ಅಮೃತ್ ಯೋಜನೆಯ ಅನುದಾನ ದುರ್ಬಳಕೆ: ಎನ್.ಆರ್.ರಮೇಶ್ ಆರೋಪ.!

ಬೆಂಗಳೂರು.26.ಏಪ್ರಿಲ್.25:- ಕೇಂದ್ರ ಸರ್ಕಾರದ ಅಮೃತ್‌ಯೋಜನೆ ಅನುದಾನ ರಾಜ್ಯ ಸರ್ಕಾರ ದುರುಪಯೋಗ ದುರ್ಬಳಕೆ ಮಾಡಿಕೊಂಡಿದೆ.

ರಾಜ್ಯದಲ್ಲಿ ಅಮೃತ್‌ಯೋಜನೆ ಅನುಷ್ಠಾನದ ಹೆಸರಿನಲ್ಲಿ ಬೃಹತ್ ಮೊತ್ತ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣದ ಆರೋಪ ಸಂಬಂಧ ವಾರದೊಳಗೆ ನಗರಾಭಿವೃದ್ಧಿ ಸಚಿವಾಲಯವು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದೆ

ಈ ಸಂಬಂಧ ಕೇಂದ್ರದ ನಗರಾಭಿವೃದ್ಧಿ ಸಚಿವಾಲಯವು ರಾಜ್ಯದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ದೂರಿಗೆ ಸಂಬಂಧಿಸಿ ವಿವರವಾದ ಮಾಹಿತಿ ಒಳಗೊಂಡ ವರದಿಯನ್ನು ರವಾನಿಸಬೇಕು ಎಂದು ಸ್ಪಷ್ಟ ಸೂಚನೆ ಕೊಡಲಾಗಿದೆ.

ಕೇಂದ್ರ ಸರ್ಕಾರವು ಅಮೃತ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 2023-25ನೇ ಸಾಲಿಗೆ ಬಿಡುಗಡೆ ಮಾಡಿದ್ದ 16,989.66 ಕೋಟಿ ರೂ. ಅನುದಾನದಲ್ಲಿ ಹೆಚ್ಚಿನ ಮೊತ್ತವು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬುದಾಗಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಇತ್ತೀಚಿಗೆ ಪ್ರಧಾನಮಂತ್ರಿ ಹಾಗೂ ಕೇಂದ್ರದ ವಸತಿ ಮತ್ತು ನಗರಾಭಿವೃದ್ಧಿ ಸಚಿವರಿಗೆ 7,281 ಪುಟಗಳ ದಾಖಲೆ ಸಹಿತ ದೂರು ಸಲ್ಲಿಸಿದ್ದರು.

ಈ ದೂರು ಆಧರಿಸಿ ಕೇಂದ್ರವು ಅನುದಾನ ದುರ್ಬಳಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದ ಸಂಬಂಧಿಸಿದ ಇಲಾಖೆಯಿಂದ ಸ್ಪಷ್ಟನೆ ರೂಪದಲ್ಲಿ ದಾಖಲೆ ಸಹಿತಿ ಮಾಹಿತಿ ಒದಗಿಸಲು ಸೂಚನೆ ನೀಡಿದೆ.

ಪೌರಾಡಳಿತ ನಿರ್ದೇಶನಾಲಯದ ಅಮೃತ್ ಯೋಜನೆಯ ಮಿಷನ್ ನಿರ್ದೇಶಕರಿಗೂ ಪತ್ರವನ್ನು ರವಾನಿಸಲಾಗಿದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

37 minutes ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

1 hour ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

2 hours ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

3 hours ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

3 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

3 hours ago