ಬೀದರ 17. ಜನವರಿ.25:- ಪ್ರಕೃತಿ ವಿಕೋಪ ಬದಲಾಗುತ್ತಿರುವ ಹವಾಮಾನ ವೈಪರಿತ್ಯ ಎದುರಿಸುವ ನಿಟ್ಟಿನಲ್ಲಿ ರೈತರು ಆರ್ಥಿಕವಾಗಿ ಸಬಲರಾಗಲು ಕೃಷಿಯ ಜೊತೆಯಲ್ಲಿ ಹೈನುಗಾರಿಕೆ, ಕೋಳಿ ಹಾಗೂ ಮೀನು ಸಾಕಾಣಿಕೆಗೂ ಕೂಡ ಮಹತ್ವ ನೀಡುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ತಿಳಿಸಿದರು.

ಅವರು ಇಂದು ಬೀದರನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 20ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಜಾನುವಾರು ಕುಕ್ಕುಟ ಹಾಗೂ ಮತ್ಸö್ಯಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ ಶೇ.70 ರಷ್ಟು ಜನ ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ರೈತರ ಬೆಳೆಗಳಿಗೆ ವೈಜ್ಞಾನಿಕೆ ಬೆಲೆ ಬರಬೇಕು. ಪ್ರಕೃತಿ ವಿಕೋಪದಂತಹ ಪರಿಸ್ಥಿತಿಯಲ್ಲಿ ರೈತರಿಗೆ ಸಾಕಷ್ಟು ನಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಕೃಷಿ ಜೊತೆ ಸಹ ಉತ್ಪಾದನೆಗಳಾದ ಪಶು ಸಂಗೋಪನೆಗೆ ಆದ್ಯತೆ ನೀಡಬೇಕೆಂದರು.

ಜಿಲ್ಲೆಯಲ್ಲಿ ಕೃಷಿ ಪೂರಕ ಸಾಕಷ್ಟು ಉತ್ತಮ ವಾತಾವರಣವಿದ್ದು ನೈಸರ್ಗಿಕ ಸಂಪತ್ತಭರಿತವಾಗಿದೆ. ಈ ಭಾಗದಲ್ಲಿ ಹೈನುಗಾರಿಕೆ, ಕೋಳಿ, ಕುರಿ ಮತ್ತು ಮೀನು ಸಾಕಾಣಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ 20 ವರ್ಷಗಳ ಹಿಂದೆ ಬೀದರ ಜಿಲ್ಲೆಯಲ್ಲಿ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆರಂಭಿಸಲಾಗಿದೆ.
ಈಗಿನ ಯುವಕರಿಗೆ ಹಾಗೂ ಯುವಜನಾಂಗಕ್ಕೆ ಈ ತರಬೇತಿಗಳನ್ನು ಆರ್ಥಿಕ ಸಬಲೀಕರಣವಾಗುವ ಯೋಜನೆಗಳ ಕುರಿತು ಅಗತ್ಯ ಮಾಹಿತಿ ಹಾಗೂ ತರಬೇತಿಯನ್ನು ನೀಡಬೇಕಿದೆ.
ವಿಜ್ಞಾನ ತಂತ್ರಜ್ಞಾನ ಬದಲಾದಂತೆ ವಿಜ್ಞಾನಿಗಳು ಹೊಸ-ಹೊಸ ತಳಿಗಳನ್ನು ಬೆಳಕಿಗೆ ತರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರು ಯಾವ ತಳಿ ಬೆಳೆದರೆ ಹೆಚ್ಚಿನ ಲಾಭವಾಗುತ್ತದೆ ಎಂಬ ಬಗ್ಗೆ ಅಗತ್ಯ ತರಬೇತಿ ಅಗತ್ಯವಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಒಂದೂವರೆ ಲಕ್ಷ ಹಾಲು ಉತ್ಪಾದಿಸಲಾಗುತ್ತದೆ. ಇನ್ನು ಹೆಚ್ಚಿನ ಹಾಲು ಉತ್ಪಾದನೆಗೆ ಮಹಿಳೆಯರು ಒತ್ತು ನೀಡಬೇಕಿದೆ.
