ಬೆಳಗಾವಿ.03.ಮಾರ್ಚ.25:- ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಲಪ್ರಭಾ ನದಿ ದಡದಲ್ಲಿರುವ ಅಸೋಗಾ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾನುವಾರ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ನೇತೃತ್ವದಲ್ಲಿ ಗಿಡ, ಮರಗಳ ಕೆಳಗಡೆ ಇಟ್ಟಿದ್ದ ದೇವರ ಫೋಟೋ ಸಂಗ್ರಹಿಸಿ ವಿಧಿ ವಿಧಾನಗಳ ಮೂಲಕ ವಿಸರ್ಜನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೀರೇಶ ಬಸಯ್ಯ ಹಿರೇಮಠ ಅವರು, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತನ್ನದೆಯಾದ ಇತಿಹಾಸ ಇದೆ. ಭಕ್ತರು ಇಲ್ಲಿಗೆ ಬಂದು ತಮ್ಮ ದೇವರ ಬಳಿ ತಮ್ಮ ಕಷ್ಟಗಳನ್ನು ಹೇಳಿಕೊಳ್ಳುತ್ತಾರೆ. ಮನೆಯಲ್ಲಿ ಮುಕ್ಕಾದ ದೇವರ ಫೋಟೋಗಳನ್ನು ಗಿಡ, ಮರಗಳ ಕೆಳಗೆ ಇಡುವ ಬದಲು ಅವುಗಳನ್ನು ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಬೇಕು.
ದೇವರ ಫೋಟೋಗಳಿಗೂ ಜೀವ ಇರುತ್ತವೆ ಎಂಬ ಕಲ್ಪನೆ ನಮ್ಮ ಹಿಂದೂ ಪುರಾಣಗಳಲ್ಲಿ ಇದೆ. ಎಲ್ಲರೂ ಇದನ್ನು ತಪ್ಪದೆ ಪಾಲಿಸಬೇಕು ಎಂದು ಕರೆ ನೀಡಿದರು.
ದೇವರು ನಾನಾ ರೂಪದಲ್ಲಿ ಭಕ್ತರಿಗೆ ಪ್ರತ್ಯಕ್ಷನಾಗುತ್ತಾನೆ. ಸಂಭ್ರಮದಿಂದ ದೇವಸ್ಥಾನ ಜಾತ್ರೆಗಳಲ್ಲಿ ದೇವರ ಫೋಟೋ ಹಣ ಕೊಟ್ಟು ಖರೀದಿ ಮಾಡಿ ಮನೆಯಲ್ಲಿ ಪೂಜೆ ಸಲ್ಲಿಸುವ ನಾವುಗಳು ಅದು ಮುಕ್ಕಾದಾಗ ಅದನ್ನು ಗಿಡ, ಮರಗಳ ಕೆಳಗಡೆ ಇಡುವುದರಿಂದ ನಮ್ಮ ಸಂಪ್ರದಾಯವನ್ನು ನಾವೆ ಹಾಳು ಮಾಡಿಕೊಳ್ಳುತ್ತಿದ್ದೇವೆ.
ದೇವರ ಫೋಟೋಗಳ ವಿಸರ್ಜನೆಗಾಗಿ ನಮಗೆ ಸಂಪರ್ಕ ಮಾಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿವು ಬುಡರಕಟ್ಟಿ, ಮಕರಂದ ಲೋಕಂಡೆ, ಸುದೇಶ ತೋರವಾಟ, ಜಯಂತ ಪಾಟೀಲ್, ಮನೋಜ್ ಕೊಲ್ಸೆಕರ್, ಗೌರೀಶ್ ವೀರೇಶ್ ಹಿರೇಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು.15.ಆಗಸ್ಟ್.25:- ರಾಜ್ಯದಲ್ಲಿ ಖಾಯಂ ಶಿಕ್ಷಕರು ತುಂಬಿ ಇಲ್ಲದ ಕಾರಣ 2025-26 ಶೈಕ್ಷಣಿಕ ವರ್ಷದಲ್ಲಿ ಮೊದಲನೇ ಹಂತದಲ್ಲಿ ಜಿಲ್ಲಾವಾರು ಬೇಡಿಕೆಗೆ ಅನುಗುಣವಾಗಿ…
ಬೆಂಗಳೂರು.15.ಆಗಸ್ಟ್.25:- ರಾಜ್ಯ ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಲ್ಲಿ ಅತಿಥಿ ಶಿಕ್ಷಕರ ತಾತ್ಕಾಲಿಕ ವ್ಯವಸ್ಥೆ ಅತಿಥಿ ಶಿಕ್ಷಕರ ನೇಮಕ…
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…