ಬೀದರ.29.ಮೇ.25:- ಸರ್ಕಾರದ ಆದೇಶದಂತೆ ಪ್ರತಿ ವರ್ಷದಂತೆ ಈ ವರ್ಷವು “ಮುಟ್ಟಿನ ನೈರ್ಮಲ್ಯ ದಿನ” ವನ್ನು ಆಚರಿಸಲಾಗುತ್ತಿದೆ. ಋತುಚಕ್ರದ ಅವಧಿ, ಮುಟ್ಟಿನ ಸಮಯದಲ್ಲಿ ಬಳಸುವ ಸ್ಯಾನಿಟೆರಿ ಪ್ಯಾಡ್ ಹಾಗೂ ಮೆನುಸ್ಟುçವಲ್ ಕಪ್ ಹಾಗೂ ವೈಯಕ್ತಿಕ ಸ್ವಚ್ಛತೆ ಮತ್ತು ಪೌಷ್ಠಿಕ ಆಹಾರದ ಕುರಿತು ಬೀದರ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಅನೀತಾ ಮಾಹಿತಿ ನೀಡಿದರು.
ಅವರು ಬುಧವಾರ ಡಾ|| ಬಿ.ಆರ್ ಅಂಬೇಡ್ಕರ ವಸತಿ ನಿಲಯ ಮೈಲೂರು ಬೀದರದಲ್ಲಿ ಹಮ್ಮಿಕೊಂಡಿದ್ದ “ಮುಟ್ಟಿನ ಸ್ನೇಹಿ ಪ್ರಪಂಚಕ್ಕಾಗಿ ಎಲ್ಲರೂ ಒಗ್ಗೂಡೋಣ” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ “ಮುಟ್ಟಿನ ನೈರ್ಮಲ್ಯ ದಿನ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರು ಋತುಚಕ್ರದ ಬಗ್ಗೆ ಸರಿಯಾದ ಮಾಹಿತಿಯನ್ನು ಪಡೆದುಕೊಂಡು ಆತ್ಮ ವಿಶ್ವಾಸದಿಂದ ಮುಟ್ಟಿನ ದಿನಗಳನ್ನು ನಿರ್ವಹಣೆ ಮಾಡಬೇಕು ಎಂದರು.
ಬೀದರ ಆರ್.ಕೆ.ಎಸ್.ಕೆ ಸಂಯೋಜಕರಾದ ವನಜಾಕ್ಷಿ ಅವರು ಮಾತನಾಡಿ, ಜೀವ ಸೃಷ್ಠಿಯ ಮೂಲಕ್ರಿಯೆಯೇ ಋತುಚಕ್ರ, ಜೀವ ಜಗತ್ತನ್ನು ಮುಂದುವರೆಸಲು ಅಗತ್ಯವಾದ ಒಂದು ಕ್ರಿಯೆಯೇ ಋತುಚಕ್ರವಾಗಿದೆ. ಇದು ದೇವರು ಕೊಟ್ಟ ವರವಾಗಿದೆ ಹಾಗೂ ಪ್ರಕೃತಿಯ ನಿಯಮವಾಗಿದೆ ಎಂದರು.
ಈ ಸಂದರ್ಭದಲ್ಲಿ ಐಸಿಟಿಸಿ ಸಂಯೋಜಕರಾದ ವಿಜಯಲಕ್ಷಿö್ಮo, ವಸತಿ ನಿಲಯದ ವಾರ್ಡನ ಸೋನಿಕಾ, ವಸತಿ ನಿಲಯದ ಸಿಬ್ಬಂದಿಗಳು ಸೇರಿದಂತೆ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…