ಅಪರಿಚಿತ ನಂಬರಗಳಿoದ ದೂರವಾಣಿ ಕರೆಗಳು ಬಂದಲ್ಲಿಸ್ವೀಕರಿಸಬಾರದೆಂದು ಸಾರ್ವಜನಿಕರು, ಅಂಗನವಾಡಿ ಕಾರ್ಯಕರ್ತೆಯರಲ್ಲಿ ಮನವಿ.!


ಬೀದರ.24ಜನವರಿ.25:- ಸಾರ್ವಜನಿಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕೇಂದ್ರದ ಫಲಾನುಭವಿಗಳು ಅಪರಿಚಿತ ವ್ಯಕ್ತಿಗಳಿಂದ ದೂರವಾಣಿ ಕರೆಗಳೂ ಬಂದಲ್ಲಿ ಕರೆಗಳನ್ನು ಸ್ವೀಕರಿಸಬಾರದು ಹಾಗೂ ಯಾವುದೇ ರೀತಿಯ ಓಟಿಪಿ ಗಳನ್ನು ನೀಡಬಾರದೆಂದು ಔರಾದ (ಬಾ) ತಾಲ್ಲೂಕಿನ ಸಂತಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಅಂಗನವಾಡಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳ ಮಾಹಿತಿಯನ್ನು ಪೋಷಣ ಟ್ರಾö್ಯಕರ್ ಆ್ಯಪ್‌ನಲ್ಲಿ ಅಳವಡಿಸಿರುತ್ತಾರೆ. ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಅಪರಿಚಿತ ವ್ಯಕ್ತಿಗಳಿಂದ ದೂರವಾಣಿ ಕರೆಗಳು ಸ್ವೀಕರಿಸುತ್ತಿದ್ದು, ತಮ್ಮನ್ನು ಮೇಲಾಧಿಕಾರಿಗಳ ಕಛೇರಿಯಿಂದ ಕರೆ ಮಾಡಿರುವುದಾಗಿ ತಿಳಿಸಿ ನಿಮ್ಮ ಮೊಬೈಲ್‌ಗೆ ಓಟಿಪಿ ಬಂದಿರುತ್ತದೆ ಅದನ್ನು ನೀಡಲು ಕೇಳುತ್ತಾರೆ.

ಕೆಲವು ಅಂಗನವಾಡಿ ಕಾರ್ಯಕರ್ತೆಯರು ತಾವು ಯಾರು? ತಮಗೆಕೆ ಓಟಿಪಿ ನೀಡಬೇಕು ಎಂದು ಕೇಳಿದಾಗ ಅವರು ನಾವು ಮೇಲಾಧಿಕಾರಿಗಳ ಕಚೇರಿಯಿಂದ ಕರೆ ಮಾಡಿರುತ್ತೇವೆ ಹಾಗೂ ವಲಯ ಮೇಲ್ವಿಚಾರಕಿಯರ ಹೆಸರನ್ನು ಹೇಳಿ ತಮ್ಮ ಮೇಲೆ ಕ್ರಮ ವಹಿಸುವುದಾಗಿ ಬೇದರಿಸಿ ಓಟಿಪಿಯನ್ನು ತೆಗೆದುಕೊಂಡು ಪೋಷಣಾ ಟ್ರಾö್ಯಕರ್ ಆ್ಯಪ್‌ನಲ್ಲಿ ಫಲಾನುಭವಿಗಳಿಗೆ ಕರೆ ಮಾಡಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಹಣ ವರ್ಗಾಯಿಸಲು ಖಾತೆ ನಂಬರ ಕೇಳುತ್ತಿದ್ದಾರೆ.

ಕಾರಣ ತಾವುಗಳು ಎಚ್ಚರ ವಹಿಸಬೇಕೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

9 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago