ಬೀದರ: ೨೫, ಬೀದರ ನಗರಸಭೆ ವ್ಯಾಪ್ತಿಯಲ್ಲಿರುವ ನೌಬಾದ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಉತ್ತಮ ಚಿಕಿತ್ಸೆ ನೀಡಲು ಎಸ್ಬಿ ಪಾಟೀಲ ಡೆಂಟಲ್ ಹಾಸ್ಪಿಟಲ್ ಎದುರುಗಡೆ ನೌಬಾದನಲ್ಲಿ ನೂತನವಾಗಿ ನಿರ್ಮಿಸಿದ ಆಕ್ಸಿಲೈಫ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಜನವರಿ ೨ ರಂದು ಉದ್ಘಾಟನೆಗೊಂಡಿದ್ದು, ಸಾರ್ವಜನಿಕರೆಲ್ಲರ ಆರೋಗ್ಯ ರಕ್ಷಣೆಗಾಗಿ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪ್ರತಿ ಶನಿವಾರ ಮತ್ತು ರವಿವಾರ ಆಸ್ಪತ್ರೆಯಲ್ಲಿ ಬಿಪಿ, ಶುಗರ್ ವಿವಿಧ ರೀತಿಯ ರಕ್ತದ ಪರೀಕ್ಷೆ ಸ್ಕಾö್ಯನಿಂಗ್ ಸೇರಿದಂತೆ ಆಸ್ಪತ್ರೆಯಲ್ಲಿರುವ ಸೇವೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಶ್ರೀ ಶಿವಲಿಂಗ ವಿದ್ಯಾವರ್ಧಕ ಎಜ್ಯುಕೇಶನ ಟ್ರಸ್ಟ್ನ ಪ್ರಮುಖ ಮತ್ತು ಆಸ್ಪತ್ರೆಯ ಅಧ್ಯಕ್ಷರಾದ ಶೈಕ್ಷಣಿಕ ಸೇವಕ ಸಮಾಜ ಸೇವಕರಾದ ಚಂದ್ರಕಾoತ ಗದ್ದಗಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರಿನ ಗ್ರಾಮೀಣ ಮತ್ತು ನಗರದ ಬಡ, ದೀನ-ದಲಿತರ ಮಧ್ಯಮ ವರ್ಗದ ಸಾರ್ವಜನಿಕರಿಗೆ ಅನುಕೂಲಕರವಾಗಲೆಂದು ಆಕ್ಸಿಲೈಫ್ ಆಸ್ಪತ್ರೆ ತೆರೆಯಲಾಗಿದೆ.
ಸಾರ್ವಜನಿಕರು ಇದರ ಸದುಪಯೊಗ ಪಡೆದುಕೊಳ್ಳಬೇಕೆಂದು ಚಂದ್ರಕಾAತ ಗದ್ದಗಿ ಬೀದರ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಎಲ್ಲಾ ರೀತಿಯ ಮಲ್ಟಿ ಸ್ಪೆಶಾಲಿಟಿ ಸೌಲಭ್ಯಗಳು ಲಭ್ಯ ಇವೆ. ಅಂಬುಲೆನ್ಸ್ ವ್ಯವಸ್ಥೆ, ತುರ್ತು ಚಿಕಿತ್ಸಾ ಘಟಕ ಇದೆ. ೫೦ ಹಾಸಿಗೆಯ ಈ ಆಸ್ಪತ್ರೆಯಲ್ಲಿ ಸುಮಾರು ೧೮ ರಿಂದ ೨೫ ಜನ ವೈದ್ಯರು ಜಿಎನ್ಎಮ್, ಲ್ಯಾಬ್, ಇತರೆ ಸಿಬ್ಬಂದಿಗಳು, ನರ್ಸಿಂಗ್ ವಿದ್ಯಾರ್ಥಿಗಳು ೨೪ಘಿ೭ ಸೇವೆಯಲ್ಲಿದ್ದಾರೆೆ ಎಂದು ವಿವರಿಸಿದ್ದಾರೆ.
ಶ್ರೀ ಶಿವಲಿಂಗ ವಿದ್ಯಾವರ್ಧಕ ಎಜುಕೇಶನ್ ಟ್ರಸ್ಟ ಅಡಿಯಲ್ಲಿ ಪ್ರಾರಂಭಿಸಿರುವ ಅಡಿಯಲ್ಲಿ ಪ್ರಾರಂಭಿಸಿರುವ ಆ್ಯಕ್ಸಿಲೈಫ್ ಆಸ್ಪತ್ರೆಯಿಂದ ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರ್ಪಡಿಸಲಾಗುವುದು. ೧೯೯೩ ರಲ್ಲಿ ಸ್ಥಾಪನೆಗೊಂಡ ಸಂಸ್ಥೆಯ ಅಡಿಯಲ್ಲಿ ನರ್ಸಿಂಗ್ ಕಾಲೇಜು ಕಾನೂನು ಎಂ.ಜಿ. ಕಾಲೇಜು, ಎಂಎಸ್ಸಿ. ಡಿ.ಫಾಮರ್ಸಿ ಮತ್ತು ಬಿಫಾಮರ್ಸಿ ಸೇರಿದಂತೆ ವಿವಿಧ ಕೋರ್ಸುಗಳ ತರಗತಿಗಳನ್ನು ನಡೆಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…