16 ಡಿಸೆಂಬರ್24 ಬೀದರ್:- ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ ಹಾಗೂ ಬಿ.ವ್ಹಿ. ಭೂಮರೆಡ್ಡಿ ಮಹಾವಿದ್ಯಾಲಯ ಬೀದರ, ಜಿಲ್ಲಾ ವಿಜ್ಞಾನ ಸಮಿತಿ ಬೀದರ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಬಿ.ವ್ಹಿ.ಭೂಮರೆಡ್ಡಿ ಮಹಾವಿದ್ಯಾಲಯ ಸಭಾಂಗಣ ಬೀದರದಲ್ಲಿ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಆಯೋಜಿಸಲಾಗಿದೆ.
ಬೀದರ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು (ಡ್ಯಾಪ್ಕೊ) ಹಾಗೂ ಬೀದರ ಬ್ರೀಮ್ಸ್ ಕ್ಷಯರೋಗ ನೋಡಲ್ ಅಧಿಕಾರಿ ಡಾ.ಅನೀಲಕುಮಾರ ಚಿಂತಾಮಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸದಸ್ಯರು ಆಡಳಿತ ಮಂಡಳಿ ಹಾಗೂ ಬೀದರ ಬಿ.ವ್ಹಿಬಿ.ಶಾಲಾ ಕಾಲೇಜುಗಳ ಸಂಚಾಲಕರಾದ ಡಾ.ರಜನೀಶ ವಾಲಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಬೀದರ ಬ್ರಿಮ್ನ್ಸ ಕ್ಷಯರೋಗ ತಜ್ಞರಾದ ಡಾ.ಸತೀಶ ಮುಡಬಿ ಅವರು ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಶಿವಶಂಕರ ಭತಮುರ್ಗೆ, ಬೀದರ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ.ಶಿವಶಂಕರ ಬೊಮ್ಮಾ, ಬೀದರ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕಿರಣ ಪಾಟೀಲ, ಬೀದರ ಎನ್.ಕೆ.ಜಾಬಶೆಟ್ಟಿ ಆಯುರ್ವೇದಿಕ ಕಾಲೇಜಿನ ಉಪನ್ಯಾಸಕರಾದ ಡಾ.ವಿನೋದ ಬೋರಾಳೆ, ಬೀದರ ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ, ಬೀದರ ಬಿ.ವ್ಹಿ.ಭೂಮರೆಡ್ಡಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಪಿ.ವಿಠಲ ರಡ್ಡಿ ವಹಿಸಲಿದ್ದಾರೆ.
ಕಾರ್ಯಕ್ರಮದ ಸ್ವಾಗತವನ್ನು ದೇವಿಪ್ರಸಾದ ಕಲಾಲ, ನಿರೂಪಣೆಯನ್ನು ಬೀದರ ಕನ್ನಡ ವಿಭಾಗ ಬಿ.ವಿ.ಬಿ. ಮುಖ್ಯಸ್ಥರಾದ ರೇಣುಕಾ ಮಳ್ಳಿ, ವಂದನಾರ್ಪಣೆ ಬೀದರ ಬಿ.ವಿ.ಬಿ. ಉಪ ಪ್ರಾಚಾರ್ಯರು ಅನೀಲಕುಮಾರ ಆಣದೂರೆ ಮಾಡಲಿದ್ದಾರೆ.
ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ…
* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…
ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…
ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…
ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…
ಶಿವಮೊಗ್ಗ.14.ಜೂನ್.25:- ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…