ಬೀದರ.30.ಜುಲೈ.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು ಬೆಂಬಲಿಸಲು “ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ ಮಕ್ಕಳ ಆರೋಗ್ಯಕರ ಭವಿಷ್ಯಕ್ಕಾಗಿ ಹೂಡಿಕೆ ಮಾಡಿದಂತೆ (Invest in breastfeeding, invest in future)” ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ-2025 ಎಲ್ಲೆಡೆ ಜಾಗತಿಕ ಅಭಿಯಾನವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಗು ಜನಿಸಿದ ಒಂದು ಗಂಟೆಯೊಳಗೆ ಸ್ತನ್ಯಪಾನ ಮಾಡಿಸುವುದು ಕೊಲೊಸ್ಟ್ರೋಮ್ ಸೇವನೆಯ ಪ್ರಾಮುಖ್ಯತೆ ಹಾಗೂ ಮೊದಲ ಆರು ತಿಂಗಳ ವರೆಗೆ ಕಡ್ಡಾಯ ಸ್ತನ್ಯಪಾನ ಮಾಡುವುದರಿಂದ ಆರಂಭಿಕ ಬಾಲ್ಯದ ಬೆಳವಣಿಗೆ ಹೆಚ್ಚಿಸಲು ಮತ್ತು ಪೌಷ್ಟಿಕಾಂಶವನ್ನು ಸುಧಾರಿಸಲು ಹಾಗೂ ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸ್ತನ್ಯಪಾನ ಮಾಡಿಸುವುದು ಬಹಳ ಮುಖ್ಯವಾಗಿರುತ್ತದೆ. ಎಲ್ಲರೂ ಎಚ್ಚೆತ್ತುಕೊಂಡು ಎದೆಹಾಲಿನ ಮಹತ್ವದ ಬಗ್ಗೆ ಅರಿತುಕೊಂಡು ಎಲ್ಲಾ ತಾಯಂದಿರು ಹಾಗೂ ಗರ್ಭಿಣಿಯರು ಕನಿಷ್ಟ ಎರಡು ವರ್ಷದವರೆಗೆ ಸ್ತನ್ಯಪಾನ ಮಾಡಿಸಬೇಕು.
ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಗೆ ಆಗುವುದರಿಂದ ಅನೇಕ ಮಾರಕ ರೋಗಗಳು ಬರದಂತೆ ಮಗುವಿಗೆ ರಕ್ಷಣೆ ಸಿಗುತ್ತದೆ. ಮಗುವಿನ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಹೆಚ್ಚಾಗುತ್ತದೆ ಹಾಗೂ ಅಪೌಷ್ಟಿಕತೆಯನ್ನು ತಡೆಗಟ್ಟುತ್ತದೆ. ತಾಯಿ ಮತ್ತು ಮಗುವಿನ ಮಧ್ಯೆ ಆತ್ಮೀಯ ಪ್ರೀತಿ ವಾತ್ಸಲ್ಯ ಹೆಚ್ಚಾಗಿ ಬಾಂಧವ್ಯ ಬೆಳೆಯುತ್ತದೆ. ತಾಯಿಯು ಮಗುವಿಗೆ ಸ್ತನ್ಯಪಾನ ಮಾಡಿಸುವುದರಿಂದ ಸ್ತನ ಕ್ಯಾನ್ಸರ್ ತಡೆಗಟ್ಟುತ್ತದೆ, ದೇಹದಲ್ಲಿಯ ಬೊಜ್ಜು ಕರಗುತ್ತದೆ, ತಾಯಿಯು ನಿರಂತರವಾಗಿ ಸ್ತನ್ಯಪಾನ ಮಾಡಿಸುವುದರಿಂದ ತಾತ್ಕಾಲಿಕ ಗರ್ಭನಿರೋಧಕವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…