ಕಲಬುರಗಿ.09.ಮಾರ್ಚ.25:- ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೇ
ಸ್ತ್ರೀ ಎಂದರೆ ಅಷ್ಟೇ ಸಾಕೆ..
ಇದು ಮಹಿಳೆಯರ ಅಗಾಧವಾದ ಶಕ್ತಿಯನ್ನು , ಮಮತೆಯನ್ನು ವರ್ಣಿಸುವ ಜಿ ಎಸ್ ಶಿವರುದ್ರಪ್ಪನವರ ಕವಿತೆಯ ಕೆಲ ಸಾಲು.
ಇಂದು ಕಲಬುರಗಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ,
ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ಜೊತೆಗೂಡಿ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಿದ್ದು ಸಾರ್ಥಕವೆನಿಸಿತು.
ಕಾರ್ಯಕ್ರಮದಲ್ಲಿ
⁃ 4944 ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಬುಕ್ ವಿತರಿಸಲಾಯಿತು.
⁃ ಹೊಸದಾಗಿ ಆಯ್ಕೆಯಾದ 120 ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರಿಗೆ ಆದೇಶಪತ್ರ ವಿತರಿಸಲಾಯಿತು.
⁃ 1257 ಅರೋಗ್ಯ ಪುಷ್ಠಿ ಫಲಾನುಭವಿಗಳಿಗೆ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಯಿತು
⁃ ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹಲಕ್ಷ್ಮಿ ಯೋಜನೆಯ ಚೆಕ್ ವಿತರಿಸಲಾಯಿತು
ಯಾವುದೇ ಒಂದು ಸಮಾಜದ ಅಭಿವೃದ್ಧಿಗೆ ಅಲ್ಲಿನ ಮಹಿಳೆಯರ ಸ್ವತಂತ್ರವೇ ಮಾನದಂಡ ಎಂಬ ಮಾತಿದೆ,
ಅಂತೆಯೇ
ಮಹಿಳಾ ಸಬಲೀಕರಣದಲ್ಲಿ ನಮ್ಮ ಸರ್ಕಾರ ದೃಢ ಹೆಜ್ಜೆ ಇಡುವ ಮೂಲಕ ಅಭಿವೃದ್ಧಿಗೆ ನೈಜ ಅರ್ಥ ನೀಡುತ್ತಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…