ಬೀದರ.12.ಮಾರ್ಚ.25: – ಜಿಲ್ಲೆಯ ಎಲ್ಲಾ ನಾಗರಿಕರು ಮೌಲ್ಯಯುತವಾಗಿರುವ ಆಧಾರ್ ಗುರುತಿನ ಚೀಟಿ ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿಗಾಗಿ ಬಯೋಮೆಟ್ರಿಕ್ ನೀಡುವ ಮೂಲಕ ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಕರೆ ನೀಡಿದರು.
ಅವರು ಸೋಮವಾರ ಬೀದರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಕಮೀಟಿಯ ಸಭೆಯಲ್ಲಿ ಮಾತನಾಡಿದರು.
2 ಲಕ್ಷ ನವೀಕರಣ ಬಾಕಿ: ಜಿಲ್ಲೆಯಲ್ಲಿ 5 ವರ್ಷ ಮೇಲ್ಪಟ್ಟ 1,23,830 ಮಕ್ಕಳು, 15 ವರ್ಷ ಮೇಲ್ಪಟ್ಟ 79,033 ಸೇರಿದಂತೆ 2,02,863 ಜನರು ಆಧಾರ್ ನವೀಕರಣ ಬಾಕಿಯಿದೆ. ಶಾಲಾ ವಿದ್ಯಾರ್ಥಿಗಳಿದ್ದಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಆಧಾರ್ ಕ್ಯಾಂಪ್ ನಿಯೋಜಿಸಿ ಬಯೋಮೆಟ್ರಿಕ್ ಮಾಡಿಸಬೇಕು ಹಾಗೂ ಮೊಬೈಲ ನಂ ಅಪಡೇಟ್ ಬಾಕಿಯಿರುವ 1,30,923 ಆ ನಿವಾಸಿಗಳು ಅಂಚೆ ಕಛೇರಿ ಹತ್ತಿರದ ಪೋಸ್ಟ ಮಾಸ್ಟರಗೆ ಭೇಟಿ ಮಾಡಿ ಮೊಬೈಲ್ ಅಪಡೇಟ್ ಮಾಡಿಕೊಳ್ಳಬೇಕು ಅಂಚೆ ಕಛೇರಿ ಅಧೀಕ್ಷರಿಗೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ 19,46,492 ಲಕ್ಷ ಜನರಿಂದ ನೋಂದಣಿ ದೇಶದ ನಾಗರೀಕರಿಗೆ ಸರ್ಕಾರ ವಿಶಿಷ್ಟ ಗುರುತಿನ ಚೀಟಿ ವಿತರಿಸುತ್ತಿದ್ದು, ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊoಡು ಕಡ್ಡಾಯವಾಗಿ ಆಧಾರ್ ಕಾರ್ಡ್ ಮಾಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಈವರೆಗೆ 19,46,492 ಲಕ್ಷ ಜನರು ಆಧಾರ್ ನೋಂದಣಿ ಮಾಡಿಸಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 85,037 ಸಾವಿರ ಮಕ್ಕಳು, 5 ರಿಂದ 18 ವರ್ಷದ 4,39,333 ಲಕ್ಷ ಜನರು, 18 ವರ್ಷ ಮೇಲ್ಪಟ್ಟ 14,22,122 ಲಕ್ಷ ಸಾರ್ವಜನಿಕರು ಆಧಾರ್ ಕಾರ್ಡ್ ಪಡೆದಿದ್ದಾರೆ.
ರಾಜ್ಯ ಆಧಾರ್ ನೋಂದಣಿ ಪ್ರಾಧಿಕಾರ ಜಿಲ್ಲೆಯ ನಾಡಕಛೇರಿಯ ಜನಸ್ನೇಹಿ ಕೇಂದ್ರಗಳ ಕಛೇರಿಯಲ್ಲಿ ಆಯ್ದ ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ನೋಂದಣಿ ಕೇಂದ್ರ ತೆರೆದಿದೆ. ಕಚೇರಿ ಸಮಯದಲ್ಲಿ ಆಧಾರ್ ಸೇವೆ ಪಡೆದುಕೊಳ್ಳಬೇಕು. ಇಲ್ಲದಿದ್ದಲಿ ಆಧಾರ್ ನಿಷ್ಕ್ರಿಯಗೊಂಡು ವಿವಿಧ ಸೌಲಭ್ಯ ಅಥವಾ ಸೇವೆ ಪಡೆಯಲು ತೊಂದರೆಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
10 ವರ್ಷದ ಹಿಂದೆ ಆಧಾರ್ ನೋಂದಣಿ ಮಾಡಿಸಿದ ಎಲ್ಲರೂ ಗುರುತಿನ ಹಾಗೂ ವಿಳಾಸ ದಾಖಲೆ ನೀಡಿ ಅಧಾರ್ ಕೇಂದ್ರದಲ್ಲಿ ಮರು ಅಪ್ಲೋಡ್ ಮಾಡಿಸಬೇಕು. ಇದನ್ನು mಥಿಂಚಿಜhಚಿಚಿಡಿ.uiಜಚಿi. gov.iಟಿ ಅನ್ಲೈನ್ ಮೂಲಕವೂ ನೇರವಾಗಿ ನವೀಕರಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ, ಯುಐಡಿಐ ಮ್ಯಾನೇಜರ್, ಸಹಾಯಕ ಮ್ಯಾನೇಜರ್ ಡೇವಿಡ್ ಸೀಮನ್ಸೆ, ಡಿಡಿಪಿಐ ಬೀದರ, ಜಿಲ್ಲಾ ವಾರ್ತಾಧಿಕಾರಿ ಬೀದರ, ಅಂಚೆ ಕಛೇರಿಯ ವ್ಯವಸ್ಥಾಪಕರು, ಲೀಡ್ ಬ್ಯಾಂಕ ವ್ಯವಸ್ಥಾಪಕರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಬೀದರ, ಜಿಲ್ಲಾ ಆಧಾರ ಸಮಾಲೋಚಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…