ್ಗೆ ಆಯಾ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಗಮನ ಹರಿಸುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಇದೆ ವೇಳೆ ಉಪ ಲೋಕಾಯುಕ್ತರು ತಿಳಿಸಿದರು.
ಪರಿಸರದ ಸಮತೋಲನ ಕಾಪಾಡುವಲ್ಲಿ ಗಿಡಮರಗಳ ಪಾತ್ರ ಅತೀ ಮಹತ್ವವಾಗಿದ್ದು ಅರಣ್ಯ ಅತೀಕ್ರಮಣಕ್ಕೆ ಕಡಿವಾಣ ಹಾಕಬೇಕು ಎಂದು ಉಪ ಲೋಕಾಯುಕ್ತರು, ಆರ್ಎಫ್ಓ ಅವರಿಂದ ಮಾಹಿತಿ ಪಡೆದುಕೊಂಡರು. ಅರಣ್ಯ ಅತೀಕ್ರಮಣದ ಪ್ರಕರಣಗಳ ವಿಲೇವಾರಿಗೆ ಸಂಬAಧಿಸಿದAತೆ ಅರಣ್ಯ ಇಲಾಖೆಯು ಇದುವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಕೇಳಿದರು.
ಈ ವೇಳೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಮಾತನಾಡಿ, ಗೌರವಾನ್ವಿತ ಉಪಲೋಕಾಯುಕ್ತರು ರಾಯಚೂರ ಭೇಟಿ ನೀಡುವ ವೇಳೆಯೊಳಗೆ, ಆಯಾ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕ ದೂರುಗಳ ಬಗ್ಗೆ ಗಮನ ಹರಿಸಿ ವಿಲೇವಾರಿಗೆ ಕ್ರಮವಹಿಸಬೇಕು. ದೂರುಗಳು ಇತ್ಯರ್ಥವಾದ ಬಗ್ಗೆ ವರದಿಯೊಂದಿಗೆ ಸಾರ್ವಜನಿಕ ಅಹವಾಲು ಆಲಿಕೆ ಸಭೆಗೆ ಆಗಮಿಸಬೇಕು. ಆರೋಗ್ಯ ಇಲಾಖೆ, ಜೆಸ್ಕಾಂ, ನಗರಾಭಿವೃದ್ದಿ ಕೋಶ, ನರೇಗಾ ಯೋಜನೆಯ ಅಧಿಕಾರಿಗಳು ದೂರುಗಳ ವಿಲೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ್ ಕಾಂದೂ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಪಂಚಾಯತಗಳ ಗ್ರಾಮ ಅಭಿವೃದ್ಧಿ ಅಧಿಕಾರಿಗಳು, ಲೋಕಾಯುಕ್ತರು ಸಭೆ ನಡೆಸಿ ತಿಳಿಸಿದ ವಿಷಯಗಳ ಬಗ್ಗೆ ಗಮನ ಹರಿಸಬೇಕು. ಪ್ರತಿಯೊಂದು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ, ಶಿಸ್ತುಬದ್ದವಾಗಿ ಗಟಾರು ನಿರ್ಮಾಣ, ಬೀದಿದೀಪ ಅಳವಡಿಕೆ, ಗ್ರಾಮದ ಶುಚಿತ್ವ ಮತ್ತು ನರೇಗಾ ಯೋಜನೆ ಸಮರ್ಪಕ ಅನುಷ್ಠಾನದ ಬಗ್ಗೆ ಗಮನ ಹರಿಸಬೇಕು. ಎಲ್ಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮೇಲಿಂದ ಮೇಲೆ ಸಭೆ ನಡೆಸಿ ಸೂಕ್ತ ಮೇಲ್ವಿಚಾರಣೆ ಮಾಡಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್ ಎ ಸಾತ್ವಿಕ್, ರಾಯಚೂರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸತೀಶ್ ಚಿಟಗುಪ್ಪಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.