ಹಾಲಿನ ಉಪ ಉತ್ಪಾದನಗಳಿಗೂ ಸಹ ಮಾರುಕಟ್ಟೆ ಲಭ್ಯವಾಗಬೇಕಾಗಿದೆ. ಸರ್ಕಾರವು ಹೈನುಗಾರಿಕೆ ಸೇರಿದಂತೆ ಕೃಷಿ ಪೂರಕವಾದಂತಹ ಚಟುವಟಿಕೆಗಳಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತದೆ.
ಬಡ್ಡಿ ರಹಿತ ಸಾಲ, ರೋಗಗಳನ್ನು ತಡೆಗಟಲು ಜಾನುವಾರುಗಳಿಗೆ ಲಸಿಕೆ ನೀಡಲಾಗುತ್ತಿದೆ. ಉತ್ತಮ ಮೇವಿನ ಕಿಟ್ಟುಗಳನ್ನು ನೀಡಲಾಗುತ್ತಿದೆ. ರೈತರು ಹಾಗೂ ವಿಜ್ಞಾನಿಗಳ ಜೊತೆ ಸಂವಾದ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಅಗತ್ಯವಾದಂತಹ ಆಡಳಿತ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರಾತಿಗಾಗಿ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ತಿಳಿಸಿದರು. ತಾತ್ಕಾಲಿಕ ಬೋಧಕ-ಬೋಧಕೇತರ ಹುದ್ದೆಗಳ ಭರ್ತಿಗೂ ಸಹ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಕೆಕೆಆರ್ಡಿಬಿ ಅಡಿಯಲ್ಲಿ ಹೆಚ್ಚಿನ ಅನುದಾನ ನೀಡಲು ಸಹ ಯೋಜಿಸಲಾಗುವುದೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸ್ವರ್ಣ ಸಂಚಿಕೆ ಮತ್ತು ಇತರೆ ಪ್ರಕಟಣೆಗಳ ಬಿಡುಗಡೆ ಹಾಗೂ ತಂತ್ರಜ್ಞಾನ ಆಧಾರಿತ ತಳಿ ಗುರುತಿಸುವ ಮೊಬೈಲ್ ಆ್ಯಪ್ ಲೋಕಾರ್ಪಣೆಗೊಳಿಸಿ ಹಾಗೂ ರಾಜ್ಯದ 31 ಜಿಲ್ಲೆಗಳ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರೈತರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯರರು, ಭಾಲ್ಕಿ ಮಠದ ಗುರುಬಸವ ಪಟ್ಟದ್ದೇವರು, ಪಶು ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಯುಕ್ತರಾದ ರೂಪಾ, ಬೀದರನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಕೆ.ಸಿ.ವೀರಣ್ಣ, ವ್ಯವಸ್ಥಾಪಕ ಮಂಡಳಿ ಸದಸ್ಯರುಗಳಾದ ಲತಾ ಡಿ.ಎಚ್. ಡಾ.ವೆಂಕಟಾಚಲ ವಿ.ಎಚ್., ಡಾ.ಎಚ್.ಎಂ.ಜಯಪ್ರಕಾಶ, ಸಂಗಪ್ಪ ದೊಡ್ಡಬಸಪ್ಪಾ ವಾಲೀಕರ, ಬಸವರಾಜ ಪಿ.ಭತಮುರ್ಗೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ.ಮಂಜುನಾಥ ಪಾಳೇಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ದಿನೇಶ ಕುಮಾರ ಕಲ್ಲೇರ, ಬೀದರ ಕಪಪಮೀವಿವಿ ಕುಲಸಚಿವರಾದ ಡಾ.ಪಿ.ಟಿ.ರಮೇಶ, ಯಾದಲಾಪೂರ ಗ್ರಾಮ ಪಂಚಾಯತ ಅಧ್ಯಕ್ಷರಾದ ಸಪ್ನಾ ಸಜೀವಕುಮಾರ, ಬೀದರ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಡೀನ್ ಡಾ.ಎಂ.ಕೆ.ತಾAದಳೆ, ವಿಸ್ತರಣಾ ಅಧಿಕಾರಿಗಳಾದ ಬಸವರಾಜ ಅವಟಿ, ವಿವಿಧ ಇಲಾಖೆಗಳ ಉಪನಿರ್ದೇಶಕರುಗಳು ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.