ಬೀದರ.10.ಫೆಬ್ರುವರಿ.25: -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬೀದರ ಕಚೇರಿಯಲ್ಲಿ ಅವಧಿ ಮೀರಿರುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಪಟ್ಟ ಅರ್ಜಿಗಳು ಹಾಗು ಇತರೆ ದಾಖಲೆಗಳ ವಿಲೇವಾರಿಗಾಗಿ ಅವುಗಳನ್ನು ಈ ಕಚೇರಿಯಲ್ಲಿ ಚೂರು ಚೂರು ಗೊಳಿಸಲಾಗಿರುತ್ತದೆ.
ಈ ದಾಖಲೆಗಳನ್ನು ವಿಲೇವಾರಿ ಮಾಡುವ ಸಂಬಂಧ ಆಸಕ್ತಿಯುಳ್ಳ ಅಧಿಕೃತ ಬಿಡ್ಡುದಾರರ/ಸೇವಾದಾರರಿಂದ ದರಪಟ್ಟಿ ಆಹ್ವಾನಿಸಲಾಗಿದೆ ಎಂದು ಬೀದರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಆಸಕ್ತಿಯುಳ್ಳ ಬಿಡ್ಡುದಾರರು/ಸೇವಾದಾರರು ದರಪಟ್ಟಿಯನ್ನು ದಿನಾಂಕ: 25-02-2025 ರ ಸಂಜೆ 5 ಗಂಟೆಯೊಗಾಗಿ ಸೀಲ್ ಮಾಡಿದ ಲಕೋಟೆಯಲ್ಲಿರಿಸಿ ಈ ಕಚೇರಿಗೆ ಸಲ್ಲಿಸತಕ್ಕದ್ದು, ನಿಗದಿತ ದಿನಾಂಕದ ನಂತರ ಸಲ್ಲಿಸುವ ದರಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.
ಈ ಕಚೇರಿಗೆ ಸಲ್ಲಿಸಲಾದ ದರಪಟ್ಟಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಪ್ರತಿ ಕೆಜಿಗೆ ಗರಿಷ್ಠ ದರವನ್ನು ನಮೂದಿಸಿರುವ ಬಿಡ್ಡುದಾರರ/ಸೇವಾದಾರರಿಗೆ ಈ ಕಡತಗಳ ವಿಲೇವಾರಿಗಾಗಿ ಆದೇಶವನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…