ಉಡುಪಿ, 04.ಜೂ.25: ಜಿಲ್ಲೆಯಲ್ಲಿ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ಕುರಿತು ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್ಗಳು, ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ವಸತಿ ಸಮುಚ್ಚಯ ಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿ ಕೊಳ್ಳಬಹುದು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿ ಕೈಗೊಳ್ಳಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ, ತರಬೇತಿ ಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ.
ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು ನೀಡಲಾಗುವುದು. ಆಸಕ್ತ ಕನ್ನಡೇತರರು ತಮ್ಮ ಸ್ವ-ವಿವರದೊಂದಿಗೆ ಜೂನ್ 7ರ ಒಳಗೆ ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಛೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, ಅಲೆವೂರು ಗ್ರಾಮ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂಖ್ಯೆ: 0820-2986168, ಮೊ.ನಂ:7026506627 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…