ಆಸ್ತಿಗಳ ವಿವರ ಸಲ್ಲಿಸಲು ಸೂಚನೆ

ಬೀದರ.21.ಫೆಬ್ರುವರಿ.25: ಬೀದರ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳು/ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರಿಗೆ/ಅನುಭೋಗದಾರರು ನಗರಸಭೆ ವ್ಯಾಪ್ತಿಯೊಳಗೆ ಬರುವ ಸರ್ಕಾರಿ ಜಾಗ/ಅರೆಸರ್ಕಾರಿ/ ಸ್ಥಳೀಯ ಸಂಸ್ಥೆಗಳ ಒಡೆತನದಲ್ಲಿರುವ  ಸ್ವತ್ತುಗಳನ್ನು ಹೊರತುಪಡಿಸಿ ಇನ್ನುಳಿದ ಕಟ್ಟಡಗಳ/ನಿವೇಶನಗಳ ಮಾಲೀಕರು ನಿಮ್ಮ ನಿಮ್ಮ ಆಸ್ತಿಗಳಿಗೆ ಸಂಬಂಧಿಸಿದ ಪೂರಕ ನೋಂದಾಯಿತದಾಖಲೆ ಪತ್ರಗಳು/ಸ್ವತ್ತಿನ ಭಾವಚಿತ್ರ/ಮಾಲೀಕರ ಫೆÇೀಟೋ /ನಮೂನೆ-15(ಇಅ)/ಕೆ.ಇ.ಬಿ ಬಿಲ್/ಕುಡಿಯುವ ನೀರಿನ ಬಿಲ್/ಕಟ್ಟಡ ಪರವಾನಗಿ ಮತ್ತು ಅನುಮೋದಿತ ನಕ್ಷೆ /ಏಕನಿವೇಶನ ವಿನ್ಯಾಸ ಅನುಮೋದನೆ ಅಥವಾ ಅನುಮೋದಿತ ಬಡಾವಣೆಯ ನಕ್ಷೆ/ಅಲಿನೇಷನ್ನಕಲು ಪ್ರತಿ/ಆರ್.ಟಿ.ಸಿ. /ಮ್ಯೂಟೇಶನ್ ನಕಲು ಪ್ರತಿ/ಮಾಲೀಕರ ಆಧಾರ್ ಕಾರ್ಡ್ ಪ್ರತಿ/ ಮಾಲೀಕರ ಪಾನ್ ಕಾರ್ಡ್ ಪ್ರತಿ ಅಥವಾ ಚುನಾವಣಾ ಗುರುತಿನ ಚೀಟಿ ಹಾಗೂ ಇತರೆ ಅವಶ್ಯಕ ದಾಖಲಾತಿಗಳನ್ನು ನಗರಸಬೆ ಕಛೇರಿಗೆ ಸಲ್ಲಿಸಿ ಸ್ವತ್ತಿಗೆ ಸಂಬಂಧಪಟ್ಟ ಆಸ್ತಿ ತೆರಿಗೆಯನ್ನು ಪಾವತಿಸಿ ಆಸ್ತಿಯನ್ನು ಗಣಕೀಕರಿಸಿಕೊಳ್ಳಬೇಕೆಂದು ಬೀದರ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದರ ನಗರಸಭೆ ವ್ಯಾಪ್ತಿಯಲ್ಲಿ ಕಟ್ಟಡಗಳು/ನಿವೇಶನಗಳನ್ನು ಹೊಂದಿರುವ ಆಸ್ತಿ ಮಾಲೀಕರಿಗೆ/ಅನುಭೋಗದಾರರು ನಗರಸಭೆ ವ್ಯಾಪ್ತಿಯೊಳಗೆ ಬರುವ ಸರ್ಕಾರಿ ಜಾಗ/ಅರೆಸರ್ಕಾರಿ/ ಸ್ಥಳೀಯ ಸಂಸ್ಥೆಗಳ


ಆಸ್ತಿಯನ್ನು ಗಣಕೀಕರಿಸಿಕೊಳ್ಳಲು ನಮೂನೆ-3/ನಮೂನೆ-3ಎ ಗಳನ್ನು ಪಡೆದುಕೊಂಡು ನೋಂದಾಯಿತ ಕಛೇರಿಯಲ್ಲಿ ಕ್ರಯ ಪತ್ರ/ ದಾನ ಪತ್ರ/ವಿಭಾಗ ಪತ್ರ/ಹಕ್ಕು ಖುಲಾಸೆ ಹಾಗೂ ಇತರೆ ದಾಖಲೆ ಪತ್ರಗಳನ್ನು ನೋಂದಣಿ ಮಾಡಿಸಿಕೊಂಡು ಸದುಪಯೋಗ ಮಾಡಿಕೊಳ್ಳುವ ಅವಕಾಶ ಪಡೆಯಬಹುದಾಗಿರುತ್ತದೆ. ತಪ್ಪಿದಲ್ಲಿ ಸಂಬಂಧಪಟ್ಟ ಆಸ್ತಿ ಮಾಲೀಕರುಗಳಿಗೆ ನಿಯಮ 104 ರಂತೆ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಯಪಡಿಸಿದೆ.

ಸರ್ಕಾರದ ಅಧೀನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ,ಬೆಂಗಳೂರುರವರ ಅಂತಿಮ ಅಧಿಸೂಚನೆಯಂತೆ ನಗರಸಭೆ ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಕಟ್ಟಡ/ನಿವೇಶನಗಳಿಗೆ ಆಸ್ತಿ ತೆರಿಗೆ ನಿರ್ಧರಣೆಗೊಳಿಸಿ ಆಸ್ತಿ ತೆರಿಗೆಯನ್ನು 2024-25ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಅವಶ್ಯಕ ದಾಖಲಾತಿಗಳನ್ನು ಪಡೆದು, ಕರ್ನಾಟಕ ಪೌರಸಭೆಗಳ ಅಧಿನಿಯಮದ 1964 ರ ಸೆಕ್ಷನ್ 106(1ಬಿ)(ii) ಅನ್ವಯ Register-A  ರಲ್ಲಿ (ನಮೂನೆ-3) ಅಧಿಕೃತ ಸ್ವತ್ತುಗಳು ಹಾಗೂ Register-B  ರಲ್ಲಿ (ನಮೂನೆ-3ಂ) ಅನಧಿಕೃತ ಸ್ವತ್ತುಗಳ ಮಾಹಿತಿಯುಳ್ಳ ವಹಿಯನ್ನು ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು/ಕಂದಾಯಾಧಿಕಾರಿ/ಕಂದಾಯ ಶಾಖೆಯ ಸಿಬ್ಬಂದಿರವರ ಮೋಬೈಲ್ ಸಂಖ್ಯೆ: 990152134, 789282968,8861656948,9036587772 ಗೆ ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

8 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

8 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

8 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

11 hours ago