ರಾಜ್ಯದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ , ಮತ್ತು ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ.ಕ ಜಿಲ್ಲೆಯಲ್ಲಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ ಶೈಕ್ಷಣಿಕ ವರ್ಷ 2025-26ನೇ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ”ಸೇವಾ ಸಿಂಧು ಪೋರ್ಟಲ್” ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ವಸತಿ ಶಾಲೆಗಳ ವಿವರ: ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಸೈಗೋಳಿ ಉಳ್ಳಾಲ , (ಆಂಗ್ಲ ಮಾಧ್ಯಮ,ಪಠ್ಯಕ್ರಮ-ಸಿ.ಬಿ.ಎಸ್.ಇ) , ಸರಕಾರಿ ಮುಸ್ಲಿಂ ವಸತಿ ಶಾಲೆ ಅಸೈ ಮದಕ (ಆಂಗ್ಲ ಮಾಧ್ಯಮ,ಪಠ್ಯಕ್ರಮ -ರಾಜ್ಯ.)
ವಸತಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳು:-ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ,ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಲಾಗುತ್ತಿದೆ. ಸದರಿ ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ. ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ನಲ್ಲಿ ನೇರವಾಗಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ. ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ನಲ್ಲಿ ನೇರವಾಗಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಪಾಂಡೇಶ್ವರ ಓಲ್ಡ್ಕೆಂಟ್ ರೋಡ್ನಲ್ಲಿರುವ ಇಲಾಖೆಯ ಕಚೇರಿಯನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…