ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ [ಪೋಕ್ಲೋ]ದ ನ್ಯಾಯಾಧೀಶರು ಅಪರಾಧಿಗೆ ಶಿಕ್ಷೆ ವಿಧಿಸಿರುತ್ತಾರೆ.
ಕೊಪ್ಪಳ ತಾಲೂಕಿನ ಹಿರೇಸಿಂಧೋಗಿ ಗ್ರಾಮದ ಧನಂಜಯ ಮಠದ ಆಟೋ ಚಾಲನೆ ಮಾಡಿಕೊಂಡಿದ್ದು, 3 ವರ್ಷದ ಹಿಂದೆ ಕೊಪ್ಪಳದ ಬಾಧಿಳ ಮನೆಯ ಮುಂದಿನಿಂದ ತನ್ನ ಪ್ಯಾಸೆಂಜರ ಆಟೋ ನಡೆಸುತ್ತಿದ್ದಾಗ ಬಾಧಿತಳನ್ನು ಪರಿಚಯ ಮಾಡಿಕೊಂಡು ಪ್ರೀತಿ ಮಾಡುತ್ತಿದ್ದ ವಿಷಯನ್ನು ಬಾಧಿತಳಿಗೆ ತಿಳಿಸಿದಾಗ ಅಪ್ರಾಪ್ತ ವಯಸ್ಸಿನ ಬಾಧಿತಳು ಒಪ್ಪಿಕೊಂಡಿರುತ್ತಾಳೆ.
ಎಂದಿನಂತೆ ದಿ: 30-06-2023 ರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಆರೋಪಿತನು ಕೊಪ್ಪಳದ ಬಾಲಕಿಯರ ಪ್ರೌಢಶಾಲೆಯ ಹತ್ತಿರ ಬಂದು ಬಾಧಿತಳನ್ನು ಪುಸಲಾಯಿಸಿ ಒಂದು ಖಾಸಗಿ ವಾಹನದಲ್ಲಿ ಕರೆದುಕೊಂಡು ಮರಿಯಮ್ಮನಹಳ್ಳಿ ಗ್ರಾಮದ ಲಲಿತಮ್ಮ ಎನ್ನುವವರ ಮನೆಯಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿ ದಿ: 05-07-2023 ರಂದು ರಾತ್ರಿ ಸಮಯದಲ್ಲಿ ಮೈ ಕೈ ಮುಟ್ಟಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ಮಹಿಳಾ ಪೋಲಿಸ ಠಾಣೆಯ ಎಚ್.ಸಿ ನಾಗರಾಜ ಮೇಟಿ ಅವರು ದೂರು ಸ್ವೀಕರಿಸಿ ಪ್ರಥಮ ಹಂತದ ತನಿಖೆಯನ್ನು ನಿರ್ವಹಿಸಿ, ಮುಂದಿನ ತನಿಖೆಯನ್ನು ಪಿಎಸ್ಐ ನಾಗಲಿಂಗಯ್ಯ, ಪಿಐ ಸಂತೋಷ ಹಳ್ಳೂರ ಅವರು ನಿರ್ವಹಿಸಿದ್ದು ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಮೇಲ್ನೋಟಕ್ಕೆ ಸಾಭಿತಾಗಿದ್ದರಿಂದ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯ ಪಿಐ ಆಂಜನೇಯ ಡಿ.ಎಸ್. ಅವರು ಆರೋಪಿತನ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಟೇ.ಎಸ್ಸಿ(ಪೋಕ್ಲೋ) ಸಂ: 47/2023 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಆರೋಪಿತನ ಮೇಲಿನ ಆರೋಪಣೆಗಳು ಸಾಭೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 10,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯದ (ಪೋಕ್ಲೋ) ನ್ಯಾಯಾಧೀಶರಾದ ಕುಮಾರ ಡಿ. ಕೆ. ಅವರು ದಿ: 05-08-2025 ರಂದು ತೀರ್ಪು ಹೊರಡಿಸಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ಪ್ರಕರಣ ನಡೆಸಿ ವಾದ ಮಂಡಿಸಿದ್ದರು.
ಕೊಪ್ಪಳ ಮಹಿಳಾ ಪೋಲಿಸ ಠಾಣೆಯ ಸಿಬ್ಬಂದಿ ಪ್ರಕಾಶ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರಪಡಿಸುವಲ್ಲಿ ಸಾಕಷ್ಟು ಸಹಕರಿಸಿರುತ್ತಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರ ಕಛೇರಿಯ ಪ್ರಕಟಣೆ ತಿಳಿಸಿದೆ.