ಬೀದರ.06.ಫೆಬ್ರುವರಿ.25:-ಜಿಲ್ಲಾ ವಕೀಲರ ಸಂಘ, ಬೀದರ ಮತ್ತು ಕಾರ್ಮಿಕ ಇಲಾಖೆ, ಬೀದರ ಇವರುಗಳ ಸಂಯುಕ್ತಾಶ್ರಯದಲ್ಲಿ ಫೆಬ್ರುವರಿ.7 ರಂದು ಬೆಳಿಗ್ಗೆ 10.30 ಗಂಟೆಗೆ ಬೀದರನ ಅಂಬೇಡ್ಕರ ವೃತ್ತದ ಹತ್ತಿರದ ಸವಿತಾ ಭವನದಲ್ಲಿ ಬಾಲಕಾರ್ಮಿಕ ನಿರ್ಮೂಲನಾ ಅಭಿಯಾನ ಹಾಗೂ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಬೀದರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಅರ್ಜುನ ಬನಸೊಡೆ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀದರ ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕಾಧಿಕಾರಿಗಳಾದ ಮಹೇಶ ಲಕ್ಷö್ಮಣ ಕುಳಲಿ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೀದರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಶಿವಶರಣಪ್ಪ ಪಾಟೀಲ್, ಕಾರ್ಯದರ್ಶಿಗಳಾದ ನಾಗೇಂದ್ರ ಬಿರಾದರ, ಬೀದರ ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕರಾದ ಕೆ.ಸುವರ್ಣ ಹಾಗೂ ಉಪನ್ಯಾಸಕರಾಗಿ ರೇಣುಕಾ ಜೋಪಾಟಿ, ಬೀದರ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ಅರ್ಜುನ ಸಿತಾಳಗೇರಾ ಅವರು ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…