ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಸೇರಿದಂತೆ ಬೆಂಗಳೂರು, ಮೈಸೂರು ಭಾಗಗಳಿಗೂ ಮಳೆಯ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಗದಗ, ಚಿತ್ರದುರ್ಗ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಹಾವೇರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿದೆ.
ಕರಾವಳಿಯಲ್ಲಿ ಗಂಟೆಗೆ 40 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರ ಪ್ರದೇಶಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಮತ್ತು ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30 ರಿಂದ 40 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ.
ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 11 ಸೆಂಟಿ ಮೀಟರ್, ಮಂಗಳೂರು ವಿಮಾನ ನಿಲ್ದಾಣದಲ್ಲಿ 9, ಉಡುಪಿ 8, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಭಟ್ಕಳ, ಶಕ್ತಿನಗರ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ವಿಜಯಪುರದ ಬಿ.ಬಾಗೇವಾಡಿಯಲ್ಲಿ ತಲಾ 7 ಸೆಂ. ಮೀ ಮಳೆ ದಾಖಲಾಗಿದೆ.