ಅಮಿತ್ ಶಾ ಹೇಳಿಕೆ ಖಂಡಿಸಿ ಸಂಪೂರ್ನ್ ಔರಾದ್ ಬಿ ಬಂಧ್.!

27ಡಿ24 ಔರಾದ ಬಿ ಇಂದು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ಮಾತುಗಳನ್ನಾಡಿರುವುದನ್ನು ಖಂಡಿಸಿ ಡಾ. ಬಿ. ಆರ್ ಅಂಬೇಡ್ಕರ್ ಸ್ವಾಭಿಮಾನಿ ಹೋರಾಟ ಸಮಿತಿಯಿಂದ ಇಂದು ಔರಾದ್ ಪಟ್ಟಣ ಸಂಪೂರ್ಣವಾಗಿ ಬಂದ್ ಮಾಡಲಾಯಿತು.ಔರಾದ್ ನಗರದಲ್ಲಿ ಬೆಳಿಗ್ಗೆಯಿಂದ ಅಂಗಡಿ ಮಾಲಕರು ಸ್ವಯಂ ಘೋಷಿತವಾಗಿ ತಮ್ಮ ತಮ್ಮ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಅಮಿತ್ ಶಾ ವಿರುದ್ಧ ಘೋಷಣೆ ಕೂಗುತ್ತಾ, ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಟೈರ್ ಗೆ ಹಚ್ಚುವ ಮೂಲಕ ಆಕ್ರೋಶ ಹೊರಹಾಕಿದರು.

ಬಂದ್ ಯಶಸ್ವಿಯಾದ ನಂತರ ಕೊನೆಗೆ ತಹಶೀಲ್ದಾರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು. ಡಾ. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ, ಅವರ ಮೇಲೆ ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಗಿದೆ.

ಅಂಬೇಡ್ಕರ್ ಅವರನ್ನು ಅವಮಾನಿಸಿ ದೇಶದ್ರೋಹ ಕರ್ತವ್ಯ ಎಸಗಿರುವ ಅವರನ್ನು ಸಚಿವ ಸಂಪುಟದಿಂದ ವಜಾಗೋಳಿಸಿ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂದಿಸುವಂತೆ ಆಗ್ರಹಿಸಿದರು.

ಔರಾದ್ ಬಂದ್ ಹೋರಾಟದ ನಡುವೆಯೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ವಿವಿಧ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಝರೆಪ್ಪಾ ವರ್ಮಾ, ಉಪಾಧ್ಯಕ್ಷ ಗಣಪತರಾವ್ ಶೆಂಬೆಳ್ಳಿ, ಆನಂದ್ ಗಲಗಲೆ, ಸುಭಾಸ್ ಲಾಧಾ, ಬಾಬುರಾವ್ ತಾರೆ, ರಾಮಣ್ಣ ವಡೆಯರ್, ಸುಧಾಕರ್ ಕೊಳ್ಳೂರ್, ಡಾ. ಫಯಾಜ್ ಅಲಿ, ರಹಿಂ ಮೌಲಾನಾ, ಧನರಾಜ್ ಮುಸ್ತಾಪುರ್, ಸತೀಶ್ ವಗ್ಗೆ, ಗೌತಮ್ ಮೇತ್ರೆ, ಸುನಿಲ್ ಮಿತ್ರ, ಶಿವು ಕಾಂಬಳೆ, ರತ್ನದೀಪ್ ಕಸ್ತುರೆ, ವಿನೋದ್ ಡೋಳೆ, ದತ್ತಾತ್ರಿ ಮುಂಗನಾಳಕರ ಹಾಗೂ ಪ್ರಕಾಶ ಅಲ್ಲಾಪುರ್ ಸೇರಿದಂತೆ ಸಾವಿರಾರು ಜನ ಸೇರಿದ್ದರು.

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

1 hour ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

1 hour ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

1 hour ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

1 hour ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

1 hour ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

7 hours ago