ಬೆಳಗಾವಿ.03.ಮಾರ್ಚ.25:- ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಲಪ್ರಭಾ ನದಿ ದಡದಲ್ಲಿರುವ ಅಸೋಗಾ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾನುವಾರ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ನೇತೃತ್ವದಲ್ಲಿ ಗಿಡ, ಮರಗಳ ಕೆಳಗಡೆ ಇಟ್ಟಿದ್ದ ದೇವರ ಫೋಟೋ ಸಂಗ್ರಹಿಸಿ ವಿಧಿ ವಿಧಾನಗಳ ಮೂಲಕ ವಿಸರ್ಜನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೀರೇಶ ಬಸಯ್ಯ ಹಿರೇಮಠ ಅವರು, ರಾಮಲಿಂಗೇಶ್ವರ ದೇವಸ್ಥಾನಕ್ಕೆ ತನ್ನದೆಯಾದ ಇತಿಹಾಸ ಇದೆ. ಭಕ್ತರು ಇಲ್ಲಿಗೆ ಬಂದು ತಮ್ಮ ದೇವರ ಬಳಿ ತಮ್ಮ ಕಷ್ಟಗಳನ್ನು ಹೇಳಿಕೊಳ್ಳುತ್ತಾರೆ. ಮನೆಯಲ್ಲಿ ಮುಕ್ಕಾದ ದೇವರ ಫೋಟೋಗಳನ್ನು ಗಿಡ, ಮರಗಳ ಕೆಳಗೆ ಇಡುವ ಬದಲು ಅವುಗಳನ್ನು ಶಾಸ್ತ್ರೋಕ್ತವಾಗಿ ವಿಸರ್ಜನೆ ಮಾಡಬೇಕು.
ದೇವರ ಫೋಟೋಗಳಿಗೂ ಜೀವ ಇರುತ್ತವೆ ಎಂಬ ಕಲ್ಪನೆ ನಮ್ಮ ಹಿಂದೂ ಪುರಾಣಗಳಲ್ಲಿ ಇದೆ. ಎಲ್ಲರೂ ಇದನ್ನು ತಪ್ಪದೆ ಪಾಲಿಸಬೇಕು ಎಂದು ಕರೆ ನೀಡಿದರು.
ದೇವರು ನಾನಾ ರೂಪದಲ್ಲಿ ಭಕ್ತರಿಗೆ ಪ್ರತ್ಯಕ್ಷನಾಗುತ್ತಾನೆ. ಸಂಭ್ರಮದಿಂದ ದೇವಸ್ಥಾನ ಜಾತ್ರೆಗಳಲ್ಲಿ ದೇವರ ಫೋಟೋ ಹಣ ಕೊಟ್ಟು ಖರೀದಿ ಮಾಡಿ ಮನೆಯಲ್ಲಿ ಪೂಜೆ ಸಲ್ಲಿಸುವ ನಾವುಗಳು ಅದು ಮುಕ್ಕಾದಾಗ ಅದನ್ನು ಗಿಡ, ಮರಗಳ ಕೆಳಗಡೆ ಇಡುವುದರಿಂದ ನಮ್ಮ ಸಂಪ್ರದಾಯವನ್ನು ನಾವೆ ಹಾಳು ಮಾಡಿಕೊಳ್ಳುತ್ತಿದ್ದೇವೆ.
ದೇವರ ಫೋಟೋಗಳ ವಿಸರ್ಜನೆಗಾಗಿ ನಮಗೆ ಸಂಪರ್ಕ ಮಾಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಿವು ಬುಡರಕಟ್ಟಿ, ಮಕರಂದ ಲೋಕಂಡೆ, ಸುದೇಶ ತೋರವಾಟ, ಜಯಂತ ಪಾಟೀಲ್, ಮನೋಜ್ ಕೊಲ್ಸೆಕರ್, ಗೌರೀಶ್ ವೀರೇಶ್ ಹಿರೇಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…
ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…