ಬೆಂಗಳೂರು.26.ಏಪ್ರಿಲ್.25:- ಕೇಂದ್ರ ಸರ್ಕಾರದ ಅಮೃತ್ಯೋಜನೆ ಅನುದಾನ ರಾಜ್ಯ ಸರ್ಕಾರ ದುರುಪಯೋಗ ದುರ್ಬಳಕೆ ಮಾಡಿಕೊಂಡಿದೆ.
ರಾಜ್ಯದಲ್ಲಿ ಅಮೃತ್ಯೋಜನೆ ಅನುಷ್ಠಾನದ ಹೆಸರಿನಲ್ಲಿ ಬೃಹತ್ ಮೊತ್ತ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣದ ಆರೋಪ ಸಂಬಂಧ ವಾರದೊಳಗೆ ನಗರಾಭಿವೃದ್ಧಿ ಸಚಿವಾಲಯವು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದೆ
ಈ ಸಂಬಂಧ ಕೇಂದ್ರದ ನಗರಾಭಿವೃದ್ಧಿ ಸಚಿವಾಲಯವು ರಾಜ್ಯದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ದೂರಿಗೆ ಸಂಬಂಧಿಸಿ ವಿವರವಾದ ಮಾಹಿತಿ ಒಳಗೊಂಡ ವರದಿಯನ್ನು ರವಾನಿಸಬೇಕು ಎಂದು ಸ್ಪಷ್ಟ ಸೂಚನೆ ಕೊಡಲಾಗಿದೆ.
ಕೇಂದ್ರ ಸರ್ಕಾರವು ಅಮೃತ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 2023-25ನೇ ಸಾಲಿಗೆ ಬಿಡುಗಡೆ ಮಾಡಿದ್ದ 16,989.66 ಕೋಟಿ ರೂ. ಅನುದಾನದಲ್ಲಿ ಹೆಚ್ಚಿನ ಮೊತ್ತವು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬುದಾಗಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಇತ್ತೀಚಿಗೆ ಪ್ರಧಾನಮಂತ್ರಿ ಹಾಗೂ ಕೇಂದ್ರದ ವಸತಿ ಮತ್ತು ನಗರಾಭಿವೃದ್ಧಿ ಸಚಿವರಿಗೆ 7,281 ಪುಟಗಳ ದಾಖಲೆ ಸಹಿತ ದೂರು ಸಲ್ಲಿಸಿದ್ದರು.
ಈ ದೂರು ಆಧರಿಸಿ ಕೇಂದ್ರವು ಅನುದಾನ ದುರ್ಬಳಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದ ಸಂಬಂಧಿಸಿದ ಇಲಾಖೆಯಿಂದ ಸ್ಪಷ್ಟನೆ ರೂಪದಲ್ಲಿ ದಾಖಲೆ ಸಹಿತಿ ಮಾಹಿತಿ ಒದಗಿಸಲು ಸೂಚನೆ ನೀಡಿದೆ.
ಪೌರಾಡಳಿತ ನಿರ್ದೇಶನಾಲಯದ ಅಮೃತ್ ಯೋಜನೆಯ ಮಿಷನ್ ನಿರ್ದೇಶಕರಿಗೂ ಪತ್ರವನ್ನು ರವಾನಿಸಲಾಗಿದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…